Bengaluru Rains : ಭಾರಿ ಮಳೆಯಿಂದ ಜಲಾವೃತಗೊಂಡ ಬೆಂಗಳೂರು ಉಪನಗರದಲ್ಲಿ ದೋಣಿಗಳು ನಿಯೋಜನೆ

ಬೆಂಗಳೂರೂ ಸೆಪ್ಟೆಂಬರ್ 05: ಇಂದು ಯಾವ ವೆಬ್‌ಸೈಟ್, ಟಿವಿ, ವಿಡಿಯೋ ನೋಡಿದರೂ ಹೆಚ್ಚು ಕಂಡಿದ್ದು ಮಳೆ, ಪ್ರವಾಹ, ಅದರಿಂದಾದ ಅನಾಹುತಗಳು. ಪ್ರತಿನಿತ್ಯ ಬೆಂಗಳೂರಿನಲ್ಲಿ ಧಾರಕಾರ ಮಳೆಯಾಗುತ್ತಿತ್ತು ಜನ ಹೈರಾಣಾಗಿ ಹೋಗಿದ್ದಾರೆ. ಬೆಂಗಳೂರಿನಲ್ಲಿ ಗುಂಡಿ ಕಾಣದೆ ಪ್ರಾಣ ಕಳೆದುಕೊಂಡ ಅದೆಷ್ಟೋ ಸುದ್ದಿಗಳು ವರದಿಯಾಗುತ್ತಿರುವಾಗಲೇ ಮಹಾಮಳೆ ಜನರನ್ನು ಹಿಂಡಿಹಿಪ್ಪೆಯನ್ನಾಗಿಸಿದೆ. ರಸ್ತೆ ಮೇಲೆ ಗುಂಡಿ ನೋಡುವುದಿರಲಿ ವಾಹನಗಳು ಹರಿದುಕೊಂಡು ಹೋಗದೆ ನಿಂತರೆ ಸಾಕಪ್ಪಾ.. ಅನ್ನೋ ಮನಸ್ಥಿತಿಗೆ ಜನ ಬಂದಿದ್ದಾರೆ. ಎಲ್ಲಿ ನೋಡಿದರೂ ಮಳೆ ನೀರು, ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ. ಇದೊಂದು ಕಡೆಯಾದರೆ ಇನ್ನೂ ಕೆಲ ಸ್ಥಳಗಳಲ್ಲಿ ಜನವಾಸಿಸುವ ಪ್ರದೇಶಗಳಿಗೆ ನೀರು ನುಗ್ಗಿ ಅವರ ರಕ್ಷಣಾ ಕಾರ್ಯಗಳು ನಡೆಯುತ್ತಿವೆ. ಭಾರಿ ಮಳೆಯಿಂದ ಜಲಾವೃತಗೊಂಡ ಬೆಂಗಳೂರು ಉಪನಗರದಲ್ಲಿ ದೋಣಿಗಳು ನಿಯೋಜನೆ ಮಾಡಲಾಗಿದೆ.

ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಅಧಿಕ ಮಳೆಯಿಂದಾಗಿ ಭಾರಿ ಪ್ರಮಾಣದ ನೀರು ಮತ್ತು ಪ್ರವಾಹದಿಂದ ಬೆಂಗಳೂರು ಬಳಲುತ್ತಿದೆ. ಹಲವು ಪ್ರದೇಶಗಳು ಜಲಾವೃತಗೊಂಡಿದ್ದರಿಂದ ವರ್ತೂರು ಉಪನಗರದಲ್ಲಿ ರಕ್ಷಣಾ ಕಾರ್ಯಕ್ಕಾಗಿ ದೋಣಿಗಳನ್ನು ನಿಯೋಜಿಸಲಾಗಿದೆ.

ಪ್ರವಾಹದಂತಹ ಪರಿಸ್ಥಿತಿಗಳ ನಡುವೆ ನಗರದ ಹಲವಾರು ಪ್ರದೇಶಗಳು ನೀರಿನಲ್ಲಿ ಮುಳುಗಿದ್ದು, ಜನರನ್ನು ಸ್ಥಳಾಂತರಿಸಲು ತೆಪ್ಪಗಳನ್ನು ಕಳುಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬೆಳ್ಳಂದೂರು, ಸರ್ಜಾಪುರ ರಸ್ತೆ, ವೈಟ್‌ಫೀಲ್ಡ್, ಹೊರ ವರ್ತುಲ ರಸ್ತೆ ಮತ್ತು ಬಿಇಎಂಎಲ್ ಲೇಔಟ್ ಸೇರಿದಂತೆ ಹೆಚ್ಚು ಹಾನಿಗೊಳಗಾದ ಪ್ರದೇಶಗಳಿಗೆ ದೋಣಿಗಳ ನಿಯೋಜನೆಗೆ ಸೂಚಿಸಲಾಗಿದೆ.

Boats are deployed in a Bengaluru suburb flooded by heavy rains

ಜನರು ಟ್ವಿಟರ್‌ನಲ್ಲಿ ಪ್ರವಾಹ ಮತ್ತು ಜಲಾವೃತದ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಹೊರವಲಯದಲ್ಲಿರುವ ಟೆಕ್ ಪಾರ್ಕ್‌ಗಳಿಗೆ ನಗರವನ್ನು ಸಂಪರ್ಕಿಸುವ ಹೊರ ವರ್ತುಲ ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ಉದ್ಭವಿಸಿದೆ. ಇಕೋ ಸ್ಪೇಸ್ ಬಳಿಯ ಔಟರ್‌ರಿಂಗ್ ರೋಡ್, ಬೆಳ್ಳಂದೂರಿನಲ್ಲಿ ಮಳೆನೀರು ರಸ್ತೆಯ ಮೇಲೆ ಹರಿದು ದೊಡ್ಡ ಪ್ರವಾಹದಂತೆ ಕಂಡುಬಂದಿದೆ.

ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದಲ್ಲಿ ಸೆಪ್ಟೆಂಬರ್ 9 ರವರೆಗೆ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಬೆಂಗಳೂರು, ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳು ಮತ್ತು ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಸೆಪ್ಟೆಂಬರ್ 5 ರಿಂದ 9 ರವರೆಗೆ ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆಯನ್ನು ನೀಡಲಾಗಿದೆ.

ಅಪಾಯಕಾರಿ, ವೇಗದ ಗಾಳಿ ಬೀಸುವ ಮುನ್ಸೂಚನೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಉತ್ತರದ ಜಿಲ್ಲೆಗಳಾದ ಬೀದರ್, ಕಲಬುರಗಿ, ವಿಜಯಪುರ, ಗದಗ, ಧಾರವಾಡ, ಹಾವೇರಿ ಮತ್ತು ದಾವಣಗೆರೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ನಿರೀಕ್ಷೆಯಿದೆ.

ಕಳೆದ ವಾರದಿಂದ ರಾಜಧಾನಿ ನಗರವು ಭಾರಿ ಮಳೆಯನ್ನು ಎದುರಿಸುತ್ತಿದೆ ಮತ್ತು ಹಲವಾರು ಪ್ರದೇಶಗಳು, ವಿಶೇಷವಾಗಿ ಐಟಿ ಕಾರಿಡಾರ್‌ಗಳಲ್ಲಿ, ಪ್ರವಾಹಕ್ಕೆ ಸಾಕ್ಷಿಯಾಗಿದೆ. ಬೆಂಗಳೂರಿನಾದ್ಯಂತ ಸಾವಿರಾರು ಮನೆಗಳು ಜಲಾವೃತಗೊಂಡಿದ್ದು, ಪ್ರವಾಹದ ನೀರಿನ ಹರಿವಿನ ತೊಂದರೆಗಳನ್ನು ತೆಗೆದುಹಾಕಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+