Kempegowda Airport: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಕರೆ
Bengaluru Kempegowda International Airport: ಈಗಾಗಲೇ ದೇಶದಾದ್ಯಂತ ಹಲವು ವಿಮಾನ ನಿಲ್ದಾಣಗಳಿಗೆ, ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಇನ್ನು ಇದೀಗ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಕರೆ ಬಂದಿದೆ ಎನ್ನುವ ಸ್ಫೋಟಕ ಮಾಹಿತಿಯೊಂದು ಲಭ್ಯವಾಗಿದೆ.
ಬೆಳಗಾವಿ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಹಾಕಲಾಗಿದ್ದು, ಇದರ ಮಧ್ಯ ಇದೀಗ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೂಡ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ತಿಳಿದುಬಂದಿದೆ.

ಟ್ವೀಟ್ ಮೂಲಕ ಕೆಂಪೇಗೌಡ ಏರ್ಪೋರ್ಗೆ ಬೆದರಿಕೆ ಹಾಕಿದ ಸಂದೇಶ ಬಂದಿದೆ. ಕಮಾಂಡ್ ಸೆಂಟರ್ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ. ಆರು ವಿಮಾನಗಳಲ್ಲಿ 12 ಬಾಂಬರ್ಗಳಿದ್ದಾರೆ ಎಂದು ಟ್ವೀಟ್ ಮಾಡಲಾಗಿದೆ.
ಇನ್ನು ಪ್ರತಿಯೊಂದು ವಿಮಾನದಲ್ಲಿ ಇಬ್ಬರು ಬಾಂಬರ್ಗಳಿದ್ದಾರೆ ಎಂದು ಟ್ವೀಟ್ ಮಾಡಲಾಗಿದೆ. ಅನಾಮಧಯ ಟ್ವಿಟರ್ ಖಾತೆಯಿಂದ ಈ ಸಂದೇಶ ಬಂದಿದೆ. ಮಂಗಳೂರು-ದುಬೈ ತಿರುವನಂತಪುರಂ-ಮಾಸ್ಕಟ್ ಸೇರಿದಂತೆ ವಿವಿಧ ವಿಮಾನಗಳಲ್ಲಿ ತೆರಳುವ ವಿಮಾನಗಳಲ್ಲಿ ಬಾಂಬರ್ಗಳಿದ್ದಾರೆ ಎಂದು ಟ್ವೀಟ್ ಮೂಲಕ ತಿಳಿದುಬಂದಿದೆ.
ಬೆಳಗಾವಿ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಕರೆ: ದೇಶಾದ್ಯಂತ ಹಲವು ವಿಮಾನ ನಿಲ್ದಾಣಗಳಿಗೆ. ಈಗಾಗಲೇ ಹಲವು ಬಾರಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅದರಂತೆಯೇ ಇಂದು (ಅಕ್ಟೋಬರ್ 20) ಅಪರಿಚಿತರು ವಿಮಾನ ನಿಲ್ದಾಣ ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದು, ವಿಮಾನ ನಿಲ್ದಾಣದ ನಿರ್ದೇಶಕ ತ್ಯಾಗರಾಜ್ ಅವರ ಇಮೇಲ್ಗೆ ಬೆದರಿಕೆ ಪತ್ರ ರವಾನಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಸದ್ಯ ಈ ಬಗ್ಗೆ ತ್ಯಾಗರಾಜ್ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚೆನ್ನೈನಿಂದ ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಾಂಬ್ ಬೆದರಿಕೆ ಪತ್ರದ ಬೆನ್ನಲ್ಲೇ ವಿಮಾನ ನಿಲ್ದಾಣಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದ್ದು, ಶ್ವಾನ ದಳ, ಬಾಂಬ್ ಸ್ಕ್ವಾಡ್ನಿಂದ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಗಿದೆ.
70 ವಿಮಾನಯಾನ ಸಂಸ್ಥೆಗಳಿಗೆ ಬೆದರಿಕೆ: ಸೋಮವಾರದಿಂದ ಇಲ್ಲಿಯವರೆಗೂ, ಕನಿಷ್ಠ 70 ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಬೆದರಿಕೆಗಳು ಬಂದಿವೆ. ಆದರೆ, ಶನಿವಾರ ಒಂದೇ ದಿನ ದೇಶದ 30ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಬಂದಿದೆ.
ದೇಶದ ವಿಮಾನ ನಿಲ್ದಾಣಗಳಿಗೆ ನಿರಂತರವಾಗಿ ಬಾಂಬ್ ಬೆದರಿಕೆಯ ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರೀ ಭದ್ರತೆ ತೆಗೆದುಕೊಳ್ಳಲಾಗಿದ್ದು. ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications