Bomb Threat: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ- ಏರ್ ಶೋ ಸಿದ್ದತೆ ಹೊತ್ತಲ್ಲಿ ಆತಂಕ
ಬೆಂಗಳೂರು ಜನವರಿ 12: ಬೆಂಗಳೂರಿನಲ್ಲಿ ಏರ್ ಶೋಗಾಗಿ ಸಿದ್ಧತೆಗಳು ನಡೆದಿವೆ. ಈ ನಡುವೆ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬೆದರಿಕೆ ಸಂದೇಶವೊಂದು ಬಂದಿದ್ದು, ಇದರಿಂದಾಗಿ ಪ್ರಯಾಣಿಕರಲ್ಲಿ ಆತಂಕ ಹೆಚ್ಚಾಗಿದೆ. ಇದರ ಬೆನ್ನಲ್ಲೆ ಪೊಲೀಸರು ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ.
ಹೌದು... ಫೆಬ್ರವರಿ 8ಕ್ಕೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಈಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸಂದೇಶದಲ್ಲಿ ಏರ್ಪೋರ್ಟ್ಗೆ ಆಗಮಿಸುವ ವಿಮಾನಗಳಿಗೆ ಡ್ರೋನ್ ಮುಖಾಂತರ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ರಾಜ್ಯದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿಗೆ ಪತ್ರ ಬರೆದಿದ್ದೇನೆ. ಪತ್ರ ಬರೆದು ಅವರಿಂದ ಪ್ರತಿಕ್ರಿಯೆ ಕೋರಲಾಗಿದೆ. ನನ್ನ ಪತ್ರಕ್ಕೆ ಪ್ರತಿಕ್ರಿಯೆ ಬಾರದೇ ಇದ್ದಲ್ಲಿ ನಾನು ಬಾಂಬ್ ದಾಳಿ ಮಾಡುತ್ತೇನೆ ಎಂದು ದುಷ್ಕರ್ಮಿ ಬೆದರಿಕೆ ಹಾಕಿದ್ದಾನೆ. [email protected] ಈಮೇಲೆ ಸಂದೇಶವನ್ನು ಕಳುಹಿಸಲಾಗಿದ್ದು, ಇದರಲ್ಲಿ ಬೆಂಗಳೂರು, ಚೆನ್ನೈ ಹಾಗೂ ಕೇರಳದಿಂದ ಬರುವ ವಿಮಾನಗಳಿಗೆ ಡ್ರೋನ್ ಬಾಂಬ್ ದಾಳಿ ಮಾಡುವುದಾಗಿ ಹೇಳಲಾಗಿದೆ. ಹೀಗಾಗಿ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅನುಮಾನ ಬಂದ ವ್ಯಕ್ತಿಗಳ ವಿಚಾರಣೆ ನಡೆಯುತ್ತಿದೆ. ನಿಲ್ದಾಣದಲ್ಲಿ ಒಳ ಹೋಗುವ ಹಾಗೂ ಒಳ ಬರುವ ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದೆ.
ಅಲ್ಲದೆ ಬೆದರಿಕೆ ಬಂದ ಹಿನ್ನಲೆಯಲ್ಲಿ ಏರ್ ಶೋ ನಡೆಯುತ್ತಿರುವ ಸ್ಥಳದಲ್ಲೀ ಪೊಲೀಸ್ ಬಿಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಜೊತೆಗೆ ಬಿಎನ್ಎಸ್ 125, 351, 353 ಅಡಿ ಎಫ್ಐಆರ್ ದಾಖಲು ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ಏರ್ಪೋರ್ಟ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಏರ್ ಶೋ ನಡೆಯುವ ಯಲಹಂಕ ವಾಯುನೆಲೆಯ ಬಳಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಡ್ರೋನ್ ಮೇಲ್ವಿಚಾರಣೆ ಮಾಡುವ ಮೂಲಕ ಪೊಲೀಸರು ಪ್ರಮುಖ ಪ್ರವೇಶ ದ್ವಾರಗಳಲ್ಲಿ ತಪಾಸಣೆಯೊಂದಿಗೆ ಹದ್ದಿನ ಕಣ್ಣು ಇಟ್ಟಿದ್ದಾರೆ. ಪ್ರಸ್ತುತ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯುತ್ತಿದೆ.
ಅಲ್ಲದೆ ಯಲಹಂಕದಲ್ಲಿ ಏರ್ ಶೋಗೆ ಸಿದ್ದತೆಗಳು ನಡೆದಿವೆ. ಈ ಎರಡಕ್ಕೂ ಅಂತಾರಾಷ್ಟ್ರೀಯ ಪ್ರತಿನಿಧಿಗಳು, ರಕ್ಷಣಾ ಕಂಪನಿಗಳು ಹಾಗೂ ವಾಯುಯಾನ ತಜ್ಞರು ಆಗಮಿಸಲಿದ್ದಾರೆ. ಈ ನಡುವೆ ಬಾಂಬ್ ಬೆದರಿಕೆ ಬಂದಿದ್ದು ಯಲಹಂಕ ವಾಯುನೆಲೆ ಸುತ್ತಾಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications