ಬಾಲಿವುಡ್ ನಟ ರಣವೀರ್ ಸಿಂಗ್ಗೆ ರಿಲೀಫ್ ನೀಡಿದ ಕರ್ನಾಟಕ ಹೈಕೋರ್ಟ್ ಆದೇಶ | Bollywood Actor
ಬಾಲಿವುಡ್ ನಟ ರಣವೀರ್ ಸಿಂಗ್ ದೊಡ್ಡ ಸಂಕಷ್ಟಕ್ಕೆ ಸಿಲುಕಿದ್ದರು, ಒಂದು ಕಡೆ ರಣವೀರ್ ಸಿಂಗ್ ಅಭಿನಯದ ಧುರಂಧರ್-2 ಸಿನಿಮಾ ಇನ್ನೇನು ಬಿಡುಗಡೆಗೆ ಸಜ್ಜಾಗಿದೆ. ಇಂತಹ ಸಮಯದಲ್ಲೇ ನಟ ರಣವೀರ್ ಸಿಂಗ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿತ್ತು. ಅಲ್ಲದೆ ಇದೇ ಆರೋಪದಲ್ಲಿ ರಣವೀರ್ ಸಿಂಗ್ ದೊಡ್ಡ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ದಟ್ಟವಾಗಿತ್ತು. ಆದರೆ ಈಗ ಬಾಲಿವುಡ್ ನಟ ರಣವೀರ್ ಸಿಂಗ್ಗೆ ಕರ್ನಾಟಕ ಹೈಕೋರ್ಟ್ ಆದೇಶ ರಿಲೀಫ್ ನೀಡಿದೆ.
ಕಾಂತಾರಾ ಸಿನಿಮಾದ ದೈವದ ಪಾತ್ರವನ್ನು ಬಾಲಿವುಡ್ ನಟ ರಣವೀರ್ ಸಿಂಗ್ ಮಿಮಿಕ್ರಿ ಮಾಡಿದ್ದರು. ಈ ವಿಚಾರ ತೀವ್ರ ಆಕ್ರೋಶಕ್ಕೆ ಕಾರಣವಾಗುವ ಜೊತೆಗೆ, ನಟ ರಣವೀರ್ ಸಿಂಗ್ ವಿರುದ್ಧ ಕ್ರಮಕ್ಕೂ ಆಗ್ರಹ ಮಾಡಲಾಗಿತ್ತು. ಕೆಲವು ತಿಂಗಳ ಹಿಂದೆ ರಿಲೀಸ್ ಆಗಿದ್ದ ಕನ್ನಡದ ಇಂಡಸ್ಟ್ರಿ ಹಿಟ್ ಸಿನಿಮಾ ಕಾಂತಾರ ಚಾಪ್ಟರ್-1 ಚಿತ್ರದ, ದೈವಗಳ ಪಾತ್ರವನ್ನ ಕುರಿತು ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ್ದ ನಟ ರಣವೀರ್ ಸಿಂಗ್ ವಿವಾದ ಎಬ್ಬಿಸಿದ್ದರು. ಕಾಂತಾರಾ ಸಿನಿಮಾದ ಹೀರೋ ಹಾಗೂ ನಿರ್ದೇಶಕರೂ ಆಗಿರುವ ರಿಷಬ್ ಶೆಟ್ಟಿ ಅವರ ಎದುರಲ್ಲೇ ಈ ರೀತಿಯಾಗಿ ರಣವೀರ್ ಸಿಂಗ್ ಮಿಮಿಕ್ರಿ ಮಾಡಿದ್ದರು. ಆಗ ಕೂಡಲೇ ಬೇಸರ ಹೊರಹಾಕಿದ ನಟ ರಿಷಬ್ ಶೆಟ್ಟಿ ಅವರು, ಆ ರೀತಿ ಮಾಡಬೇಡಿ ಎಂದು ಅಲ್ಲೇ ತಡೆದಿದ್ದರು.

ರಣವೀರ್ ಸಿಂಗ್ಗೆ ಹೈಕೋರ್ಟ್ ಹೇಳಿದ್ದೇನು?
2025ರ ನವೆಂಬರ್ 28ಕ್ಕೆ ಗೋವಾದಲ್ಲಿ ನಡೆದಿದ್ದ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಈ ಘಟನೆ ನಡೆದಿತ್ತು. ನಟ ರಣವೀರ್ ಸಿಂಗ್, ಕರಾವಳಿ ಕರ್ನಾಟಕದ ಪಂಜುರ್ಲಿ, ಗುಳಿಗ ದೈವಗಳ ದೈವೀಕ ಅಭಿವ್ಯಕ್ತಿಯನ್ನ ಒರಟು, ಹಾಸ್ಯಮಯ & ಅವಹೇಳನಕಾರಿ ರೀತಿ ಅನುಕರಣೆ ಮಾಡಿ ಅಣಕ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದೇ ಕಾರಣಕ್ಕೆ ದೂರು ಕೂಡ ದಾಖಲಾಗಿದ್ದು, ಈಗ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನಟ ರಣವೀರ್ ಸಿಂಗ್ಗೆ ತಾತ್ಕಾಲಿಕ ರಿಲೀಫ್ ನೀಡಿದೆ. ಅಲ್ಲದೇ ನಟನ ವರ್ತನೆ ಬಗ್ಗೆ ಬೇಸರ ಹೊರ ಹಾಕಿರುವ ಹೈಕೋರ್ಟ್ ಚಾಟಿ ಬೀಸಿದೆ.
ಮಾಡಿದ ತಪ್ಪಿಗೆ ಕ್ಷಮೆ ಕೇಳಿದ ನಟ
ಜನರ ನಂಬಿಕೆಗೆ ಹಾಗೂ ಅವರ ಭಾವನೆಗಳಿಗೆ ಘಾಸಿ ಮಾಡಿರುವುದು ಮಾಸುವುದಿಲ್ಲ ಎಂದು ಹೇಳಿರುವ ಮಾನ್ಯ ಕರ್ನಾಟಕ ಹೈಕೋರ್ಟ್, ಮಾಡಿದ ತಪ್ಪಿಗೆ ಕ್ಷಮೆ ಕೇಳಿರುವ ನಟ ರಣವೀರ್ ಸಿಂಗ್ಗೆ ಚಾಟಿ ಬೀಸಿದೆ. ಈ ಬಗ್ಗೆ ಸಜನ್ ಪೂವಯ್ಯ ಪ್ರತಿಕ್ರಿಯಿಸುತ್ತಾ, ಅರ್ಜಿದಾರರು ಯಾರ ಭಾವನೆಗಳಿಗೂ ಧಕ್ಕೆ ಆಗದಂತೆ ನಡೆದುಕೊಳ್ಳಬೇಕಿತ್ತು. ಮುಂದೆ ಈ ಬಗ್ಗೆ ಎಚ್ಚರ ವಹಿಸುತ್ತಾರೆ ಎಂದು ಮನವಿ ಮಾಡಿದ್ದಾರೆ. ರಣವೀರ್ ಸಿಂಗ್ ಘಟನೆ ದೇಶಾದ್ಯಂತ ದೊಡ್ಡ ಚರ್ಚೆಗೆ ನಾಂದಿ ಹಾಡಿತ್ತು, ಅಲ್ಲದೆ ನಟ ರಣವೀರ್ ಈ ರೀತಿ ವರ್ತಿಸಬಾರದಿತ್ತು ಎಂಬ ಆಗ್ರಹ ಕೂಡ ಕೇಳಿಬಂದಿತ್ತು.
ಇನ್ನು ಅಂತಿಮವಾಗಿ ನ್ಯಾಯಪೀಠವು, ಅರ್ಜಿದಾರರು ತಪ್ಪನ್ನ ಒಪ್ಪಿಕೊಂಡಿದ್ದು ಕ್ಷಮೆ ಯಾಚಿಸಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ. ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ, ಇನ್ನು ಈ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಲಾಗಿದೆ. ಹಾಗೂ ಅರ್ಜಿದಾರರು ತನಿಖೆಗೆ ಸಹಕರಿಸಲಿದ್ದಾರೆ ಎಂಬುದಕ್ಕೆ ಒಳಪಟ್ಟು ಅವರ ವಿರುದ್ಧ ಬಲವಂತದ ಕ್ರಮಕೈಗೊಳ್ಳಬಾರದು ಎಂದು ಹೈಗ್ರೌಂಡ್ಸ್ ಠಾಣೆ ಪೊಲೀಸರಿಗೆ ನಿರ್ದೇಶಿಸಿ, ಅಂತಿಮವಾಗಿ ಈ ಅರ್ಜಿಯ ವಿಚಾರಣೆ ಮಾರ್ಚ್ 2ಕ್ಕೆ ಮುಂದೂಡಿಕೆ ಮಾಡಲಾಗಿದೆ. ಈ ಮೂಲಕ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ತಾತ್ಕಾಲಿಕವಾಗಿ ರಿಲೀಫ್ ಸಿಕ್ಕಂತಾಗಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications