ನಿತ್ಯಾಗೆ ಕಂಟಕ : ಮೇಲೆತ್ತಲಿದ್ದಾರೆ ಹೂತ ಯುವತಿಯ ಶವ
ಬೆಂಗಳೂರು, ಜ. 7: ವಿವಾದಿತ ಗುರು ಸ್ವಾಮಿ ನಿತ್ಯಾನಂದ ಅವರ ಬಿಡದಿ ಆಶ್ರಮದಲ್ಲಿ ಮೃತಪಟ್ಟಿದ್ದ ಸಂಗೀತಾ (24) ಪ್ರಕರಣದ ತನಿಖೆಗಾಗಿ ಮೂವರು ಪೊಲೀಸರ ತಂಡ ತಮಿಳುನಾಡಿಗೆ ತೆರಳಿದೆ.
ಪೊಲೀಸ್ ಉಪ ನಿರೀಕ್ಷಕ ಬಿ.ಎನ್. ಲೋಹಿತ್ ನೇತೃತ್ವದ ತಂಡ ತಿರುಚನಾಪಳ್ಳಿ ಜಿಲ್ಲೆಯ ರಾಮಜಿ ನಗರದ ನವಲೂರು ಕುಟ್ಟಪಟ್ಟುಗೆ ಆಗಮಿಸಿದೆ. ಸಂಗೀತಾ ಪಾಲಕರ ಕೋರಿಕೆಯಂತೆ ನವಲೂರು ಕುಟ್ಟಪಟ್ಟು ಗ್ರಾಮದಲ್ಲಿ ಹೂಳಲಾಗಿರುವ ಶವವನ್ನು ಹೊರತೆಗೆದು ಪುನಃ ಪರೀಕ್ಷೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. [ನಿತ್ಯಾನಂದ ಆಶ್ರಮದ ಯುವತಿ ಸಾವಿನ ತನಿಖೆಗೆ ಮನವಿ]

ಪ್ರಕರಣವೇನು? : ವಿವಾದಿತ ಧರ್ಮಗುರು ನಿತ್ಯಾನಂದ ಸ್ವಾಮೀಜಿಯ ಕರ್ನಾಟಕದ ಬಿಡದಿ ಆಶ್ರಮದಲ್ಲಿ 2014ರ ಡಿಸೆಂಬರ್ 28ರಂದು ಸಂಗೀತಾ ಮೃತಪಟ್ಟಿದ್ದರು. ಸಂಗೀತಾ ಎಂಬ ಭಕ್ತೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ, ಇದೊಂದು ಸಹಜ ಸಾವು ಎಂದು ಬಿಡಾಡಿ ಆಶ್ರಮದವರು ತಿಳಿಸಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಿದ್ದರು. [ಹಾಟ್ ನಟಿ ರಂಜಿತಾ ಈಗ ಸನ್ಯಾಸಿನಿ]
ಪಾಲಕರ ಪ್ರಶ್ನೆ : ಸಂಗೀತಾ ಸಾವು ಸಹಜ ಎಂದಾಗಿದ್ದರೆ ಖಾಸಗಿ ಆಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಿದ್ದು ಏಕೆಂದು ತಾಯಿ ಪ್ರಶ್ನಿಸಿದ್ದಾರೆ. ಆಶ್ರಮದವರು ಮೊದಲು ಶವಪರೀಕ್ಷೆ ನಡೆಸಿಲ್ಲ ಎಂದು ತಿಳಿಸಿದ್ದರು. ಆದರೆ, ನಂತರ ಶವ ಪರೀಕ್ಷೆ ನಡೆಸಿದ್ದು ತಿಳಿಯಿತು. ಆದ್ದರಿಂದ ಸಾವಿನ ಕುರಿತು ಶಂಕೆ ಮೂಡಿದೆ. ಸಂಗೀತಾ ಶವವನ್ನು ಪುನಃ ಪರೀಕ್ಷೆಗೆ ಒಳಪಡಿಸಬೇಕೆಂದು ಪಾಲಕರು ಪೊಲೀಸರಿಗೆ ದೂರು ನೀಡಿದ್ದರು.
ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ವರದಿ ನೀಡಬೇಕೆಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ಕೂಡ ರಾಮನಗರ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಗುಪ್ತ ಅವರಿಗೆ ಸೂಚಿಸಿ ಪತ್ರ ಬರೆದಿದ್ದರು.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ












Click it and Unblock the Notifications