ನಗದು ರಹಿತ ಪ್ರಯಾಣಕ್ಕಾಗಿ ಬಿಎಂಟಿಸಿ ಸ್ಮಾರ್ಟ್ ಕಾರ್ಡ್!
ಬೆಂಗಳೂರು, ಡಿಸೆಂಬರ್ 28 : ಬಿಎಂಟಿಸಿ ಬಸ್ ಗಳಲ್ಲಿ ನಗದುರಹಿತ ಪ್ರಯಾಣಕ್ಕೆ ಬಿಎಂಟಿಸಿ ಮೊದಲ ಹೆಜ್ಜೆ ಇರಿಸಿದೆ. 335 ಇ ಮಾರ್ಗಕ್ಕೆ ಅನ್ವಯವಾಗುವಂತೆ ನಿಗಮ ಸ್ಮಾರ್ಟ್ ಕಾರ್ಡ್ ವಿತರಣೆ ಪ್ರಾರಂಭಿಸಿದೆ.
ಮೊದಲ ದಿನ 21 ಜನ ಕಾರ್ಡ್ ಖರೀದಿಸಿದ್ದು, . ಕೆಂಪೇಗೌಡ ಬಸ್ ನಿಲ್ದಾಣ, ದೊಮ್ಮಲೂರು ಟಿಟಿಎಂಸಿ ಮತ್ತು ಐಟಿಪಿಎಲ್ ಟಿಟಿಎಂಸಿಗಳಲ್ಲಿ ಸ್ಮಾರ್ಟ್ ಕಾರ್ಡ್ ವಿತರಣಾ ಕೇಂದ್ರವನ್ನು ನಿಗಮ ತೆರೆದಿದೆ. ಮೊದಲ ದಿನವಾದ ಕಾರಣ ಕೆಲವೇ ಪ್ರಯಾಣಿಕರು ಕಾರ್ಡ್ ಖರೀದಿದ್ದಾರೆ.

ಪ್ರಯಾಣಿಕರು 25 ರೂ. ಪಾವತಿಸಿ ಸ್ಮಾರ್ಟ್ ಕಾರ್ಡ್ ಖರೀದಿಸಬೇಕು. ಈ ಸ್ಮಾರ್ಟ್ ಕಾರ್ಡ್ 3 ವರ್ಷದ ಮಾನ್ಯತೆ ಹೊಂದಿದ್ದು, ತಿಂಗಳಿಗೆ ಗರಿಷ್ಠ 10 ಸಾವಿರ ರೂ, ರೀಚಾರ್ಜ್ ಮಾಡಿಕೊಳ್ಳಬಹುದಾಗಿದೆ. ಆಕ್ಸಿಸ್ ಬ್ಯಾಂಕ್ ಸಹಯೋಗದಲ್ಲಿ ಬಿಎಂಟಿಸಿ ಇ-ಪರ್ಸ್ ವ್ಯವಸ್ಥೆ ಜಾರಿಗೆ ತಂದಿದೆ.
ಇದಕ್ಕಾಗಿ ನಿಗಮಕ್ಕೆ ಪ್ರತಿ ವರ್ಷ 1 ಕೋಟಿ ರೂ. ಹಣವನ್ನು ಆಕ್ಸಿಸ್ ಬ್ಯಾಂಕ್ ನೀಡಲಿದೆ. ಇ-ಪರ್ಸ್ ಗಳನ್ನು ಬಿಎಂಟಿಸಿ ಬಸ್ ಗಳಲ್ಲಿ ಮಾತ್ರವಲ್ಲದೆ ಶಾಪಿಂಗ್ ಗೂ ಬಳಸಬಹುದಾಗಿದೆ.ಈ ರೀತಿ ಬಳಸಿದಲ್ಲಿ ಒಂದಿಷ್ಟು ಹಣ ಆಕ್ಸಿಸ್ ಬ್ಯಾಂಕ್ ನೀಡಲಿದೆ.

ಅಕ್ಟೋಬರ್ ವೇಳೆಗೆ ಎಲ್ಲ ನಿಲ್ದಾಣಗಳಲ್ಲೂ ಸ್ಮಾರ್ಟ್ ಕಾರ್ಡ್ ಲಭ್ಯ ವಾಗಬೇಕಿತ್ತು ಆದರೆ ಕಾರಣಾಂತರಗಳಿಂದ ಸಾದ್ಯವಾಗಿಲ್ಲ. ಇದೀಗ ಒಂದು ಮಾರ್ಗದಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಲಾಗಿದೆ. ಏಪ್ರಿಲ್ ಮೇ ನಲ್ಲಿ ಎಲ್ಲ ಬಸ್ ಗಳಲ್ಲೂ ಯೋಜನೆ ಪ್ರಾರಂಭಿಸುವ ನಿರೀಕ್ಷೆ ಇದೆ.
ಒಂದು ತಿಂಗಳ ಪ್ರಾಯೋಗಿಕ ಪರೀಕ್ಷೆ ಬಳಿಕ ಬಿಎಂಟಿಸಿ ಎಲ್ಲ ಹವಾನಿಯಂತ್ರಿತ ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಸ್ಮಾರ್ಟ್ ಕಾರ್ಡ್ ಲಭ್ಯವಾಗಲಿದೆ. ಪ್ರಯಾಣಿಕರ ದಟ್ಟಣೆ ನಿರ್ವಾಹಕ ಸ್ಮಾರ್ಟ್ ಕಾರ್ಡ್ ಬಳಸಿ ಟಿಕೆಟ್ ನೀಡಲು ತೆಗೆದುಕೊಳ್ಳುವ ಸಮಯ ಮುಂತಾದವುಗಳನ್ನು ಪರೀಕ್ಷಿಸಲು ಎಸಿ ಬಸ್ ಜತೆಗೆ ಒಂದು ಮಾರ್ಗದ ಸಾಮಾನ್ಯ ಬಸ್ ಒಂದರಲ್ಲೂ ಸ್ಮಾರ್ಟ್ ಕಾರ್ಡ್ ನೀಡಲಿದ್ದೇವೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಪೊನ್ನುರಾಜ್ ತಿಳಿಸಿದ್ದಾರೆ.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications