ಎಂಇಪಿ ಪ್ರಚಾರದಲ್ಲಿ ಬಾಲಿವುಡ್ ನಟ ಸುಹೇಲ್ ಖಾನ್!
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಾರಿ ಸಂಚಲನ ಮೂಡಿಸಿರುವ ಆಲ್ ಇಂಡಿಯಾ ಮಹಿಳಾ ಎಂಪವರ್ ಮೆಂಟ್ ಪಾರ್ಟಿ ಪ್ರಚಾರಕ್ಕೆ ಬಾಲಿವುಡ್ ತಾರೆಯರು ಮುಂದಾಗಿದ್ದಾರೆ.
ನಗರದ ಲೀಲಾ ಪ್ಯಾಲೇಸ್ ಹೊಟೇಲ್ ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಡಾ.ನೌಹೀರಾ ಶೇಖ್ ಈ ವಿಷಯ ತಿಳಿಸಿದ್ದಾರೆ. ಖ್ಯಾತ ಬಾಲಿವುಡ್ ನಟ ಸಲ್ಮಾಂ ಖಾನ್ ಸಹೋದರಾದ ಅರ್ಬಾಸ್ ಖಾನ್ ಮತ್ತು ಸುಹೇಲ್ ಖಾನ್ ರಾಜ್ಯದ ಉದ್ದಗಲಕ್ಕೂ ಪಕ್ಷದ ಪರ ಪ್ರಚಾರ ಮಾಡಲಿದ್ದಾರೆಂದು ವಿವರಿಸಿದರು. ರಾಜ್ಯ ನೀರು, ವಿದ್ಯುತ್ ಹಲವಾರು ರೈತರ ಸಮಸ್ಯೆ ಎದುರಿಸುತ್ತಿದೆ ನಾವು ಅಧಿಕಾರಕ್ಕೆ ಬಂದರೆ ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ನಮ್ಮ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ ಲೋಕಸಭಾ ಚುನಾವಣೆವರೆಗೂ ಮುಂದುವರೆಯಲಿದೆ ಎಂದರು.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಹೋರಾಟ ನಮ್ಮ ಕೆಲಸವಲ್ಲ ಅನ್ಯಾಯದ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯಲಿದೆ. ನಾವು ಎಲ್ಲರ ಬ್ಯಾಂಕ್ ಖಾತೆಗಳಿಗೆ 15 ಲಕ್ಷ ರೂ. ಹಾಕುತ್ತೇವೆ ಎಂದು ಹೇಳುವುದಿಲ್ಲ. ನಮ್ಮ ಅಭ್ಯರ್ಥಿಗಳ ಪಟ್ಟಿ ನೋಡಿದರೆ ಯಾರು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ನೀತಿಯನ್ನು ಪಾಲನೆ ಮಾಡುತ್ತಿದ್ದಾರೆ ಎಂಬುದು ಜನರಿಗೆ ತಿಳಿಯುತ್ತದೆ.

ಜಾತಿ ಆಧಾರದಲ್ಲಿ ರಾಜಕಾರಣ ಮಾಡುವುದಾದರೆ, ಅದೇ ಆಧಾರದಲ್ಲಿ ಮತ ಕೇಳುವುದಾದರೆ ಇದೇ ರಾಜಕೀಯಕ್ಕೆ ಗುಡ್ ಬೈ ಹೇಳುತ್ತೇನೆ. ಕಾಂಗ್ರೆಸ್ ಬಿಜೆಪಿ ಪಟ್ಟಿ ನೋಡಿದರೆ ಕೋಟಿ ಕೋಟಿ ಹಣ ಇದ್ದವರಿಗೆ ಟಿಕೆಟ್ ಕೊಟ್ಟಿದ್ದಾರೆ ಎಂಬುದು ಗೊತ್ತಾಗುತ್ತೆ ನಮ್ಮ ಪಟ್ಟಿ ನೋಡಿದರೆ ಅಲ್ಲಿ ರೈತರು, ಚಾಲಕರು, ಮಾಣಿಗಳು ಹೀಗೆ ಎಲ್ಲವರ್ಗದ ಜನ ಕಾಣುತ್ತಾರೆ. ಇದೆ ನಮಗೂ ಬೇರೆ ಪಕ್ಷಗಳಿಗೂ ಇರುವ ವ್ಯತ್ಯಾಸ ಎಂದರು.
ಕೆಲವು ಕಡೆ ಬೇರೆ ಪಕ್ಷದ ನಾಯಕರು ನಮ್ಮ ಅಭ್ಯರ್ಥಿಗಳಿಗೆ ಹಣದ ಆಮಿಷ ಒಡ್ಡಿ ನಾಮಪತ್ರ ಹಿಂದಕ್ಕೆ ಪಡೆಯುವಂತೆ ಮಾಡಿದ ಪ್ರಯತ್ನಗಳಿಗೆ ಬೆಲೆಸಿಕ್ಕಿಲ್ಲ ಎಂದರು. ಬಾಲಿವುಡ್ ನಟರಾದ ಸುಹೇಲ್ಖಾನ್ ಹಾಗೂ ಅರ್ಬಾಸ್ ಖಾನ್ ಪಾಲ್ಗೊಂಡಿದ್ದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications