ರಾಜ್ಯದಲ್ಲಿ 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಎಕ್ಸಾಂ, ಸಂಪೂರ್ಣ ಮಾಹಿತಿ ತಿಳಿಯಿರಿ
ಬೆಂಗಳೂರು, ಸೆಪ್ಟೆಂಬರ್, 23: ಮಕ್ಕಳ ಕಲಿಕಾ ದೃಷ್ಟಿಯಿಂದ ಕಲಿಕಾ ಬಲವರ್ಧನೆ ಮಾಡಲು 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಈ ಹಿಂದೆ 5 ಮತ್ತು 8ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆ ಮಾಡಿ ಶಿಕ್ಷಣ ಇಲಾಖೆ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಹಲವರ ವಿರೋಧದ ಮಧ್ಯೆಯೇ ಈಗ 9 ಮತ್ತು 11ನೇ ತರಗತಿ ಮಕ್ಕಳಿಗೆ ಪಬ್ಲಿಕ್ ಎಕ್ಸಾಂ ನಡೆಸುವ ತಯಾರಿಯಲ್ಲಿ ಶಿಕ್ಷಣ ಇಲಾಖೆ ಇದೆ.
ಮಕ್ಕಳ ಕಲಿಕಾ ದೃಷ್ಟಿಯಿಂದ 9ನೇ ತರಗತಿ ಮಕ್ಕಳಿಗೆ ಸಂಕಲಾನತ್ಮಕ ಮೌಲ್ಯ ಮಾಪನ ಪರೀಕ್ಷೆ ನಡೆಸುತ್ತಿದ್ದು, 11ನೇ ತರಗತಿ ಮಕ್ಕಳಿಗೆ ವಾರ್ಷಿಕ ಪರೀಕ್ಷೆ ನಡೆಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಸದ್ಯ ಕಳೆದ ವರ್ಷವಷ್ಟೇ 5 ಮತ್ತು 8ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಪರೀಕ್ಷೆ ಮಾಡಿದ್ದ ಶಿಕ್ಷಣ ಇಲಾಖೆ , ಆ ಬೆನ್ನಲ್ಲೇ ಈಗ ಸಾಕಷ್ಟು ವಿರೋಧಗಳ ಮಧ್ಯೆಯೇ ಈ ವರ್ಷ 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಸೂಚನೆ ಕೊಟ್ಟಿದೆ.

ಪ್ರಸಕ್ತ ಸಾಲಿನಲ್ಲಿ 2023/24ನೇ ಸಾಲಿನಲ್ಲಿಯೇ ಈ ನಿಯಮ ಜಾರಿ ಮಾಡುವ ಬಗ್ಗೆ ಶಿಕ್ಷಣ ಇಲಾಖೆ ಸೂಚನೆ ಕೊಟ್ಟಿದೆ. ಈ ಹಿನ್ನಲೆ ರಾಜ್ಯ ಪಠ್ಯಕ್ರಮ ಅನುಸರಿಸುವ ಎಲ್ಲಾ ಅನುದಾನಿತ, ಸರ್ಕಾರಿ ಹಾಗೂ ಅನುದಾನ ರಹಿತ ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ತಯಾರಿ ನಡೆಸಲು ಆದೇಶ ಕೊಟ್ಟಿದೆ.
ಇನ್ನೂ ಪ್ರಥಮ ಪಿಯುಸಿ ಪಬ್ಲಿಕ್ ಪರೀಕ್ಷೆ ದ್ವೀತಿಯ ಪಿಯು ಪರೀಕ್ಷೆಗಿಂತ ಕೊಂಚ ಭಿನ್ನವಾಗಿದೆ. ಪ್ರಥಮ, ದ್ವೀತಿಯ ಪಿಯು ಪರೀಕ್ಷೆ ಪ್ರಮುಖ ವ್ಯತ್ಯಾಸ ಏನಪ್ಪಾ ಅಂತ ಕೇಳಿದ್ರೆ ದ್ವಿತೀಯ ಪಿಯುಸಿಯಲ್ಲಿ ಪರೀಕ್ಷಾ ಮೌಲ್ಯ ಮಾಪನ ಬೇರೆ ಕಡೆ ನಡೆಯುತ್ತದೆ. ಆದರೆ ಪ್ರಥಮ ಪಿಯು ಪರೀಕ್ಷೆ ಮೌಲ್ಯಮಾಪನ ಆಯಾ ಕಾಲೇಜುಗಳಲ್ಲಿ ನಡೆಯುತ್ತದೆ.
ದ್ವೀತಿಯ ಪಿಯು ಪರೀಕ್ಷೆಯಲ್ಲಿ ಇರುವ ಹಾಗೇ ಮೇಲ್ವಿಚಾರಕರು ಪ್ರಥಮ ಪಿಯು ಅಲ್ಲಿಯೂ ಇರುತ್ತಾರೆ. ದ್ವೀತಿಯ ಪಿಯು ಪರೀಕ್ಷೆ ಹಾಗೆಯೇ ಇಲ್ಲಿಯೂ ಪರೀಕ್ಷಾ ಪ್ರಕ್ರಿಯೆ ನಡೆಯುತ್ತದೆ. ಪ್ರಶ್ನೆ ಪತ್ರಿಕೆಯನ್ನು ಇಲ್ಲಿಯೂ ಕೂಡ ಪಿಯು ಬೋರ್ಡ್ನಿಂದಲೇ ಕಳುಹಿಸಲಾಗುತ್ತದೆ.
ಮೊದಲು ವಾರ್ಷಿಕವಾಗಿ ಒಂದು ಪರೀಕ್ಷೆ ನಡೆಸಲಾಗುತ್ತದೆ. ಅನುತ್ತೀರ್ಣ ಆದರೆ ಮತ್ತೊಂದು ಪೂರಕ ಪರೀಕ್ಷೆ ನಡೆಸಲಾಗುತ್ತದೆ. ಪರೀಕ್ಷೆಯ ಪ್ರಕ್ರಿಯೆ ದ್ವೀತಿಯ ಪಿಯು ಹಾಗೇ ಇರುತ್ತದೆ. ಆದರೆ ಮೌಲ್ಯ ಮಾಪನ ಕಾಲೇಜು ಹಂತದಲ್ಲಿ ಮಾಡಲಾಗುತ್ತದೆ. ಮೇಲ್ವಿಚಾರಕರು ಬೇರೆ ಕಾಲೇಜುಗಳಿಂದ ಬರುತ್ತಾರೆ. ಪ್ರಶ್ನೆ ಪತ್ರಿಕೆ ಬೋರ್ಡ್ನಿಂದಲೇ ಬರುತ್ತದೆ. ರಾಜ್ಯವ್ಯಾಪಿ ಏಕರೂಪದಲ್ಲೇ ಪರೀಕ್ಷೆ ನಡೆಯುತ್ತದೆ.
ಇನ್ನೂ 9ನೇ ತರಗತಿ ಸಂಕಲನತ್ಮಕ ಮೌಲ್ಯಾ ಮಾಪನ ಪರೀಕ್ಷೆ ಹೇಗಿರುತ್ತದೆ ಅಂದ್ರೆ ಇದು ಮೊದಲಿನ ಹಾಗೇ 5 ಮತ್ತು 8ನೇ ತರಗತಿ ಪರೀಕ್ಷೆ ನಡೆದ ಹಾಗೇ ನಡೆಯುತ್ತೆ. ಇಲ್ಲಿ ಪರೀಕ್ಷೆಯನ್ನು ಜಿಲ್ಲಾ ಹಂತದಲ್ಲೇ ಮಾಡಲಾಗುತ್ತದೆ. ಆಯಾ ಶಾಲೆಯ ಶಿಕ್ಷಕರೇ ಪರೀಕ್ಷೆ ನಡೆಸುತ್ತಾರೆ, ಮೌಲ್ಯಮಾಪನ ನಡೆಸುತ್ತಾರೆ.
ಮಕ್ಕಳ ಕಲಿಕೆಯ ದೃಷ್ಠಿಯಿಂದ ಮಕ್ಕಳ ಶೈಕ್ಷಣಿಕ ಭವಿಷ್ಯ ಸ್ಟ್ರಾಂಗ್ ಮಾಡಲು ಕಲಿಕಾ ಬಲವರ್ಧನೆಗೆ ಈ ತರಹದ ಪರೀಕ್ಷೆಗಳು ಅತ್ಯಗತ್ಯ. ಇದರಿಂದ ಪರೀಕ್ಷೆಗೆ ಸಜ್ಜಾದಷ್ಟು ಮಕ್ಕಳ ಕಲಿಕಾ ಗುಣಮಟ್ಟ ಅರ್ಥ ಆಗುತ್ತದೆ ಅನ್ನೋ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಈ ನಿರ್ಧಾರ ಕೈಗೊಂಡು ಆದೇಶ ಹೊರಡಿಸಿದೆ. ಇದಕ್ಕೆ ಇನ್ಯಾರ ಪರ ವಿರೋಧ ವ್ಯಕ್ತ ಆಗುತ್ತದೆ ಅನ್ನೋದೆ ಸದ್ಯದ ಪ್ರಶ್ನೆಯಾಗಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications