ಜಡ್ಜ್ ಗೆ ಬಾಂಬ್ ಸ್ಪೋಟ ಬೆದರಿಕೆ ಪ್ರಕರಣ: ನಿರ್ಲಕ್ಷ್ಯತೆ ವಹಿಸಿದ ಇನ್ಸ್ಪೆಕ್ಟರ್ ಸಸ್ಪೆಂಡ್ !
ಬೆಂಗಳೂರು, ಫೆಬ್ರವರಿ 09: ಸಿಟಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನನ್ನು ಅಮಾನತು ಮಾಡಲಾಗಿದೆ. ಪ್ರಕರಣದ ಗಂಭೀರತೆಯನ್ನು ಅರಿತು ಕಾಲಮಿತಿಯಲ್ಲಿ ದೋಷಾರೋಪ ಪಟ್ಟಿ ಸಲ್ಲಿಸುವಲ್ಲಿ ವಿಫಲರಾದ ಪೊಲೀಸ್ ಇನ್ಸ್ಪೆಕ್ಟರ್ ರಾಜಶೇಖರ್ ಅವರನ್ನು ಅಮಾನತು ಮಾಡಲಾಗಿದೆ. ಕೇಂದ್ರ ವಿಭಾಗದ ಡಿಸಿಪಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ನಟಿ ರಾಗಿಣಿ ಹಾಗೂ ಸಂಜನಾಗೆ ಜಾಮೀನು ನೀಡಬೇಕು. ಕೊಲೆ, ಸುಲಿಗೆ ಡಕಾಯಿತಿ ಪ್ರಕರಣಗಳಲ್ಲಿ ಜಾಮೀನು ಕೊಡಬೇಕು. ನಿಮಗೆ ಹಣ ಬೇಕಿದ್ದರೆ ಕೇಳಿ, ಇಲ್ಲದಿದ್ದರೆ ನಿಮ್ಮ ಕಾರಿನ ಇಂಜಿನ್ ಕೇಪು ಇಟ್ಟು ನಿಮ್ಮ ಕಾರು ಬ್ಲಾಸ್ಟ್ ಮಾಡಿಸುತ್ತೇವೆ ಎಂದು ಕನ್ನಡದಲ್ಲಿ ಬರೆದಿದ್ದ ಅನಾಮಧೇಯ ಬೆದರಿಕೆ ಪತ್ರ 33 ನೇ ಸಿಟಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಸೀನಪ್ಪ ಅವರಿಗೆ ಬಂದಿತ್ತು. ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಸೀನಪ್ಪ ಅವರಿಗೆ ಬೆದರಿಕೆ ಹಾಕಲಾಗಿತ್ತು .

2020, ಅಕ್ಟೋಬರ್ 19 ರಂದು ಪ್ರಕರಣ ದಾಖಲಿಸಿದ್ದ ಪೊಲೀಸರು, ನ್ಯಾಯಾಲಯದ ಆವರಣದ ಮುಂದೆ ಡಿಟೋನೇಟರ್ ವೈರ್ ವಶಪಡಿಸಿಕೊಂಡಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಹಲಸೂರು ಗೇಟ್ ಪೊಲೀಸರು ತುಮಕೂರು ಮೂಲದ ನಾಲ್ವರನ್ನು ಬಂಧಿಸಿದ್ದರು. ತಿಪಟೂರಿನ ರಾಜಶೇಖರ್, ವೇದಾಂತ್ ಶಿವ ಪ್ರಕಾಶ್, ಬಸವಲಿಂಗಯ್ಯ , ರಮೇಶ್ ಎಂಬುವರನ್ನು ಬಂಧಿಸಿದ್ದರು. ಆಸ್ತಿ ವಿಚಾರವಾಗಿ ಜಗಳ ಉಂಟಾಗಿ, ರಮೇಶ್ ಮೇಲೆ ಸಿಟ್ಟು ತೀರಿಸಿಕೊಳ್ಳಲು ರಾಜಶೇಖರ್ ಎಂಬಾತ ಜಡ್ಜ್ ಗೆ ಬಾಂಬ್ ಬೆದರಿಕೆ ಪತ್ರ ಬರೆಯುವ ಉಪಾಯ ಕಂಡುಕೊಂಡಿದ್ದ. ಅದೇ ರೀತಿ ಪತ್ರ ಬರೆದು ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ್ದ.

ಈ ಪ್ರಕರಣದ ಆರೋಪಿಗಳು ಈಗಲೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ, 90 ದಿನದಲ್ಲಿ ಹಲಸೂರು ಗೇಟ್ ಪೊಲೀಸ್ ಇನ್ಸ್ಪೆಕ್ಟರ್ ಪ್ರಕರಣದ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಬೇಕಿತ್ತು. ನಿರ್ಲಕ್ಷ ಮಾಡಿ ಒಂದು ತಿಂಗಳು ಹೆಚ್ಚುವರಿ ಕಾಲಾವಕಾಶ ನೀಡಿದರೂ ತನಿಖೆ ಮುಗಿಸಿರಲಿಲ್ಲ. ಹೀಗಾಗಿ ಕರ್ತವ್ಯ ಲೋಪ ಆರೋಪದ ಮೇಲೆ ಹಲಸೂರು ಗೇಟ್ ಪೊಲೀಸ್ ಇನ್ಸ್ಪೆಕ್ಟರ್ ರಾಜಶೇಖರ್ ಎಚ್.ಎನ್. ಅವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.
Recommended Video

-
Karnataka Highways: 1846 ಕಿಮೀ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 5000 ಕೋಟಿ ರೂ ಘೋಷಣೆ -
ಬೆಂಗಳೂರು, ವಿದ್ಯಾಕಾಶಿ ಧಾರವಾಡದಲ್ಲಿ "ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್" ಆರಂಭ: ಬಜೆಟ್ನಲ್ಲಿ ಘೋಷಣೆ -
Karnataka Weather: ಮಾರ್ಚ್ 12ರ ವರೆಗೆ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುನ್ಸೂಚನೆ -
ಕರ್ನಾಟಕದ 66 ಆರ್ಟಿಓಗಳಲ್ಲಿ ಡಿಜಿಟಲ್ ವ್ಯವಸ್ಥೆ: ವಾಹನ ತೋರಿಸಿದರಷ್ಟೇ ಫಿಟ್ನೆಸ್ ಪ್ರಮಾಣಪತ್ರ, ಏನಿದು? -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ











Click it and Unblock the Notifications