ಬಿಎಂಟಿಸಿ ಬಸ್ಸಿನ ಕ್ಷಣ-ಕ್ಷಣದ ಮಾಹಿತಿ ಇನ್ನು ಲಭ್ಯ
ಬೆಂಗಳೂರು, ಜು. 1 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ಸಿನಲ್ಲಿ ಸಂಚರಿಸುವ ಜನರಿಗೆ ಇನ್ನು ಬಸ್ಸು ಎಷ್ಟುಹೊತ್ತಿಗೆ ಬರುತ್ತದೆ ಎಂದು ಕಾಯುವ ಅಗತ್ಯವಿಲ್ಲ. ನಿಲ್ದಾಣಕ್ಕೆ ಬಸ್ ಎಷ್ಟು ಹೊತ್ತಿಗೆ ಬರುತ್ತದೆ ಎಂಬ ಮಾಹಿತಿ ನಿಮಗೆ ಅಲ್ಲಿ ಲಭ್ಯವಾಗುತ್ತದೆ. ಅಕ್ಟೋಬರ್ ನಿಂದ ಈ ವ್ಯವಸ್ಥೆ ಜಾರಿಗೆ ಬರಲಿದೆ.
ಇಂಟಲಿಜೆಂಟ್ ಟ್ರಾನ್ಸ್ಪೋರ್ಟ್ ಸಿಸ್ಟಮ್ ಮೂಲಕ ಜನರಿಗೆ ಬಸ್ಸಿನ ಆಗಮನ ಮತ್ತು ನಿರ್ಗಮನದ ಬಗ್ಗೆ ಮಾಹಿತಿ ಒದಗಿಸುವ ಸೇವೆಯನ್ನು ಬಿಎಂಟಿಸಿ ಅಕ್ಟೋಬರ್ 31ರಿಂದ ಆರಂಭಿಸಿಲಿದೆ. ನೀವು ಬಸ್ಸಿಗಾಗಿ ಕಾಯುತ್ತ ನಿಂತಿರುವ ನಿಲ್ದಾಣದಲ್ಲಿಯೇ ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಬಸ್ ನಿಲ್ದಾಣಕ್ಕೆ ಎಷ್ಟು ಹೊತ್ತಿಗೆ ಆಗಮಿಸಲಿದೆ ಎಂಬ ಮಾಹಿತಿ ಲಭ್ಯವಾಗಲಿದೆ.

ಬಿಎಂಟಿಸಿಯ ಮಾಹಿತಿ ತಂತ್ರಜ್ಞಾನ ವಿಭಾಗದ ನಿರ್ದೇಶಕರಾದ ಕುಮಾರ ಪುಷ್ಕರ್ ಈ ಕುರಿತು ಮಾಹಿತಿ ನೀಡಿದ್ದು, ಸಂಸ್ಥೆಯ ಎಲ್ಲಾ ಬಸ್ಸುಗಳಿಗೂ ಜಿಪಿಎಸ್ ತಂತ್ರಜ್ಞಾನ ಅಳವಡಿಸಲಾಗುತ್ತದೆ. ಇದರಿಂದಾಗಿ ಬಸ್ ಎಲ್ಲಿದೆ?, ಎಷ್ಟು ಹೊತ್ತಿಗೆ ನಿಲ್ದಾಣಕ್ಕೆ ಬರುತ್ತದೆ? ಮುಂತಾದ ಮಾಹಿತಿಗಳನ್ನು ಕ್ಷಣ-ಕ್ಷಣಕ್ಕೂ ಸಂಗ್ರಹಿಸಿ ಪ್ರಯಾಣಿಕರಿಗೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ. [ಪ್ರಯಾಣಿಕ ಸ್ನೇಹಿಯಾಗಲು ಬಿಎಂಟಿಸಿ ಸಿದ್ಧತೆ]
ಮೊದಲ ಹಂತದಲ್ಲಿ ಟಿಟಿಎಂಸಿ ನಿಲ್ದಾಣಗಳಲ್ಲಿರುವ ಟಿವಿಗಳಲ್ಲಿ ಈ ಮಾಹಿತಿ ಲಭ್ಯವಾಗುವಂತೆ ಯೋಜನೆ ರೂಪಿಸಲಾಗಿದೆ. 35 ಬಸ್ ನಿಲ್ದಾಣಗಳಲ್ಲಿ ಟಿವಿ ಆಳವಡಿಕೆ ಕಾರ್ಯ ಪೂರ್ಣಗೊಂಡಿದೆ ಎಂದು ಅವರು ತಿಳಿಸಿದರು. ಯೋಜನೆ ಜಾರಿಯಾದ ಬಳಿಕ ಪ್ರಯಾಣಿಕರು ಸ್ಮಾರ್ಟ್ ಫೋನ್ ಮೂಲಕ ಬಸ್ಸಿನ ಮಾಹಿತಿ ಪಡೆಯಬಹುದಾಗಿದೆ ಅದಕ್ಕಾಗಿ ಮೊಬೈಲ್ ಆಪ್ಲಿಕೇಷನ್ ಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದರು. [ಬಿಎಂಟಿಸಿ ಪ್ರಯಾಣ ಮಾಹಿತಿಗೆ ಕಿಯೋಸ್ಕ್]
ಇದರಿಂದಾಗಿ ಸಂಸ್ಥೆಯ 6,700 ಬಸ್ಸುಗಳನ್ನು ಬಗ್ಗೆ ಮಾಹಿತಿ ಪಡೆಯಲು ಸಹಾಯಕವಾಗಲಿದೆ. ಟ್ರಾಫಿಕ್ ಜಾಮ್ ಉಂಟಾದಾಗ ಬಸ್ಸು ನಿಲ್ದಾಣ ತಲುಪುವ ಬಗ್ಗೆ ನಿಖರ ಮಾಹಿತಿ ಪ್ರಯಾಣಿಕರಿಗೆ ನಿಲ್ದಾಣದಲ್ಲಿ ಲಭ್ಯವಾಗಲಿದೆ. ಬಸ್ಸುಗಳು ಡಿಪೋದಿಂದ ಹೊರಟ ತಕ್ಷಣ ಅವುಗಳ ಕ್ಷಣ ಕ್ಷಣದ ಮಾಹಿತಿ ಇದರಿಂದ ಲಭ್ಯವಾಗಲಿದೆ ಎಂದು ಹೇಳಿದರು.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ











Click it and Unblock the Notifications