ಬಿಎಂಟಿಸಿ ವಾಯು ವಜ್ರ ಬಸ್ಸಿನಲ್ಲಿ ಸೀಟು ಕಾಯ್ದಿರಿಸಿ!
Recommended Video

ಬೆಂಗಳೂರು, ಸೆಪ್ಟೆಂಬರ್ 15 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮತ್ತಷ್ಟು ಪ್ರಯಾಣಿಕ ಸ್ನೇಹಿಯಾಗಲು ಸಿದ್ಧತೆ ನಡೆಸಿದೆ. ವಾಯುವಜ್ರ ಬಸ್ಸುಗಳಲ್ಲಿ ಸೀಟು ಕಾಯ್ದಿರಿಸುವ ವ್ಯವಸ್ಥೆಯನ್ನು ಜಾರಿಗೆ ತರಲು ಸಂಸ್ಥೆ ಚಿಂತನೆ ನಡೆಸಿದೆ.
ನಗರದ ವಿವಿಧ ಬಡಾವಣೆಗಳಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಿಎಂಟಿಸಿಯ 90 ವಾಯು ವಜ್ರ ಬಸ್ಸುಗಳು ಸಂಚಾರ ನಡೆಸುತ್ತವೆ. ಆದರೆ, ಓಲಾ, ಊಬರ್ ಮುಂತಾದ ಟ್ಯಾಕ್ಸಿ ಸೇವೆಗಳಿಂದಾಗಿ ಸಂಸ್ಥೆಗೆ ಭಾರೀ ಪೈಫೋಟಿ ಎದುರಾಗಿದೆ.

ಕ್ಯಾಬ್ ಗಳು ಮನೆ ಬಾಗಿಲಿಗೆ ಹೋಗಿ ಪ್ರಯಾಣಿಕರನ್ನು ವಿಮಾನ ನಿಲ್ದಾಣಕ್ಕೆ ಕರೆದುಕೊಂಡು ಹೋಗುತ್ತವೆ. ಆದ್ದರಿಂದ, ಜನರು ಕ್ಯಾಬ್ ಮೊರೆ ಹೋಗುತ್ತಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಎಂಟಿಸಿ, ವಾಯು ವಜ್ರ ಬಸ್ಸುಗಳಲ್ಲಿ ಮುಂಗಡವಾಗಿ ಸೀಟು ಕಾಯ್ದಿರಿಸುವ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ.
ಈ ಯೋಜನೆಯ ತಯಾರಿ ಇನ್ನೂ ಪ್ರಥಮ ಹಂತದಲ್ಲಿದೆ. 2015ರಲ್ಲಿ ಬಿಎಂಟಿಸಿ ಮೊಬೈಲ್ ಅಪ್ಲಿಕೇಷನ್ ಬಿಡುಗಡೆ ಮಾಡಲಾಗಿದೆ. ಇದರ ಮೂಲಕವೇ ಸೀಟು ಕಾಯ್ದಿರುವ ವ್ಯವಸ್ಥೆಯನ್ನು ಜಾರಿಗೆ ತರಲು ಬಿಎಂಟಿಸಿ ನಿರ್ಧರಿಸಿದ್ದು, ಈ ಕುರಿತ ಯೋಜನೆ ಸಿದ್ಧವಾಗುತ್ತಿದೆ.
ವಿಮಾನ ನಿಲ್ದಾಣಕ್ಕೆ ಸಂಚಾರ ನಡೆಸುವ ಕ್ಯಾಬ್ಗಳು ಗ್ರಾಹಕರಿಗೆ ವಿವಿಧ ಆಫರ್ ನೀಡುತ್ತಿವೆ. ಬಿಎಂಟಿಸಿಯೂ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡುವ ಪ್ರಯಾಣಿಕರಿಗೆ ಪ್ರಯಾಣ ದರದಲ್ಲಿ ರಿಯಾಯಿತಿ ನೀಡಲು ಚಿಂತನೆ ನಡೆಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಕರ್ನಾಟಕದಲ್ಲಿ ಜೀವ ಬಲಿ ಪಡೆಯುತ್ತಿರುವ ಖಾಸಗಿ ಬಸ್ಗಳು: 6 ವರ್ಷಗಳಲ್ಲಿ 3,823 ಅಪಘಾತ ಪ್ರಕರಣಗಳು ವರದಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್












Click it and Unblock the Notifications