BMTC: ಅಧಿಕಾರಿಗಳ ಸಹಿ ನಕಲು, 3 ವರ್ಷದಲ್ಲಿ 7ಬಾರಿ ವಂಚನೆ, 8ಮಂದಿ ಆರೋಪಿಗಳು, ₹1 ಕೋಟಿ ನಷ್ಟ
ಬೆಂಗಳೂರು, ಜುಲೈ 31: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ವ್ಯಾಪ್ತಿಯಲ್ಲಿನ ವಿವಿಧ ಯೋಜನೆಗಳ ಟೆಂಡರ್ಗಳಲ್ಲಿ ಕೆಲವರಿಗೆ ಅನುಕೂಲ ಮಾಡಿಕೊಡಲು ನಿಗಮ ವ್ಯವಸ್ಥಾಪಕ ನಿರ್ದೇಶಕರು, ನಿರ್ದೇಶಕರು ಮತ್ತು ಇತರ ಹಿರಿಯ ಅಧಿಕಾರಿಗಳ ಸಹಿಯನ್ನು ಸುಮಾರು ಎಂಟು ಮಂದಿ ನಕಲು ಮಾಡಿದ್ದಾರೆ. ಹಣ ಲಪಟಾಯಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.
ಹಿರಿಯ ಅಧಿಕಾರಿಗಳ ಸಹಿ ನಕಲು ಮಾಡಿರುವ ಈ ಅಧಿಕಾರಿಗಳು ವಾಣಿಜ್ಯ ಸ್ಥಳಗಳ ಬಾಡಿಗೆ ಗುತ್ತಿಗೆ ಮಂಜೂರು ಮತ್ತು ವಿಸ್ತರಣೆ ಮಾಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಸುಮಾರು 1 ಕೋಟಿ ರೂಪಾಯಿಯಷ್ಟು ಹಣವನ್ನು ಇವರು ಸರ್ಕಾರಕ್ಕೆ ನಷ್ಟ ಮಾಡಿದ್ದಾರೆಂದು ಆರೋಪಿಸಲಾಗಿದೆ ಎಂದು TOI ವರದಿ ಮಾಡಿದೆ.

ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ನಿಯೋಜನೆಗೊಂಡಿದ್ದ ಪಾಲಿಕೆ ಕಾರ್ಯದರ್ಶಿ, ವಿಭಾಗೀಯ ಸಂಚಾರಿ ಅಧಿಕಾರಿ ಹಾಗೂ ಇತರರು ಈ ಅಕ್ರಮ ವೆಸಗಿದ್ದು, ಆರೋಪಿ ಸ್ಥಾನದಲ್ಲಿದ್ದಾರೆ. ಪ್ರಕರಣ ಸಂಬಂಧ ಶಾಂತಿನಗರದ ಕೇಂದ್ರ ಕಚೇರಿಯ ಬಿಎಂಟಿಸಿಯ ಸಹಾಯಕ ಭದ್ರತಾ ಮತ್ತು ಜಾಗೃತ ಅಧಿಕಾರಿ ರಮ್ಯಾ ಅವರು ದೂರು ನೀಡಿದ್ದಾರೆ.
ಒಟ್ಟು ಏಳು ವಂಚನೆಗಳು ನಡೆದಿವೆ
ಈ ದೂರಿನ ಆಧಾರದಲ್ಲಿ ವಿಲ್ಸನ್ ಗಾರ್ಡನ್ ಪೊಲೀಸರು ಎರಡು ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮೊದಲ ಪ್ರಕರಣವು 4 ವಂಚನೆಗಳಿಗೆ ಸಂಬಂಧಿಸಿದ್ದಾಗಿದ್ದು, ಎರಡನೇ ಪ್ರಕರಣ ಮೂರು ವಂಚನೆಗಳಿಗೆ ಸಂಬಂಧಿಸಿದೆ ಎಂದು ತಿಳಿದು ಬಂದಿದೆ.
ಆರೋಪಿಗಳು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಕಾರ್ಯದರ್ಶಿ ಶ್ರೀರಾಮ್ ಮುಲ್ಕಾವನ್ ಅಧಿಕಾರಿಯು ಹಗರಣ ನಡೆದಾಗ ಬಿಎಂಟಿಸಿಯಲ್ಲಿ ಮುಖ್ಯ ಸಂಚಾರ ನಿಯಂತ್ರಕರಾಗಿ ಕೆಲಸ ಮಾಡುತ್ತಿದ್ದರು. ಶಾಮಲಾ ಮದ್ದೋಡಿ, ವಿಭಾಗೀಯ ಸಂಚಾರಿ ಅಧಿಕಾರಿ ಡಾ. ಸಹಾಯಕ ಸಂಚಾರ ವ್ಯವಸ್ಥಾಪಕ ಮಮತಾ ಬಿ.ಕೆ. ಗುಣಶೀಲ, ಸಹಾಯಕ ಸಂಚಾರ ಅಧೀಕ್ಷಕಿ ಅನಿತಾ ಟಿ. ಸತೀಶ್, ಸಂಚಾರ ನಿರೀಕ್ಷಕರಾದ ಗೋಪಿ ಮತ್ತು ಕಿರಿಯ ಸಹಾಯಕ ಪ್ರಕಾಶ ಕೊಪ್ಪಳ ಅವರು ಆಪಾದಿತರು.

ಈ ಮೂರು ವರ್ಷ ನಡೆದ ವಂಚನೆ
ಈ ಆರೋಪಿಗಳು 2020 ಮಾರ್ಚ್ 9 ರಂದು ಹಾಗೂ 2023ರ ಜುಲೈ 27ವರೆಗಿನ ಅವಧಿಯಲ್ಲಿ ನಿಗಮಕ್ಕೆ ವಂಚನೆ ಮಾಡಿದ್ದಾರೆ ಎಂದು ದೂರುದಾರರು ತಿಳಿಸಿದ್ದಾರೆ. ಜೊತೆಗೆ ಐಎಎಸ್ ಅಧಿಕಾರಿಗಳಾದ ಅನ್ಬು ಕುಮಾರ್, ಡಾ ರೇಜು ಕುಮಾರ್ ಮತ್ತು ಶಿಖಾ ಅವರು ಸಹಿ ಸಹ ನಕಲು ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
ಇದೇ ವರ್ಷ ಜನವರಿ ಸಹಿ ನಕಲು (ಫೋರ್ಜರಿ) ಪ್ರಕರಣ ಬೆಳಕಿಗೆ ಬಂದಿದ್ದು, ದೂರಿನ ಮೇರೆಗೆ ಪೊಲೀಸರು ಎಲ್ಲ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಒಟ್ಟು ಏಳು ವಂಚನೆಯ ಘಟನೆ ನಡೆದಿವೆ. ಆರೋಪಿಗಳು ಒಟ್ಟು ಸುಮಾರು ಒಂದು ಕೋಟಿ ರೂಪಾಯಿಯಷ್ಟು ಹಣವನ್ನು ಬಿಎಂಟಿಸಿಗೆ ನಷ್ಟ ಮಾಡಿದ್ದಾರೆ ಎಂದು ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ತನಿಖೆ ಪ್ರಾಥಮಿಕ ಹಂತದಲ್ಲಿದ್ದು, ಎಲ್ಲ ಪ್ರಕರಣಗಳ ದಾಖಲೆ ಪರಿಶಿಲಿಸಲಾಗುತ್ತಿದೆ. ಅಗತ್ಯಗನುಗುಣವಾಗಿ ಆರೋಪಿಗಳ ವಿಚಾರಣೆ ಮಾಡಲಾಗುವುದು. ನಂತರವಷ್ಟೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಆರೋಪಿಗಳ ವಿರುದ್ಧ IPC 420 (ವಂಚನೆ ಮತ್ತು ಅಪ್ರಾಮಾಣಿಕತೆ), IPC 465 (ನಕಲಿ), IPC 468 (ವಂಚನೆಯ ಉದ್ದೇಶಕ್ಕಾಗಿ ನಕಲಿ), IPC 471 (ನಕಲಿ ಎಂದು ಬಳಸಿ), ಮತ್ತು IPC 408 (ಕ್ರಿಮಿನಲ್ ನಂಬಿಕೆಯ ಉಲ್ಲಂಘನೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications