ಟಿಕೇಟ್ ದರ ಇಳಿಕೆ: ಬಿಎಂಟಿಸಿ ವೋಲ್ವೋಗೆ ನಿರೀಕ್ಷೆಗೂ ಮೀರಿ ಆದಾಯ
ಬೆಂಗಳೂರು, ಜನವರಿ 16: ಬಿಎಂಟಿಸಿ ವೋಲ್ವೋ ಬಸ್ ಇದೀಗ ನಿಗಮಕ್ಕೆ ಆದಾಯ ಹೊತ್ತು ತರುತ್ತಿದೆ. ಜನವರಿ 1 ರಿಂದ ವೋಲ್ವೋ ಬಸ್ ಟಿಕೇಟ್ ದರ ಕಡಿತಗೊಳಿಸಿರುವ ಹಿನ್ನೆಲೆಯಲ್ಲಿ ಕಳೆದ ಎಂಟು ದಿನಗಳಲ್ಲಿ ನಿರೀಕ್ಷೆಗೂ ಮೀರಿ ಆದಾಯ ಬಂದಿದೆ.
ಸುಮಾರು 25 ಲಕ್ಷ ರೂ ಹೆಚ್ಚುವರಿ ಆದಾಯ ಬಂದಿದೆ. ಟಿಕೇಟ್ ದರ ಇಳಿಕೆಯಿಂದ ವೋಲ್ವೋ ಬಸ್ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದ, ಆದಾಯದಲ್ಲೂ ಹೆಚ್ಚಳವಾಗಿದೆ. ವಜ್ರ ಬಸ್ ಗಳಲ್ಲಿ ಕನಿಷ್ಠ 15 ರೂ ಯಿಂದ ಗರಿಷ್ಠ 45 ರೂ ವರೆಗೂ ಟಿಕೇಟ್ ದರ ಕಡಿತವಾಗಿದೆ.
ಪ್ತಯಾಣಿಕರ ಸಂಖ್ಯೆ ಏರಿಕೆ: ಬಿಎಂಟಿಸಿ ನಗರದಲ್ಲಿ ನಿತ್ಯ 650 ವೋಲ್ವೋ ಬಸ್ ಗಳನ್ನು ಕಾರ್ಯಾಚರಣೆ ಮಾಡುತ್ತಿದೆ. ಈ ಪೈಕಿ 110 ಬಸ್ ಗಳು ನಗರ ನಾನಾ ಭಾಗಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಚರಿಸುತ್ತಿದೆ.

ಟಿಕೇಟ್ ದರ ಕಡಿತಕ್ಕೂ ಮುನ್ನ ವೋಲ್ವೋ ಬಸ್ ಗಳಲ್ಲಿ ನಿತ್ಯ 58 ಸಾವಿರ ಮಂದಿ ಪ್ರಯಾಣಿಕರು ಸಂಚರಸುತ್ತಿದ್ದರು. ದರ ಇಳಿಕೆ ಬಳಿಕ ಈ ಸಂಖ್ಯೆ 84 ಸಾವಿರಕ್ಕೆ ಏರಿಕೆಯಾಗಿದೆ. ಈ ಮೂಲಕ 25 ಸಾವಿರ ಮಂದಿ ಸಾರ್ವಜನಿಕರು ಹೊಸದಾಗಿ ವೋಲ್ವೋ ಬಸ್ ಪ್ರಯಾಣಿಕರಾಗಿ ಸೇರ್ಪಡೆಯಾಗಿದ್ದಾರೆ.
ಆದಾಯ ಹೆಚ್ಚಳ: ಟಿಖೇಟ್ ದರ ಇಳಿಕೆಗೂ ಹಿಂದಿನ ಎಂಟು ದಿನ 3.80 ಕೋಟಿ ಆದಾಯ ಬಂದಿತ್ತು. ಜನವರಿ 1 ರಿಂದ 8 ರವರೆಗೆ ಸುಮಾರು 4 ಕೋಟಿ ರೂ ಮಿಕ್ಕು ಆದಾಯ ಬಂದಿದೆ. ಈ ಮೂಲಕ ಆದಾಯದಲ್ಲಿ ಸುಮಾರು 25 ಲಕ್ಷ ಏರಿಕೆಯಾಗಿದೆ. ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ, ಐಟಿಪಿಎಲ್, ಕೆಐಎಎಲ್ ಮಾರ್ಗದ ಬಸ್ ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications