ಟಿಕೇಟ್ ದರ ಇಳಿಕೆ: ಬಿಎಂಟಿಸಿ ವೋಲ್ವೋಗೆ ನಿರೀಕ್ಷೆಗೂ ಮೀರಿ ಆದಾಯ
ಬೆಂಗಳೂರು, ಜನವರಿ 16: ಬಿಎಂಟಿಸಿ ವೋಲ್ವೋ ಬಸ್ ಇದೀಗ ನಿಗಮಕ್ಕೆ ಆದಾಯ ಹೊತ್ತು ತರುತ್ತಿದೆ. ಜನವರಿ 1 ರಿಂದ ವೋಲ್ವೋ ಬಸ್ ಟಿಕೇಟ್ ದರ ಕಡಿತಗೊಳಿಸಿರುವ ಹಿನ್ನೆಲೆಯಲ್ಲಿ ಕಳೆದ ಎಂಟು ದಿನಗಳಲ್ಲಿ ನಿರೀಕ್ಷೆಗೂ ಮೀರಿ ಆದಾಯ ಬಂದಿದೆ.
ಸುಮಾರು 25 ಲಕ್ಷ ರೂ ಹೆಚ್ಚುವರಿ ಆದಾಯ ಬಂದಿದೆ. ಟಿಕೇಟ್ ದರ ಇಳಿಕೆಯಿಂದ ವೋಲ್ವೋ ಬಸ್ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದ, ಆದಾಯದಲ್ಲೂ ಹೆಚ್ಚಳವಾಗಿದೆ. ವಜ್ರ ಬಸ್ ಗಳಲ್ಲಿ ಕನಿಷ್ಠ 15 ರೂ ಯಿಂದ ಗರಿಷ್ಠ 45 ರೂ ವರೆಗೂ ಟಿಕೇಟ್ ದರ ಕಡಿತವಾಗಿದೆ.
ಪ್ತಯಾಣಿಕರ ಸಂಖ್ಯೆ ಏರಿಕೆ: ಬಿಎಂಟಿಸಿ ನಗರದಲ್ಲಿ ನಿತ್ಯ 650 ವೋಲ್ವೋ ಬಸ್ ಗಳನ್ನು ಕಾರ್ಯಾಚರಣೆ ಮಾಡುತ್ತಿದೆ. ಈ ಪೈಕಿ 110 ಬಸ್ ಗಳು ನಗರ ನಾನಾ ಭಾಗಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಚರಿಸುತ್ತಿದೆ.

ಟಿಕೇಟ್ ದರ ಕಡಿತಕ್ಕೂ ಮುನ್ನ ವೋಲ್ವೋ ಬಸ್ ಗಳಲ್ಲಿ ನಿತ್ಯ 58 ಸಾವಿರ ಮಂದಿ ಪ್ರಯಾಣಿಕರು ಸಂಚರಸುತ್ತಿದ್ದರು. ದರ ಇಳಿಕೆ ಬಳಿಕ ಈ ಸಂಖ್ಯೆ 84 ಸಾವಿರಕ್ಕೆ ಏರಿಕೆಯಾಗಿದೆ. ಈ ಮೂಲಕ 25 ಸಾವಿರ ಮಂದಿ ಸಾರ್ವಜನಿಕರು ಹೊಸದಾಗಿ ವೋಲ್ವೋ ಬಸ್ ಪ್ರಯಾಣಿಕರಾಗಿ ಸೇರ್ಪಡೆಯಾಗಿದ್ದಾರೆ.
ಆದಾಯ ಹೆಚ್ಚಳ: ಟಿಖೇಟ್ ದರ ಇಳಿಕೆಗೂ ಹಿಂದಿನ ಎಂಟು ದಿನ 3.80 ಕೋಟಿ ಆದಾಯ ಬಂದಿತ್ತು. ಜನವರಿ 1 ರಿಂದ 8 ರವರೆಗೆ ಸುಮಾರು 4 ಕೋಟಿ ರೂ ಮಿಕ್ಕು ಆದಾಯ ಬಂದಿದೆ. ಈ ಮೂಲಕ ಆದಾಯದಲ್ಲಿ ಸುಮಾರು 25 ಲಕ್ಷ ಏರಿಕೆಯಾಗಿದೆ. ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ, ಐಟಿಪಿಎಲ್, ಕೆಐಎಎಲ್ ಮಾರ್ಗದ ಬಸ್ ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ












Click it and Unblock the Notifications