ಡಿ.ಕೆ.ಶಿವಕುಮಾರ್ ಕಚೇರಿ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ!
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕಚೇರಿ ಸ್ಫೋಟ ಮಾಡುವುದಾಗಿ ಬಾಂಬ್ ಬೆದರಿಕೆ ಬಂದಿರುವ ಘಟನೆ ವರದಿಯಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಕಚೇರಿಗೆ ಬಾಂಬ್ ಸ್ಫೋಟಿಸುವ ಬೆದರಿಕೆ ಇಮೇಲ್ ಬಂದಿದೆ ಎನ್ನಲಾಗಿದೆ. ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 11 ಗಂಟೆಗೆ ಮತ್ತು ಡಿಕೆಶಿ ಕಚೇರಿಯಲ್ಲಿ ಬಾಂಬ್ ಸ್ಫೋಟವಾಗಲಿದೆ ಎಂದು ಇ-ಮೇಲ್ ಬಂದಿತ್ತು.
ಮಾಹಿತಿ ತಿಳಿದ ತಕ್ಷಣ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದ್ದು, ಯಾವುದೇ ಬಾಂಬ್ ಪತ್ತೆಯಾಗದ ಹಿನ್ನೆಲೆಯಲ್ಲಿ ಹುಸಿ ಬಾಂಬ್ ಬೆದರಿಕೆ ಸಂದೇಶ ಎಂದು ಖಚಿತವಾಗಿದೆ. ಇನ್ನು ಈ ಬಾಂಬ್ ಬೆದರಿಕೆ ಸಂದೇಶದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಯಾವುದೇ ಸ್ಫೋಟಕ ಸಾಧನಗಳು ಕಂಡುಬಂದಿಲ್ಲ. ಪೊಲೀಸರು ತನಿಖೆ ಶುರುಮಾಡಿದ್ದು, ಇ-ಮೇಲ್ ಕಳುಹಿಸಿದವರ ಹಿನ್ನೆಲೆ ಕಲೆಹಾಕುತ್ತಿದ್ದಾರೆ.

ಏರ್ಪೋರ್ಟ್ ಟರ್ಮಿನಲ್ 1 ಹಾಗೂ 2ರಲ್ಲಿ ಬಾಂಬ್ ಇಟ್ಟಿದ್ದೇವೆ. ಅಲ್ಲಿಂದ ಎಲ್ಲರನ್ನೂ ತೆರವುಗೊಳಿಸಿ. ಏಕಕಾಲದಲ್ಲಿ ಡಿಸಿಎಂ ಕಚೇರಿ, ಏರ್ಪೋರ್ಟ್ನಲ್ಲಿ ಬಾಂಬ್ ಬ್ಲಾಸ್ಟ್ ಆಗಲಿದೆ ಎಂದು ಇಮೇಲ್ನಲ್ಲಿ ಇತ್ತು. ಈ ಸಂಬಂಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಬೆದರಿಕೆ ಮೇಲ್ ಸಂಬಂಧ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.
ಇದಕ್ಕೆ ಮುಂಚೆ ಕೂಡ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಇಂತಹ ಹಲವಾರು ಫೇಕ್ ಬಾಂಬ್ ಬೆದರಿಕೆಗಳು ವರದಿಯಾಗಿದ್ದು, ಅವು ಎಲ್ಲವೂ ಹುಸಿ ಕರೆ ಎಂದು ತಿಳಿದುಬಂದಿದೆ. ಇದಾದ ಬಳಿಕ ಅಲ್ಲಿ ಭದ್ರತಾ ಕ್ರಮಗಳನ್ನು ಕೂಡ ಹೆಚ್ಚಿಸಲಾಗಿದೆ. ಇತ್ತೀಚಿನ ಕೆಲ ತಿಂಗಳುಗಳಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣ ಹಾಗೂ ಪ್ರಮುಖ ಸ್ಥಳಗಳಿಗೆ ಸಾಕಷ್ಟು ಹುಸಿ ಬಾಂಬ್ ಬೆದರಿಕೆಗಳು ಬಂದಿವೆ. ಈ ಜೀವಂತ ಆರೋಪಗಳು ಭದ್ರತಾ ಜಾಗೃತಿಯನ್ನು ಹೆಚ್ಚಿಸಿದ್ದರೂ ಯಾವುದೇ ನಿಜವಾದ ಬೆದರಿಕೆ ಸಾಬೀತಾಗಿಲ್ಲ.
ಇತ್ತೀಚೆಗೆ ಬೆಂಗಳೂರು ನಗರದಲ್ಲಿ 40ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದವು. ಐಡಿ ಬಳಸಿಕೊಂಡು ಕಳುಹಿಸಲಾದ ಇ-ಮೇಲ್ನಲ್ಲಿ ತರಗತಿಗಳಲ್ಲಿ ಕಪ್ಪು ಪ್ಲಾಸ್ಟಿಕ್ ಬ್ಯಾಗ್ಗಳೊಳಗೆ ಹಾನಿಕಾರಕ ಸ್ಫೋಟಕ ವಸ್ತುಗಳನ್ನ ಹಾಕಲಾಗಿದೆ ಎಂದು ಹೇಳಲಾಗಿತ್ತು. ಇದರಿಂದ ವಿದ್ಯಾರ್ಥಿ, ಪೋಷಕರು ಮತ್ತು ಶಾಲಾ ಸಿಬ್ಬಂದಿಯಲ್ಲಿ ಆತಂಕ ಮನೆಮಾಡಿತ್ತು.
ಬಾಂಬ್ ಪತ್ತೆಹಚ್ಚುವ ಮತ್ತು ನಾಶಪಡಿಸುವ ತಂಡಗಳನ್ನು ತಕ್ಷಣವೇ ಈ ಎಲ್ಲ ಶಾಲೆಗಳಿಗೆ ಕಳುಹಿಸಿ ಪರಿಶೀಲನೆ ನಡೆಸಲಾಯಿತು. ಆದರೆ ಯಾವುದೇ ಸ್ಫೋಟಕ ವಸ್ತುಗಳು ಸಿಗಲಿಲ್ಲ. ಈ ಬೆದರಿಕೆಯನ್ನು ಅಧಿಕಾರಿಗಳು ಹುಸಿ ಬೆದರಿಕೆ ಎಂದು ಘೋಷಿಸಿದ್ದರು. ಇದೇ ರೀತಿಯ ಹೆಚ್ಚಿನ ಬೆದರಿಕೆಗಳು ಕಳೆದ ಕೆಲವು ತಿಂಗಳಲ್ಲಿ ಬೆಂಗಳೂರಿನಲ್ಲೂ ಮತ್ತು ದೆಹಲಿ ನಗರದಲ್ಲೂ ಬಂದಿದ್ದು, ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications