ಬೆಂಗಳೂರಿನ ಪ್ರಥಮ ಪ್ರಜೆಯಾಗಿ ಮಂಜುನಾಥ ರೆಡ್ಡಿ ಆಯ್ಕೆ
ಬೆಂಗಳೂರು, ಸೆ.11 : ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಡಿವಾಳ ವಾರ್ಡ್ ಕಾಂಗ್ರೆಸ್ ಸದಸ್ಯ ಮತ್ತು ಸಚಿವ ರಾಮಲಿಂಗಾ ರೆಡ್ಡಿ ಅವರ ಪರಮಾಪ್ತರಾದ ಬಿ.ಎನ್.ಮಂಜುನಾಥ ರೆಡ್ಡಿ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ಶುಕ್ರವಾರ ಬಿಬಿಎಂಪಿ ಪಾಲಿಕೆ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತೆ ಎಂ.ವಿ.ಜಯಂತಿ, ಬಿಬಿಎಂಪಿ ಆಯುಕ್ತ ಕುಮಾರ್ ನಾಯಕ್, ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ.ಶಂಕರ್ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ 131 ಮತಗಳನ್ನು ಪಡೆದ ಮಂಜುನಾಥ ರೆಡ್ಡಿ ಅವರು ಮೇಯರ್ ಚುನಾವಣೆಯಲ್ಲಿ ಜಯಗಳಿಸಿದರು. [ಮೇಯರ್ ಚುನಾವಣೆ ಕ್ಷಣ-ಕ್ಷಣದ ಮಾಹಿತಿ]

1996, 2010 ಮತ್ತು 2015ರಲ್ಲಿ ಸೇರಿ ಒಟ್ಟು ಮೂರು ಬಾರಿ ಬಿಬಿಎಂಪಿ ಸದಸ್ಯರಾಗಿ ಆಯ್ಕೆಯಾಗಿರುವ ಬಿ.ಎನ್.ಮಂಜುನಾಥ ರೆಡ್ಡಿ ಅವರು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಅವರ ಪರಮಾಪ್ತರು. ಬಿಬಿಎಂಪಿಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. [ಮಂಜುನಾಥ ರೆಡ್ಡಿ ಸಂಕ್ಷಿಪ್ತ ಪರಿಚಯ]
ಬಿಜೆಪಿ ಪರವಾಗಿ ಕಾಡು ಮಲ್ಲೇಶ್ವರ ವಾರ್ಡ್ ಬಿಜೆಪಿ ಸದಸ್ಯ ಮಂಜುನಾಥ ರಾಜು ಅವರು ಮೇಯರ್ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದರು. ಒಟ್ಟು 260 ಸದಸ್ಯರಿಗೆ ಬಿಬಿಎಂಪಿ ಮೇಯರ್ ಆಯ್ಕೆ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶವಿತ್ತು. ರಾಜ್ಯಸಭಾ ಸದಸ್ಯ ವಿಜಯ್ ಮಲ್ಯ ಹೊರತುಪಡಿಸಿ 259 ಸದಸ್ಯರು ಇಂದಿನ ಚುನಾವಣೆಯಲ್ಲಿ ಪಾಲ್ಗೊಂಡಿದ್ದರು.
2015ರ ಚುನಾವಣೆಯಲ್ಲಿ ಬಿ.ಎನ್.ಮಂಜುನಾಥ ರೆಡ್ಡಿ ಅವರು ಮಡಿವಾಳ ವಾರ್ಡ್ನಲ್ಲಿ 6573 ಮತಗಳನ್ನು ಪಡೆದು ಬಿಜೆಪಿಯ ಬಾಬು ಅವರ ವಿರುದ್ಧ ಜಯಗಳಿಸಿದ್ದರು. 2010ರ ಚುನಾವಣೆಯಲ್ಲಿಯೂ ಇದೇ ಕ್ಷೇತ್ರದಲ್ಲಿ ಅವರು ಗೆಲುವು ಸಾಧಿಸಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications