BMTC Good News: ಮೆಜೆಸ್ಟಿಕ್-ನೆಲಮಂಗಲ ನಡುವೆ ಬಿಎಂಟಿಸಿ ವಜ್ರ ಬಸ್ ಸೇವೆ ಆರಂಭ: ಇಲ್ಲಿದೆ ಮಾರ್ಗ, ಸಮಯಗಳ ವಿವರ
BMTC Good News: ರಾಜ್ಯ ರಾಜಧಾನಿ ಬೆಂಗಳೂರು ಜೀವನಾಡಿ ಆಗಿರುವ ಬಿಎಂಟಿಸಿ ಪ್ರಯಾಣಕರ ಅನುಕೂಲತೆಗೆ ತಕ್ಕಂತೆ ಆಗಾಗ ಹೊಸ ಮಾರ್ಗಗಳಲ್ಲಿ ಬಸ್ ಸೇವೆಗಳನ್ನು ಒದಗಿಸುತ್ತಲೇ ಬಂದಿದೆ. ಹಾಗೆಯೇ ಇದೀಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ನವೆಂಬರ್ 3 ಸೋಮವಾರದಿಂದ ಈ ಮಾರ್ಗಗಳಲ್ಲಿ 6 ಹೊಸ ಹವಾನಿಯಂತ್ರಿತ ಎಲೆಕ್ಟ್ರಿಕ್ ವಜ್ರ ಬಸ್ಗಳು ಓಡಿಸಲು ನಿರ್ಧಾರ ಮಾಡಿದೆ. ಹಾಗಾದ್ರೆ, ಎಲ್ಲೆಲ್ಲಿಗೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಒಂದು ದಿನ ಇಲ್ಲ ಅಂದ್ರೆ, ನಗರದ ಜನರಿಗೆ ತುಂಬಾ ಸಮಸ್ಯೆಯಾಗುವುದಂತೂ ಖಂಡಿತ. ಪ್ರತಿನಿತ್ಯ ಏನಿಲ್ಲ ಅಂದ್ರೂ ಲಕ್ಷಾಂತರ ಜನ ಪ್ರಯಾಣ ಮಾಡುತ್ತಾರೆ. ಇದೀಗ ಪ್ರಯಾಣಿಕರಿಗೆ ಬಿಎಂಟಿಸಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಹೊಸ ಮಾರ್ಗದಲ್ಲಿ ಎಕ್ಸ್ಪ್ರೆಸ್ ಬಸ್ ಸೇವೆಯನ್ನು ಆರಂಭಿಸಲು ನಿರ್ಧರಿಸಿದೆ.

ಮೆಜೆಸ್ಟಿಕ್ನಿಂದ ನೆಲಮಂಗಲ ನಡುವೆ 6 ಹೊಸ ಹವಾನಿಯಂತ್ರಿತ ಎಲೆಕ್ಟ್ರಿಕ್ ವಜ್ರ ಬಸ್ಗಳು ನವೆಂಬರ್ 3 ರಿಂದ ಸಂಚಾರ ಮಾಡಲಿವೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮೆಜೆಸ್ಟಿಕ್-ನೆಲಮಂಗಲ ನಡುವೆ ಹೊಸ ಮಾರ್ಗ ಆರಂಭಿಸಲಾಗಿದೆ. 30 ನಿಮಿಷ ಅಂತರದಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ಬಸ್ಗಳು ಸಂಚರಿಸಲಿವೆ ಎಂದು ಬಿಎಂಟಿಸಿ ಮಾಹಿತಿ ನೀಡಿದೆ.
ಎಲ್ಲಿಂದ ಎಲ್ಲಿಗೆ ಸಂಚಾರ?
* ಕೆಂಪೇಗೌಡ ಬಸ್ ನಿಲ್ದಾಣ - ನೆಲಮಂಗಲ ಬಸ್ ನಿಲ್ದಾಣ
* ಮಾರ್ಗ ಸಂಖ್ಯೆ - ವಿ 258 ಸಿ
* ಬಸ್ ಮಾದರಿ - ನೂತನ ಹವಾನಿಯಂತ್ರಿತ ಎಲೆಕ್ಟ್ರಿಕ್ ವಜ್ರ ಬಸ್
ಇನ್ನೂ ಬಸ್ಗಳು ಸೆಂಟ್ರಲ್ ಟಾಕೀಸ್, ಮಲ್ಲೇಶ್ವರ 8ನೇ ಕ್ರಾಸ್, ಗೋವರ್ಧನ ಟಾಕೀಸ್, ಗೊರಗುಂಟೆಪಾಳ್ಯ, ಅರಶಿನಕುಂಟೆಯಲ್ಲಿ ನಿಲುಗಡೆ ಆಗಲಿವೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಬೆಳಗ್ಗೆ 6, 6.40, 7.10, 7.40, 8.20, 8.50, 9.30, 10.05, 10.35, 11.05, 12.05, ಮಧ್ಯಾಹ್ನ 1.05, 2.40, 3.30, ಸಂಜೆ 4.00, 4.30, 5.00, 5.30, 6.00, 6.50, 7.40, ರಾತ್ರಿ 8.40ಕ್ಕೆ ಹೊರಡಲಿದೆ.
ಮಾರ್ಗ ನೆಲಮಂಗಲ ಬಸ್ ನಿಲ್ದಾಣದಿಂದ ಬೆಳಗ್ಗೆ 7.35, 8.10, 8.45, 9.15, 9.55, 10.25, 11.10, 11.40, ಮಧ್ಯಾಹ್ನ 12.10, 12.40, 2.00, 3.00, ಸಂಜೆ 4.20, 5.05, 5.35, 6.05, 6.35, 7.10, ರಾತ್ರಿ 8.00, 8.40, 9.20, 10 ಗಂಟೆಗೆ ಹೊರಡಲಿದೆ. ಹೀಗೆ ಬಿಎಂಟಿಸಿ ನಗರದ ಪ್ರಯಾಣಿಕೆ ಅನುಕೂಲಕ್ಕೆ ತಕ್ಕಂತೆ ಆಗಾಗ ಹೊಸ ಮಾರ್ಗಗಳಲ್ಲಿ ಬಸ್ ಸೇವೆಯನ್ನು ಕಲ್ಪಿಸುತ್ತಲೇ ಬಂದಿದೆ. ಇದರಿಂದ ಪ್ರಯಾಣಿಕರಿಗೆ ತುಂಬಾ ಅನುಕೂಲ ಆಗುತ್ತಿದೆ. ಇನ್ನೂ ಸಹ ಕೆಲವೆಡೆ ಹೆಚ್ಚುವರಿ ಬಸ್ಗಳನ್ನು ಬಿಡುವಂತೆ ಆಗ್ರಹಗಳು ಕೇಳಿಬರುತ್ತಲೇ ಇವೆ. ಇವುಗಳನ್ನು ಬಿಎಂಟಿಸಿ ನಿಭಾಯಿಸುತ್ತಲೇ ಇದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications