Bomb Threat: ಬೆಂಗಳೂರು ಏರ್ಪೋರ್ಟ್, ಮಾಲ್ಗಳನ್ನ ಉಡೀಸ್ ಮಾಡ್ತೀವಿ: ಬಾಂಬ್ ಬೆದರಿಕೆ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಓರಿಯನ್ ಮಾಲ್, ಲುಲು ಮಾಲ್, ಫೋರಂ ಸೌತ್ ಮಾಲ್, ಮಲ್ಲೇಶ್ವರದ ಮಂತ್ರಿ ಸ್ಕ್ವೇರ್ ಮಾಲ್ ಸೇರಿದಂತೆ ಇತರೆ ಮಾಲ್ಗಳಲ್ಲಿ ಸಂಜೆ 7 ಗಂಟೆಗೆ ಬಾಂಬ್ ಸ್ಫೋಟಿಸುತ್ತೇವೆ ಎಂದು ಬೆದರಿಕೆ
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನಗರದ ಪ್ರತಿಷ್ಠಿತ ಮಾಲ್ಗಳನ್ನು ಉಡೀಸ್ ಮಾಡ್ತೀವಿ ಎಂದು ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿರುವುದು ಬೆಳಕಿಗೆ ಬಂದಿದೆ. "ಇದು ಜೈಶ್-ಎ-ಮೊಹಮ್ಮದ್ ವೈಟ್ ಕಾಲರ್ ಭಯೋತ್ಪಾದಕ ತಂಡದಿಂದ ಬಂದ ಎಚ್ಚರಿಕೆ" ಎಂದು ಮೇಲ್ನಲ್ಲಿ ಉಲ್ಲೇಖಿಸಲಾಗಿದೆ. ನವೆಂಬರ್ 30ರಂದು ಬೆಂಗಳೂರು ನಗರ ಪೊಲೀಸ್ ಕಮೀಷನರ್ ಅಧಿಕೃತ ಇಮೇಲ್ಗೆ ಈ ಬಾಂಬ್ ಬೆದರಿಕೆ ಬಂದಿದ್ದು, ಕೆಂಪೇಗೌಡ ಏರ್ಪೋರ್ಟ್ ಮತ್ತು ನಗರದ ಹಲವು ಮಾಲ್ಗಳ ಮೇಲೆ ದಾಳಿ ನಡೆಸುವ ವಾರ್ನಿಂಗ್ ಕೊಡಲಾಗಿದೆ.
"ನಾವು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಓರಿಯನ್ ಮಾಲ್, ಲುಲು ಮಾಲ್, ಫೋರಂ ಸೌತ್ ಮಾಲ್, ಮಲ್ಲೇಶ್ವರದ ಮಂತ್ರಿ ಸ್ಕ್ವೇರ್ ಮಾಲ್ ಸೇರಿದಂತೆ ಇತರೆ ಮಾಲ್ಗಳಲ್ಲಿ ಸಂಜೆ 7 ಗಂಟೆಗೆ ಬಾಂಬ್ ಸ್ಫೋಟಿಸುತ್ತೇವೆ. ನಮ್ಮ ರಾಷ್ಟ್ರಕ್ಕೆ ಉತ್ತಮವಾಗಿ ಸೇವೆ ಸಲ್ಲಿಸಿದ್ದಕ್ಕಾಗಿ ನಮ್ಮ ಅಲ್ಲಾಹನಿಗೆ ಮತ್ತು ನಮ್ಮ ಮಾಸ್ಟರ್ ಮೋಹಿತ್ಗೆ ಧನ್ಯವಾದಗಳು" ಎಂದು ಆ ಇಮೇಲ್ನಲ್ಲಿ ಬರೆಯಲಾಗಿದೆ.

"ಮೋಹಿತ್ ಕುಮಾರ್" ಎಂಬ ಹೆಸರಲ್ಲಿ ಈ ಇಮೇಲ್ ಬಂದಿದೆ. ಇಮೇಲ್ನಲ್ಲಿ ಫೋನ್ ಸಂಖ್ಯೆಯೂ ಸೇರಿದ್ದು, ಆ ಸಂಖ್ಯೆಗೆ ಕರೆ ಮಾಡಿ ಹಣ ಪಾವತಿಸುವ ಮೂಲಕ ಈ ಬಾಂಬ್ ದಾಳಿಯನ್ನು ತಡೆಯಬಹುದು ಎಂದು ಹೇಳಿರುವುದಾಗಿ ತಿಳಿದುಬಂದಿದೆ. ಇಮೇಲ್ನಿಂದ ಬೆದರಿಕೆ ಬಂದ ಕೂಡಲೇ ಬೆಂಗಳೂರು ಪೊಲೀಸರು ತಕ್ಷಣವೇ ಭದ್ರತಾ ತಂಡಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪರಿಶೀಲನೆ ಕೂಡ ನಡೆಸಿದ್ದು, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದ ಸಹಾಯದಿಂದ ಏರ್ಪೋರ್ಟ್ ಹಾಗೂ ನಗರ ಪ್ರಮುಖ ಮಾಲ್ಗಳಲ್ಲಿ ಪರಿಶೀಲನೆ ನಡೆಸಲಾಯಿತು. ಆದರೆ ಯಾವುದೇ ಸ್ಫೋಟಕಗಳು ಕಂಡುಬರದ ಕಾರಣ ಇದು ಸುಳ್ಳು ಬೆದರಿಕೆ ಎಂದು ದೃಢಪಡಿಸಿದ್ದಾರೆ.
ಈ ಸಂಬಂಧ ದೂರು ದಾಖಲಾಗಿದೆ. ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66F (ಸೈಬರ್ ಭಯೋತ್ಪಾದನೆ) ಅಡಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದಿದ್ದಾರೆ. ಮೋಹಿತ್ ಕುಮಾರ್ ಎಂಬ ಹೆಸರನ್ನ ಉಲ್ಲೇಖಿಸಿರುವ ಇಮೇಲ್ನ ಹಿಂದಿನ ವ್ಯಕ್ತಿಯನ್ನು ಪತ್ತೆಹಚ್ಚಲು ಸೈಬರ್ ಫೋರೆನ್ಸಿಕ್ ಮೊರೆ ಹೋಗಿದ್ದಾರೆ.
ಇಮೇಲ್ನಲ್ಲಿ ತಿಳಿಸಿರುವ ವ್ಯಕ್ತಿ ಅಸಲಿಯೋ ಅಥವಾ ನಕಲಿಯೋ? ಅಥವಾ ಬೇರೆ ಯಾರಾದರೂ ಈ ಐಡಿ ದುರ್ಬಳಕೆ ಮಾಡಿಕೊಂಡು ಈ ಕೃತ್ಯ ಎಸಗುತ್ತಿದ್ದಾರೋ ಎನ್ನುವುದನ್ನು ಪತ್ತೆ ಹಚ್ಚುವ ಕೆಲಸದಲ್ಲಿ ನಿರತರಾಗಿದ್ದಾರೆ. ಆದರೆ ವರದಿಗಳ ಪ್ರಕಾರಣ ಜನರಲ್ಲಿ ಆತಂಕ ಹುಟ್ಟಿಸಲು ಅಥವಾ ಹಣ ಸುಲಿಗೆ ಮಾಡಲು ಈ ರೀತಿ ಭಯೋತ್ಪಾದಕ ಸಂಘಟನೆಯ ಹೆಸರನ್ನು ಬಳಸುತ್ತಾರೆ ಎಂದು ಶಂಕಿಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications