BMTC Bus: ಬಿಎಂಟಿಸಿ ಬಸ್ನಲ್ಲಿ ಕಾಣಿಸಿಕೊಂಡ ನಾಗರಾಜ-ಹೌಹಾರಿದ ಪ್ರಯಾಣಿಕರು
BMTC Bus: ರಾಜ್ಯ ರಾಜಧಾನಿ ಬೆಂಗಳೂರಿನ ಜನರ ಜೀವನಾಡಿ ಸಾರಿಗೆಗಳಲ್ಲೊಂದಾದ ಬಿಎಂಟಿಸಿ ಬಸ್ ಆಗಾಗ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಹಾಗೆಯೇ ಇದೀಗ ಬಿಎಂಟಿಸಿ ಬಸ್ ಹಿಂಬದಿಯ ಗ್ಲಾಸ್ನಲ್ಲಿ ನಾಗರ ಹಾವು ಕಾಣಿಸಿಕೊಂಡಿದ್ದರು, ಇದನ್ನು ಕಂಡ ಪ್ರಯಾಣಿಕರು ಹೌಹಾರಿದ್ದಾರೆ. ಹಾಗಾದರೆ ಈ ಘಟನೆ ನಡೆದಿದ್ದು ಎಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬಿಎಂಟಿಸಿ ಹಿಂಬದಿ ಗ್ಲಾಸ್ನಲ್ಲಿ ಸಿಲುಕಿಕೊಂಡಿದ್ದ ನಾಗರ ಹಾವನ್ನು ಬಸ್ನ ಹಿಂಬದಿ ಬರುತ್ತಿದ್ದ ಕ್ಯಾಂಟರ್ ಚಾಲಕ ನೋಡಿಕೊಂಡಿದ್ದಾನೆ. ಬಳಿಕ ಪ್ರಯಾಣಿಕರು ನೋಡಿ ಭಯಗೊಂಡಿದ್ದಾರೆ. ಡಿಪೋ 29 ಕೆ.ಆರ್ ಪುರಂ ಮಾರ್ಗದ ಎಲೆಕ್ಟ್ರಿಕಲ್ ಬಸ್ನಲ್ಲಿ ಹಾವು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಇನ್ನು ಚಾಲಕ ಈ ವಿಷಯ ತಿಳಿಯುತ್ತುದ್ದಂತೆ ಬಸ್ ನಿಲ್ಲಿಸಿದ್ದು, ಬಳಿಕ ಗಾಬರಿಗೊಂಡ ಪ್ರಯಾಣಿಕರು ಬಸ್ನಿಂದ ಕೆಲಗಡೆ ಇಳಿದಿದ್ದಾರೆ. ನಂತರ ಸಿಲುಕಿದ್ದ ನಾಗರಾಜನನ್ನು ರಕ್ಷಣೆ ಮಾಡಲಾಗಿದೆ. ಮತ್ತೊಂದೆಡೆ ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಕೆ.ಆರ್ ಮಾರ್ಕೆಟ್ನಿಂದ ಕೆ.ಆರ್ ಪುರಂಗೆ ಸುಮಾರು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಸ್ ಬಂದಿದ್ದು, ಆಗ ಮತ್ತೆ ಡಿಪೋದಲ್ಲಿ ಬಸ್ ಪರಿಶೀಲಿಸಲಾಗಿದೆ ಎನ್ನಲಾಗುತ್ತಿದೆ.
ವಿಶೇಷ ರೈಲು ಸೇವೆ ವಿಸ್ತರಣೆ: ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ರೈಲ್ವೇ ಇಲಾಖೆ ವಿಶೇಷ ರೈಲುಗಳನ್ನು ಬಿಡುತ್ತಲೇ ಬಂದಿದೆ. ಇನ್ನೂ ಇದೀಗ ಗಣೇಶ ಹಬ್ಬ ಹಿನ್ನೆಲೆ ಊರಿಗೆ ಹೊರಡುವ ಹಾಗೂ ಹಬ್ಬ ಮುಗಿದ ಬಳಿಕ ಮತ್ತೆ ಬೆಂಗಳೂರಿಗೆ ವಾಪಸ್ ಆಗುವವರ ಸಂಖ್ಯೆ ಸಾಮಾನ್ಯ ದಿನಗಳಿಗಿಂತಲೂ ಹೆಚ್ಚಿರುತ್ತದೆ. ಆದ್ದರಿಂದ ವಿಶೇಷ ರೈಲು ಸೇವೆಯನ್ನು ವಿಸ್ತರಣೆ ಮಾಡಿದೆ. ಮಾಹಿತಿ ಇಲ್ಲಿದೆ ತಿಳಿಯಿರಿ.
ಎರ್ನಾಕುಲಂ-ಯಲಹಂಕ ನಡುವೆ ವಾರಕ್ಕೆ 3 ದಿನ ಸಂಚರಿಸುತ್ತಿದ್ದ ವಿಶೇಷ ರೈಲ ಸೇವೆಯನ್ನು ಸೆಪ್ಟೆಂಬರ್ 19ರ ವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ಸೆಪ್ಟೆಂಬರ್ 7ರ ವರೆಗೆ ರೈಲು ಸಂಚರಿಸಲಿದೆ ಎಂದು ಈ ಹಿಂದೆ ತಿಳಿಸಿತ್ತು. ಇದೀಗ ಮತ್ತೆ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಿದಲು ಈ ಸೇವೆಯನ್ನು ವಿಸ್ತರಣೆ ಮಾಡಿದೆ.
ರೈಲು ಸಂಖ್ಯೆ 06101/06102 ಎರ್ನಾಕುಲಂ ಯಲಹಂಕ ಎರ್ನಾಕುಲಂ ಗರೀಬ್ ರಥ್ ಸೂಪರ್ ಫಾಸ್ಟ್ ವೀಕ್ಲಿ ಎಕ್ಸ್ಪ್ರೆಸ್ ರೈಲಿನ ಸೇವೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಟ್ವೀಟ್ ಮೂಲಕ ಭಾರತೀಯ ರೈಲ್ವೆ ಮಾಹಿತಿ ನೀಡಿದೆ.
ಎರ್ನಾಕುಲಂ ಯಲಹಂಕ ಗರೀಬ್ ರಥ್ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ಸೆಪ್ಟೆಂಬರ್ 8, 11, 13, 15 ಹಾಗೂ 18ರಂದು ಸಂಚರಿಸಲಿದೆ. ಯಲಹಂಕ ಎರ್ನಾಕುಲಂ ಗರೀಬ್ ರಥ್ ಸೂಪರ್ ಪಾಸ್ಟ್ ಎಕ್ಸ್ಪ್ರೆಸ್ ಸೆಪ್ಟೆಂಬರ್ 9, 12, 14, 16, 19ರಂದು ಓಡಲಿದೆ ಎಂದು ಟ್ವೀಟ್ನಲ್ಲಿ ತಿಳಿಸಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications