BMTC UPI Payment: ಯುಪಿಐ ಪಾವತಿ ಬಗ್ಗೆ ಕಂಡಕ್ಟರ್ಗಳಿಗೆ ಬಿಎಂಟಿಸಿ ಕಟ್ಟುನಿಟ್ಟಿನ ಸೂಚನೆ
BMTC UPI Payment: ಬೆಂಗಳೂರು ಜೀವನಾಡಿ ಸಾರಿಗೆಗಳಲ್ಲಿ ಬಿಎಂಟಿಸಿ ಕೂಡ ಒಂದಾಗಿದೆ. ಈ ಸಾರಿಗೆಯಲ್ಲಿ ನಗದು ಇಲ್ಲದೆ, ಯುಪಿಐ ಮೂಲಕ ಪಾವತಿ ಮಾಡಲು ಬಿಎಂಟಿಸಿ ಅವಕಾಶ ಕಲ್ಪಿಸಿಕೊಟ್ಟಿತ್ತು. ಆದರೆ, ಪ್ರಯಾಣಿಕರು ಇದರಲ್ಲಿ ಪಾವತಿ ಮಾಡಲು ಹೋದರೆ ಕಂಡಕ್ಟರ್ಗಳು ಹಣ ಕೊಡಿ ಎಂದು ಕೇಳಿತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದವು. ಬಳಿಕ ಎಚ್ಚೆತ್ತ ಬಿಎಂಟಿಸಿ ಈ ಕುರಿತು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
ಬಿಎಂಟಿಸಿ ಬಸ್ಗಳಲ್ಲಿ ಕಂಡಕ್ಟರ್ಗಳು ಯುಪಿಐ ಪಾವತಿಯನ್ನು ನಿರಾಕರಿಸಿ ನಗದು ಪಾವತಿ ಮಾಡುವಂತೆ ಒತ್ತಾಯ ಮಾಡುತ್ತಿದ್ದಾರೆ. ರಂದು ಪ್ರಯಾಣಿಕರು ಆರೋಪ ಮಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಬಿಎಂಟಿಸಿ ಕಂಡಕ್ಟರ್ಗಳಿಗೆ ಯುಪಿಐ ಪಾವತಿ ಸ್ವೀಕರಿಸಲು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಹಲವು ಸಾಮಾನ್ಯ ಬಿಎಂಟಿಸಿ ಬಸ್ಗಳಲ್ಲಿ, ಅದರಲ್ಲೂ ವಿಶೇಷವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗದ ಹಾಗೂ ನಗರದ ಟೆಕ್ ಕಾರಿಡಾರ್ಗಳಲ್ಲಿ ಸಂಚರಿಸುವ ಬಸ್ಗಳಲ್ಲಿ ಸ್ಥಿರ ಯುಪಿಐ ಕ್ಯೂಆರ್ ಕೋಡ್ಗಳನ್ನು ಅಂಟಿಸಲಾಗಿದೆ. ಆದರೂ ಈ ಮೂಲಕ ಪಾವತಿ ಮಾಡಿಕೊಳ್ಳಲು ಕಂಡಕ್ಟರ್ಗಳು ನಿರಾಕಸುತ್ತಿದ್ದಾರೆ ಎನ್ನುವುದು ಪ್ರಯಾಣಿಕರ ಆರೋಪವಾಗಿದೆ.
ಕೆಲಸಕ್ಕಾಗಿ ಪ್ರತಿನಿತ್ಯ ಪ್ರಯಾಣಿಸುವ ಪ್ರಯಾಣಿಕರು, ಕೆಲವು ಬಸ್ಗಳಲ್ಲಿ ನಾವು ಪ್ರತಿ ಬಾರಿ ಹತ್ತುವಾಗವೂ ಸರಿಯಾಗಿ ಚಿಲ್ಲರೆ ಹಣ ನೀಡಲು ಸಾಧ್ಯವಿಲ್ಲ. ಆದ್ದರಿಂದ ಯುಪಿಐ ಪಾವತಿ ಅತ್ಯಗತ್ಯ ಆಗಿವೆ. ಕಂಡಕ್ಟರ್ಗಳು ಯುಪಿಐ ಪಾವತಿಗಳನ್ನು ನಿರಾಕರಿಸಿದರೆ, ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಹಗ್ರಹಿಸಿದ್ದರು.
ನಮ್ಮ ಸುಮಾರು ಶೇಕಡ 10ರಷ್ಟು ಬಸ್ಗಳನ್ನು ಹೊರತುಪಡಿಸಿ, ಎಲ್ಲಾ ಬಸ್ಗಳು ಬಸ್ ಪ್ಯಾನೆಲ್ಗಳಲ್ಲಿ ಸ್ಥಿರ ಕ್ಯೂಆರ್ ಕೋಡ್ಗಳನ್ನು ಹೊಂದಿವೆ. ಪ್ರಯಾಣಿಕರು ಕೋಡ್ ಅನ್ನು ಸ್ಕ್ಯಾನ್ ಮಾಡಿ ಮೊತ್ತವನ್ನು ಪಾವತಿಸಬಹುದು. ಬಳಿಕ ಟಿಕೆಟ್ ನೀಡಲಾಗುತ್ತದೆ ಎಂದು ಬಿಎಂಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕ ಜಿ.ಟಿ.ಪ್ರಭಾಕರ್ ರೆಡ್ಡಿ ಅವರು ತಿಳಿಸಿದ್ದಾರೆ.
ಕ್ಯೂಆರ್ ಕೋಡ್ಗಳ ಜೊತೆ ಹ್ಯಾಂಡ್ಹೆಲ್ಡ್ ಎಲೆಕ್ಟ್ರಾನಿಕ್ ಟಿಕೆಟ್ ವೆಂಡ್ಡಿಂಗ್ ಯಂತ್ರಗಳು ಕೂಡ ಡೈನಾಮಿಕ್ ಕ್ಯೂಆರ್ ಕೋಡ್ಗಳನ್ನು ನೀಡುತ್ತವೆ. ಪ್ರಯಾಣಿಕರು ಸ್ಕ್ಯಾನ್ ಮಾಡಲು ಮತ್ತು ಪಾವತಿ ಮಾಡಲು ಡೈನಾಮಿಕ್ ಕ್ಯೂಆರ್ ಕೋಡ್ ಅನ್ನು ಬಳಕೆ ಮಾಡಬಹುದು ಎಂದು ವಿವರಣೆ ನೀಡಿದರು.
ಈ ಕ್ರಮ ಆರಂಭಿಸಿದಾಗಿನಿಂದ, ಯುಪಿಐ ವಹಿವಾಟುಗಳು ಗಮನಾರ್ಹವಾಗಿ ಹೆಚ್ಚಳ ಆಗಿದೆ. ಈ ಹಿಂದೆ, ದೈನಂದಿನ 3 ಕೋಟಿ ರೂಪಾಯಿ ಆದಾಯದಲ್ಲಿ ಕೇವಲ 20-25 ಲಕ್ಷ ರೂಪಾಯಿ ಯುಪಿಐ ಪಾವತಿಗಳಿಂದ ಬರುತ್ತಿತ್ತು. ಈಗ ಅದು 60 ಲಕ್ಷ ರೂಪಾಯಿಗಳನ್ನು ದಾಟಿದೆ ಎಂದು ಹೇಳಿದರು.
ಬಿಎಂಟಿಸಿ ಶೀಘ್ರದಲ್ಲೇ ದೈನಂದಿನ ಯುಪಿಐ ವಹಿವಾಟುಗಳಲ್ಲಿ 1 ಕೋಟಿ ರೂಪಾಯಿಗಳನ್ನು ತಲುಪುವ ಗುರಿ ಹೊಂದಿದೆ. ಪ್ರಯಾಣಿಕರು ತಮ್ಮ ಆದ್ಯತೆಯ ಪಾವತಿ ವಿಧಾನವನ್ನು ಆಯ್ಕೆ ಮಾಡಲು ಮುಕ್ತರಾಗಿದ್ದಾರೆ ಹಾಗೂ ಕಂಡಕ್ಟರ್ಗಳು ಇನ್ಮುಂದೆ ಯುಪಿಐ ಪಾವತಿಗಳನ್ನು ನಿರಾಕರಿಸುವಂತಿಲ್ಲ ಎಂದು ಸೂಚಿಸಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications