ಜೆಪಿ ನಗರದ ಶಾಲೆಯಲ್ಲಿ ಬಾಂಬ್ ನಂಥ ವಸ್ತು ಪತ್ತೆ!
ಬೆಂಗಳೂರು, ಸೆ. 20: ಜಯಪ್ರಕಾಶ್ ನಗರದಲ್ಲಿ ಬೆಳ್ಳಂಬೆಳಗ್ಗೆ ಬಾಂಬ್ ಭೀತಿ ಹುಟ್ಟಿಕೊಂಡಿತ್ತು. ಕಿಡಿಗೇಡಿಗಳು ಪ್ಲೇ ಹೋಮ್ ವೊಂದರಲ್ಲಿ ಬಾಂಬ್ ನಂಥ ವಸ್ತು ಇಟ್ಟು ಆತಂಕ ಸೃಷ್ಟಿಸಲು ಸಂಚು ರೂಪಿಸಿರಬಹುದು ಎಂದು ಪುಟ್ಟೇನಹಳ್ಳಿ ಪೊಲೀಸರು ಶಂಕಿಸಿದ್ದಾರೆ.
ಜೆಪಿ ನಗರ ಆರನೇ ಹಂತದಲ್ಲಿರುವ ಬ್ರೂಕ್ ಲ್ಯಾಂಡ್ಸ್ ಪ್ರೀ ಸ್ಕೂಲ್ ಆವರಣದಲ್ಲಿ ಬೆಳಗ್ಗೆ ಶಾಲಾ ಬ್ಯಾಗ್ ಹಾಗೂ ಅದರ ಮೇಲೆ ಸ್ಫೋಟಕಗಳನ್ನಿಟ್ಟಿರುವುದು ಹಾಗೂ ವೈರ್ ಗಳನ್ನು ಬೆಸೆರಿರುವುದು ಕಂಡು ಬಂದಿದೆ. ಮುಂಜಾನೆ ವಿಹಾರಕ್ಕೆ ಬಂದಿದ್ದ ಸಾರ್ವಜನಿಕರು ಆತಂಕಕ್ಕೊಂಡು ಶಾಲಾ ಮಂಡಳಿಗೆ ವಿಷಯ ತಿಳಿಸಿದ್ದಾರೆ. ನಂತರ ವಿಷಯ ಪೊಲೀಸರಿಗೆ ಮುಟ್ಟಿ, ತಕ್ಷಣವೇ ಪರಿಶೀಲನೆ ನಡೆಸಿದ್ದಾರೆ.

ಪ್ರೀ ಸ್ಕೂಲ್ ಹಾಗೂ ಸುತ್ತಮುತ್ತ ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ದಳ ಪರಿಶೀಲಿಸಿ, ಸಾರ್ವಜನಿಕರು ಆತಂಕಗೊಳ್ಳುವ ಅಗತ್ಯ ಇಲ್ಲವೆಂದು ಪೊಲೀಸರು ಭರವಸೆ ನೀಡಿದ ಬಳಿಕ ಅಕ್ಕಪಕ್ಕದ ಮನೆಯವರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಮೊಬೈಲ್ ಪವರ್ ಬ್ಯಾಂಕ್ನಲ್ಲಿ ಕೆಲವು ವೈರ್ಗಳನ್ನು ಜೋಡಿಸಿ ಬ್ಯಾಗಿನೊಳಗೆ ಇಡಲಾಗಿತ್ತು. ಇದು ಉದ್ದೇಶಪೂರ್ವಕವಾಗಿ ಮಾಡಿರುವ ಕೃತ್ಯ. ಜತೆಗೆ ಜಿಲೇಟಿನ್ ಕಡ್ಡಿಯ ಮಾದರಿ ವಸ್ತು ಸಿಕ್ಕಿದ್ದರಿಂದ ಸಹಜವಾಗಿ ಆತಂಕ ಹೆಚ್ಚಾಗಿತ್ತು ಎಂದು ಸ್ಥಳೀಯರು ಹೇಳಿದ್ದಾರೆ.
Suspicious object found outside a preschool in Bengaluru's JP Nagar. Police and dog squad present at the spot. Nothing found till now. pic.twitter.com/Fty2UzCJsI
— ANI (@ANI) September 20, 2017
ಶಾಲೆಯ ಸುತ್ತಮುತ್ತವಿರುವ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದು, ಮುಂಜಾನೆ ವಾಕಿಂಗ್ ಗೆ ಬಂದಿದ್ದ ವ್ಯಕ್ತಿಯೊಬ್ಬನನ್ನು ವಿಚಾರಣೆಗೊಳಪಡಿಸಲಾಗಿದೆ. ಶಾಲೆಯಲ್ಲಿ ಸಿಕ್ಕಿರುವ ವಸ್ತುವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಹೆಚ್ಚುವರಿ ಪೊಲೀಸ್ ಆಯುಕ್ತೆ ಮಾಲಿನಿ ಕೃಷ್ಣಮೂರ್ತಿ ತಿಳಿಸಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications