Bomb Threat: 'ನಾನು ಕೂಡ ಟೆರರಿಸ್ಟ್, ಕನ್ನಡಿಗರ ವಿರೋಧಿ': ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ!
ಬೆಂಗಳೂರು, ನವೆಂಬರ್ 18: ಇತ್ತೀಚಿನ ದಿನಗಳಲ್ಲಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚುತ್ತಿದೆ. ಶಾಲೆಗಳು, ವಿಮಾನ ನಿಲ್ದಾಣಗಳು ಹಾಗೂ ರಾಜಕಾರಣಿಗಳ ಮನೆಗಳನ್ನ ಸ್ಫೋಟಿಸುವುದಾಗಿ ಹುಸಿ ಬಾಂಬ್ ಬೆದರಿಕೆ ಮೇಲ್ಗಳು ಬರುತ್ತಲೇ ಇದೆ. ಕಳೆದ ಒಂದು ತಿಂಗಳಿನಲ್ಲಿ ಮುಖ್ಯಮಂತ್ರಿಗಳ ನಿವಾಸಕ್ಕೆ ಬೆದರಿಕೆ ಕರೆ ಬಂದಿತ್ತು. ಅಲ್ಲದೇ ಖಾಸಗಿ ಶಾಲೆಗಳು ಹಾಗೂ ಕಾಲೇಜುಗಳಿಗೆ ಸತತವಾಗಿ ಬೆದರಿಕೆಗಳು ಬರುತ್ತಲೇ ಇವೆ. ಇದೀಗ ನಮ್ಮ ಮೆಟ್ರೋ ನಿಲ್ದಾಣಕ್ಕೂ ಸಹ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ.
ಬೆಂಗಳೂರಿನ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬಂದಿರುವ ಬೆದರಿಕೆ ಇಮೇಲ್ ಒಂದು ಬಿಎಂಆರ್ಸಿಎಲ್ನಲ್ಲಿ ಆತಂಕ ಸೃಷ್ಟಿಸಿದೆ. ನವೆಂಬರ್ 14ರ ರಾತ್ರಿ ಸುಮಾರು 11.30ಕ್ಕೆ ಬಿಎಂಆರ್ಸಿಎಲ್ ಅಧಿಕೃತ ಇಮೇಲ್ಗೆ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆಯ ಸಂದೇಶ ಕಳುಹಿಸಿದ್ದ. ವ್ಯಕ್ತಿ ತಾನು ಕಳಿಸಿದ ಇ-ಮೇಲ್ನಲ್ಲಿ ತನ್ನ ವಿಚ್ಛೇದಿತ ಪತ್ನಿಗೆ ಡ್ಯೂಟಿ ನಂತರ ಮಾನಸಿಕ ಕಿರುಕುಳ ನೀಡಿದರೆ ಮೆಟ್ರೋ ನಿಲ್ದಾಣ ಬ್ಲಾಸ್ಟ್ ಮಾಡುತ್ತೇನೆಂದು ಬರೆದಿದ್ದಾನೆ.

ಇನ್ನೂ ಇಮೇಲ್ನಲ್ಲಿ, ಮೆಟ್ರೋ ಸಿಬ್ಬಂದಿಯಾದ ತನ್ನ ವಿಚ್ಛೇದಿತ ಪತ್ನಿಗೆ ಡ್ಯೂಟಿ ನಂತರ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ನಿಮ್ಮ ಒಂದು ಮೆಟ್ರೋ ನಿಲ್ದಾಣ ಬ್ಲಾಸ್ಟ್ ಮಾಡಬೇಕಾಗುತ್ತದೆ. ನಾನು ಉಗ್ರಗಾಮಿಯಂತೆ, ಅದರಲ್ಲೂ ಕನ್ನಡಿಗರ ವಿರುದ್ಧ ಎಂದು ಬೆದರಿಕೆ ಹಾಕಲಾಗಿದೆ. ಮೇಲ್ ಪರಿಶೀಲಿಸಿದ ಬಳಿಕ ಬಿಎಂಆರ್ಸಿಎಲ್ ಅಧಿಕಾರಿ ತಕ್ಷಣವೇ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ದೂರು ಆಧರಿಸಿ ವಿಲ್ಸನ್ ಗಾರ್ಡನ್ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಇಮೇಲ್ ಮೂಲಕ ಬಾಂಬ್ ಬೆದರಿಕೆ
'If ever I come to know that your metro employees are torturing mentally to my past divorced wife, after duty hours, be careful, one of your metro station gets blasted ... I am also a terrorists liker PATRIOTIC against KANNADIGAS' ಎಂದು ಇಮೇಲ್ ನಲ್ಲಿ ಅಪರಿಚಿತ ವ್ಯಕ್ತಿ ಬರೆದಿದ್ದಾನೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications