Bengaluru Schools: ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ, 40ಕ್ಕೂ ಹೆಚ್ಚು ಶಾಲೆಗಳಲ್ಲಿ ತಪಾಸಣೆ
ಬೆಂಗಳೂರಿನ ಪೋಷಕರು ಎಂದಿನಂತೆ ಇವತ್ತು ಕೂಡ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿದ್ದರು, ಹೀಗೆ ಮಕ್ಕಳು ಕೂಡ ಪಾಠ ಕೇಳಲು ಸಿದ್ಧರಾಗಿ ಶಾಲೆ ತಲುಪಿದ್ದರು. ಆದರೆ ದಿಢೀರ್ ಒಂದು ಆಘಾತ ಸೃಷ್ಟಿಸುವ ಸುದ್ದಿ ಸಿಕ್ಕಿತ್ತು. ಅಂದಹಾಗೆ ಕಿಡಿಗೇಡಿಗಳು ಈಗ ಬೆಂಗಳೂರು ನಗರದ 40ಕ್ಕೂ ಹೆಚ್ಚು ಶಾಲೆಗಳಿಗೆ 40 ಬಾಂಬ್ ಇಟ್ಟಿರೋದಾಗಿ ಇ-ಮೇಲ್ ಮೂಲಕ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ತಕ್ಷಣವೇ ಎಚ್ಚೆತ್ತು ಪರಿಶೀಲನೆ ನಡೆಸಲಾಗಿದೆ. ಹಾಗಿದ್ರೆ ಬೆಂಗಳೂರಿನ ಯಾವೆಲ್ಲಾ ಶಾಲೆಗಳಿಗೆ ಬೆದರಿಕೆ ಮೇಲ್ ಬಂದಿದೆ? ಈ ಬಗ್ಗೆ ಮಾಹಿತಿಗೆ ಮುಂದೆ ಓದಿ.
ಅಂದಹಾಗೆ ಶಾಲೆಗಳಲ್ಲಿ ಚಿಕ್ಕ ಚಿಕ್ಕ ಮಕ್ಕಳು ಇರುತ್ತಾರೆ, ಇದೇ ಕಾರಣಕ್ಕೆ ಪೋಕಷರು ಕೂಡ ತುಂಬಾನೆ ಆತಂಕ & ಯೋಚನೆಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಾರೆ. ಹೀಗಿದ್ದಾಗ ದಿಢೀರ್ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದರೆ ಹೇಗೆ ಇರಬೇಡ ಹೇಳಿ? ಹೌದು, ಇಂದು ಕನ್ನಡಿಗರ ರಾಜಧಾನಿ ಬೆಂಗಳೂರಿನಲ್ಲಿ ಕೂಡ ಇಂತಹದ್ದೇ ಘಟನೆ ನಡೆದು ಹೋಗಿದೆ. ಅಂದಹಾಗೆ ಬೆಂಗಳೂರಿನ ರಾಜರಾಜೇಶ್ವರಿ ನಗರ ಸೇರಿ ಕೆಂಗೇರಿ ಹಾಗೆ ಬೆಂಗಳೂರಿನ ಹಲವು ಶಾಲೆಗಳಿಗೆ ಈ ರೀತಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯ ಹಾಕಲಾಗಿದೆ ಅಂತಾ ಆರೋಪ ಮಾಡಲಾಗಿದೆ. ಇನ್ನು ಈ ಸುದ್ದಿ ಕೇಳಿದ ತಕ್ಷಣವೇ ಮಕ್ಕಳ ಪೋಷಕರು ಕೂಡ ಹೆದರಿಬಿಟ್ಟರು.

40ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬೆದರಿಕೆ
ಅಂದಹಾಗೆ ಪದೇ ಪದೇ ಶಾಲೆಗಳಿಗೆ ಈ ರೀತಿಯಾಗಿ ಹುಸಿ ಬಾಂಬ್ ಬೆದರಿಕೆ ಬರುತ್ತಿದ್ದು, ಇತ್ತೀಚೆಗೆ ಈ ರೀತಿ ಘಟನೆಗಳು ಕಡಿಮೆ ಆಗಿದ್ದವು. ಆದರೆ ಇಂದು ದಿಢೀರ್ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದು, ಬ್ಯಾಗ್ ಒಳಗೆ ಬಾಂಬ್ ಇಟ್ಟಿದ್ದೀವಿ ಅಂತಾ ಕಿಡಿಗೇಡಿ ಕಿರಾತಕರು ಮೇಲ್ ಮೂಲಕ ಹೇಳಿದ್ದಾರೆ. ಈ ಘಟನೆ ಮಕ್ಕಳ ಪೋಷಕರಿಗೆ ಕೂಡ ಭಾರಿ ಆತಂಕ ಮೂಡಿಸಿದ್ದು, ತಕ್ಷಣ ಶಾಲೆಗಳ ಬಳಿ ಓಡಿ ಬಂದು ತಮ್ಮ ತಮ್ಮ ಮಕ್ಕಳ ಯೋಗಕ್ಷೇಮ ವಿಚಾರಿಸಿದ್ದಾರೆ. ಹಾಗೇ ಹಲವು ಪೋಷಕರು ತಕ್ಷಣ ತಮ್ಮ ಮಕ್ಕಳನ್ನ ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗಿದ್ದಾರೆ.
ಬೆದರಿಕೆ ಹಾಕಿದ್ದು ಯಾವ ಮೇಲ್ ಐಡಿ?
ರೋಡ್ ಕಿಲ್ ಆಟೊಮಿಕ್ ಎಂಬ ಹೆಸರಿನಲ್ಲಿ ಇದೀಗ ಬೆಂಗಳೂರಿನ 40ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಮಾಡಲಾಗಿದೆ. ಇನ್ನು ಬೆದರಿಕೆ ಮೇಲ್ ಬಂದ ಶಾಲೆಗಳಲ್ಲಿ ತಕ್ಷಣ ಪರಿಶೀಲನೆ ನಡೆಸಲಾಗಿದ್ದು, ಭಾರಿ ಕಟ್ಟೆಚ್ಚರ ವಹಿಸಲಾಗಿದೆ. ಇನ್ನೊಂದು ಕಡೆ ಕರ್ನಾಟಕ ರಾಜಧಾನಿ ಬೆಂಗಳೂರು ಮಾತ್ರವಲ್ಲದೆ ರಾಷ್ಟ್ರ ರಾಜಧಾನಿ ದೆಹಲಿ ನಗರದಲ್ಲಿ ಕೂಡ ಬಾಂಬ್ ಬೆದರಿಕೆ ಮೇಲ್ ಬಂದಿದೆ. ಇನ್ನು ಈ ವಿಚಾರ ತಿಳಿದ ತಕ್ಷಣ ಬಾಂಬ್ ಸ್ಕ್ವಾಡ್ ಸಿಬ್ಬಂದಿ ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಈ ರೀತಿಯ ಘಟನೆಗಳ ಬಗ್ಗೆ ಮಕ್ಕಳ ಪೋಷಕರು ತೀವ್ರ ಆಕ್ರೋಶ ಹೊರ ಹಾಕುತ್ತಿದ್ದಾರೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications