BMTC: ಸಿಲ್ಲಿ ಮ್ಯಾಟರ್ಗೆ ಬಿಎಂಟಿಸಿ ಬಸ್ನಲ್ಲಿ ಚಪ್ಪಲಿ, ಶೂಗಳಿಂದ ಬಡಿದಾಡಿಕೊಂಡ ಯುವತಿಯರು
ಬೆಂಗಳೂರು, ಫೆಬ್ರವರಿ, 08: ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ಗಳಲ್ಲಿ ಕಿಟಕಿ ಪಕ್ಕದ ಸೀಟ್ಗಾಗಿ ಹೊಡೆದಾಡಿಕೊಂಡ ಘಟನೆಗಳು ಹಲವೆಡೆ ನಡೆದಿವೆ. ಹಾಗೆಯೇ ಇದೀಗ ಯುವತಿಯರಿಬ್ಬರು ಬಿಎಂಟಿಸಿ ಬಸ್ನಲ್ಲಿ ಕಿಟಕಿ ತೆರೆಯುವ ವಿಚಾರಕ್ಕೆ ಚಪ್ಪಳಿ, ಶೂನಲ್ಲಿ ಬಡಿದಾಡಿಕೊಂಡ ವಿಚಿತ್ರ ಘಟನೆ ನಡೆದಿದ್ದು, ಈ ವಿಡಿಯೋ ಇದೀಗ ಭಾರೀ ವೈರಲ್ ಆಗುತ್ತಿದೆ.

ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮೆಜೆಸ್ಟಿಕ್ ಟು ಪೀಣ್ಯಾ ಬಸ್ನಲ್ಲಿ ಯುವತಿಯರಿಬ್ಬರು ಚಪ್ಪಲಿಯಲ್ಲಿ ಬಡಿದಾಡಿಕೊಂಡ ಘಟನೆ ನಡೆದಿದೆ.
Women slipper each other on a moving bus in Bengaluru!
— TOI Bengaluru (@TOIBengaluru) February 8, 2024
A verbal argument between two women passengers on BMTC bus, over sliding the window glass, took a serious turn when they started hitting each other with shoes.
(Source: Fwd) pic.twitter.com/keaSm6Y4WD
ಮೆಜೆಸ್ಟಿಕ್ನಿಂದ ಪೀಣ್ಯ ಕಡೆಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ಕಿಟಕಿ ತೆಗೆಯುವ ವಿಚಾರಕ್ಕೆ ಇಬ್ಬರು ಯುವತಿಯರು ಮಧ್ಯೆ ಕಿರಿಕ್ ಮಾಡಿಕೊಂಡಿದ್ದಾರೆ. ಈ ವೇಳೆ ಇಬ್ಬರೂ ಚಪ್ಪಲಿ, ಶೂ ನಿಂದ ಪರಸ್ಪರ ಹೊಡೆದಾಡಿಕೊಂಡಿರುವ ವಿಡಿಯೀವನ್ನು ಅಲ್ಲಿದ್ದ ಇನ್ನಿತರ ಪ್ರಯಾಣಿಕರು ತಮ್ಮ ಮೊಬೈಲ್ನಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲಾತಣಗಳಲ್ಲಿ ಹರಿದಾಡುತ್ತಿದೆ.
ವಿದ್ಯಾರ್ಥಿ ಮೇಲೆ ಹಲ್ಲೆ: ಇನ್ನು ಇತ್ತೀಚೆಗಷ್ಟೇ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ದಿಂಡವರ ಮಾರ್ಗದಿಂದ ಹಿರಿಯೂರು ಮಾರ್ಗವಾಗಿ ಬರುವ ಖಾಸಗಿ ಬಸ್ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು.
ಸಣ್ಣ ವಿಚಾರಕ್ಕೆ ವಿದ್ಯಾರ್ಥಿ ಹಾಗೂ ಪ್ರಯಾಣಿಕರ ಮಧ್ಯೆ ಜಗಳವಾಗಿದ್ದು, ಈ ಸಂಬಂಧ ವಿದ್ಯಾರ್ಥಿ ಶಿವರಾಜ್ (17) ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿತ್ತು.
ಹಲ್ಲೆ ನಡೆಸಿದ್ದು ಯಾರು?: ಆದಿವಾಲ ಭೋವಿ ಕಾಲೋನಿಯ ತಿರುಮಲ ನಗರದ ಯೋಗಿ ಮತ್ತು ಸುಧಾಕರ್ ಹಾಗೂ ಇವರ ಸ್ನೇಹಿತರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ನಡು ರಸ್ತೆಯಲ್ಲೆ ಖಾಸಗಿ ಬಸ್ ನಿಲ್ಲಿಸಿ ವಿದ್ಯಾರ್ಥಿ ಶಿವರಾಜ್ ಮೇಲೆ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದರು. ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ನು ಪೊಲೀಸರು ಕ್ರಮ ಕೈಗೊಳ್ಳುವಂತೆ ಪೋಷಕರು ಒತ್ತಾಯಿಸಿದ್ದರು.
-
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Bengaluru BMTC: ಡ್ರೈವರ್ ಸಾಹೇಬ್ರೆ ಶಾಲಾ ಮಕ್ಕಳು ಕಾಣಿಸಿದರೆ ಬಸ್ ನಿಲ್ಲಿಸಿ: ಕಂಡಕ್ಟರ್ ವಿಡಿಯೋ ವೈರಲ್ -
BMTC ಬಸ್ಗಳಲ್ಲಿ ಟಿಕೆಟ್ ಇಲ್ಲದೆ ಓಡಾಡುವವರೇ ಎಚ್ಚರ! ಫೆಬ್ರವರಿಯಲ್ಲೇ 5 ಲಕ್ಷ ರೂ.ದಂಡ ವಸೂಲಿ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು












Click it and Unblock the Notifications