ರಾಜೀವ್ ಗೌಡರಿಂದ ಪರಿಸರ ಜಾಗೃತಿಗಾಗಿ ಶಿಬಿರ
ಬೆಂಗಳೂರು, ಮೇ 9 : ಬೆಂಗಳೂರಿನ ಯುವಕರದಲ್ಲಿ ಪರಿಸರ, ಅಭಿವೃದ್ಧಿ ಮುಂತಾದ ವಿಚಾರಗಳ ಕುರಿತು ಅರಿವು ಮೂಡಿಸಲು ಐಐಎಂ ಪ್ರೊ.ರಾಜೀವ್ ಗೌಡ ಅವರ ನೇತೃತ್ವದ ಬೆಂಗಳೂರು ನೀಡ್ಸ್ ಯೂ ಸಂಸ್ಥೆಯಿಂದ Environmental Action Internship ಹಮ್ಮಿಕೊಳ್ಳಲಾಗಿದೆ.ಎರಡು ವಾರಗಳ ಈ ತರಬೇತಿ ಶಿಬಿರಕ್ಕೆ ಮೇ 12ರಂದು ಚಾಲನೆ ದೊರೆಯಲಿದೆ.
ಎರಡು ವಾರಗಳ ಶಿಬಿರದಲ್ಲಿ ಸಂಪನ್ಮೂಲ ನಿರ್ವಹಣೆ, ಪರಿಸರ ನೀತಿ, ಜೀವವೈವಿದ್ಯ ಮುಂತಾದ ವಿಚಾರಗಳ ಕುರಿತು ಯುವಕರಿಗೆ ಮಾಹಿತಿ ನೀಡಲಾಗುತ್ತದೆ. ಬೆಂಗಳೂರಿನಂತಹ ಮಹಾನಗರಗಳು ಎದುರಿಸುತ್ತಿರುವ ಪರಿಸರ ಸಮಸ್ಯೆಗಳನ್ನು ಯುವಕರಿಗೆ ತಿಳಿಸಿಕೊಡುವುದು ಈ ಶಿಬಿರದ ಉದ್ದೇಶವಾಗಿದೆ. [ಬೆಂಗಳೂರಿನಲ್ಲಿರುವುದು 14 ಲಕ್ಷ ಮರಗಳು ಮಾತ್ರ]

Bengaluru Needs You ಇಂತಹ ಶಿಬಿರವನ್ನು ನಡೆಸುವ ಮೂಲಕ ಯುವಕರನ್ನು ಜಾಗೃತಗೊಳಿಸಿ, ನಗರದ ಪರಿಸರ ಸಂರಕ್ಷಿಸುವ ಹೋರಾಟದಲ್ಲಿ ಅವರನ್ನು ಸಕ್ರಿಯವಾಗಿ ತೊಡಗುವಂತೆ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಕೇವಲ ಪರಿಸರ ಪ್ರಿಯರಿಗೆ ಮಾತ್ರ ಸೀಮಿತವಾಗಿಲ್ಲ. ನಗರದ ಬಗ್ಗೆ ಕಾಳಜಿ ಇರುವ ಇತರರು ಶಿಬಿರದಲ್ಲಿ ಭಾಗವಹಿಸಿ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲು ಮುಕ್ತ ಅವಕಾಶ ಕಲ್ಪಿಸಲಾಗಿದೆ.
ತರಬೇತಿ ಶಿಬಿರ ವಿವಿಧ ವಿಚಾರಗಳ ಚಿಂತನ-ಮಂಥನ ಮತ್ತು ಪ್ರಾಯೋಗಿಕ ಕಲಿಕೆಯಿಂದ ಕೂಡಿರುತ್ತದೆ. ಪ್ರಾಯೋಗಿಕ ಕಲಿಕೆಯಲ್ಲಿ ನಗರದ ತಾಜ್ಯ ವಿಲೇವಾರಿ, ಜೀವ ವೈವಿದ್ಯ, ಕೆರೆಗಳ ಸಂರಕ್ಷಣೆ ಮುಂತಾದ ಸಮಸ್ಯೆಗಳ ಬಗ್ಗೆ ಕಲಿಯಲು ಅವಕಾಶವಿದೆ.
ಈ ಶಿಬಿರಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗಿದ್ದು, 17 ವರ್ಷ ಮೇಲ್ಪಟ್ಟ ಎಲ್ಲಾ ಆಸಕ್ತರು ಶಿಬಿರದಲ್ಲಿ ಭಾಗವಹಿಸಬುದಾಗಿದೆ. ಶಿಬಿರದಲ್ಲಿ ಭಾಗವಹಿಸಲು ಇಚ್ಚಿಸುವವರು http://bit.ly/PNtvnp. ಭೇಟಿ ನೀಡಿ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿ ನೀಡಬಹುದಾಗಿದೆ. ಅರ್ಜಿ ಸಲ್ಲಿಸಿದವರಿಗೆ ಮಾಹಿತಿಯನ್ನು ಈ ಮೇಲ್ ಮೂಲಕ ಕಳಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ www.facebook.com/BengaluruNeedsYou ಅಥವ ಶೃತಿ ವಿನೋದ್ 9980156262 ನಂಬರ್ ಗೆ ಕರೆ ಮಾಡಬಹುದಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications