Bomb Threats: ಬೆಂಗಳೂರಿನ ಪ್ರತಿಷ್ಠಿತ ಕಾಲೇಜುಗಳಿಗೆ ಬಾಂಬ್ ಬೆದರಿಕೆ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವು ಎಲ್ಲರವನ್ನೂ ಬೆಚ್ಚಿಬೀಳಿಸಿತ್ತು. ಇದರ ಆರೋಪಿಗಳನ್ನು ಬೆನ್ನತ್ತಿದಾಗ ಬಿಜೆಪಿ ಕಚೇರಿ ಸ್ಫೋಟಿಸುವ ವಿಚಾರ ಕೂಡ ಬೆಳಕಿಗೆ ಬಂದಿತ್ತು. ಇದೀಗ ಬೆಂಗಳೂರಿನ ಪ್ರತಿಷ್ಠಿತ ಕಾಲೇಜುಗಳಿಗೂ ಕಿಡಿಗೇಡಿಗಳಿಂದ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ ಎಂದು ವರದಿಯಾಗಿವೆ.
ಹೌದು, ಉದ್ಯಾನನಗರಿಯ ದಕ್ಷಿಣ ವಿಭಾಗದ ಮೂರು ಹೆಸರಾಂತ ಕಾಲೇಜುಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಕೂಡಲೇ ಈ ವಿಚಾರ ಪೊಲೀಸರಿಗೆ ತಿಳಿಸಿದ್ದರಿಂದ ಕಾಲೇಜು ಆವರಣಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ), ಬಿಎಂಎಸ್ಸಿಇ ಹಾಗೂ ಎಂಎಸ್ಆರ್ಐಟಿ ಕಾಲೇಜುಗಳಿಗೆ ಇ-ಮೇಲ್ನಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆ ಮೆಸೇಜ್ ಬಂದಿದೆ. ಇನ್ನು ಕೂಡಲೇ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಬಾಂಬ್ ಪತ್ತೆದಳ ಹಾಗೂ ಹನುಮಂತನಗರ ಠಾಣೆ ಪೊಲೀಸರು ಜಮಾಯಿಸಿ, ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲೇ ಈ ರೀತಿ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದವು. ಕಳೆದ ವಾರ ಬೆಂಗಳೂರಿನ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್ಗೆ, ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹೋಟೆಲ್ವೊಂದಕ್ಕೆ ಇದೇ ರೀತಿ ಇಮೇಲ್ನಲ್ಲಿ ಸಂದೇಶ ಬಂದಿತ್ತು. ಈಗ ಮತ್ತೆ ವಿವಿಧ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿರುವುದರಿಂದ ಜನ ಸಿಟಿ ಮಂದಿ ಬೆಚ್ಚಿಬೀಳುತ್ತಿದ್ದಾರೆ.
ಸತ್ತನಾಥಪುರಂ ಬಿ ಶೇಖರ್ ಎಂಬ ಇ-ಮೇಲ್ ವಿಳಾಸದಿಂದ ಈ ರೀತಿ ಸಂದೇಶ ಬಂದಿದೆ. ಕಾಲೇಜಿನಲ್ಲಿ ಐಇಡಿ ಸ್ಫೋಟಕಗಳನ್ನು ಇಟ್ಟಿದ್ದು, ಸಂಜೆ 5 ಗಂಟೆಯೊಳಗೆ ಎಲ್ಲರೂ ಕಾಲೇಜು ಬಿಟ್ಟು ಹೋಗಿ ಎಂದು ಸಂದೇಶದಲ್ಲಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಬಿಎಂಎಸ್ ಕಾಲೇಜು ಮಾತ್ರವಲ್ಲದೆ, ಬಿಐಟಿ, ಎಂಎಸ್ಆರ್ಐಟಿ ಕಾಲೇಜುಗಳಿಗೂ ಇದೇ ಮಾದರಿಯಲ್ಲಿ ಬಾಂಬ್ ಬೆದರಿಕೆ ಹಾಕಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಎಲ್ಲ ಕಾಲೇಜುಗಳು ಬೆಂಗಳೂರು ದಕ್ಷಿಣ ಭಾಗದಲ್ಲೇ ಇದ್ದು, ಒಂದೇ ದಿನವೇ ಈ ರೀತಿ ಬೆದರಿಕೆ ಮೇಲ್ ಬಂದಿರುವುದರಿಂದ ಯಾರೋ ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರತಿಷ್ಠಿತ ಎಂ.ಎಸ್.ರಾಮಯ್ಯ ಕಾಲೇಜಿಗೂ ಸಹ ಕಿಡಿಗೇಡಿಗಳು ಬಾಂಬ್ ಬೆದರಿಕೆ ಇ-ಮೇಲ್ ಕಳಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇಲ್ಲಿಯೂ ಕಾಲೇಜಿನ ಸ್ಥಳಕ್ಕೆ ಸದಾಶಿವನಗರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇ-ಮೇಲ್ ಕಳುಹಿಸಿರುವ ದುಷ್ಕರ್ಮಿಗಳ ಪತ್ತೆಗೂ ಪೊಲೀಸರು ಬಲೆ ಬೀಸಿದ್ದಾರೆ.
ಇತ್ತೀಚೆಗೆ ಈ ರೀತಿಯ ಬೆದರಿಕೆ ಕರೆಗಳು ಬೆಂಗಳೂರಿನ ಹಲವು ಭಾಗಗಳಲ್ಲಿ ವರದಿಯಾಗುತ್ತಿವೆ. ಇದರಿಂದ ಬೆಚ್ಚಿಬಿದ್ದಿರುವ ಸಿಲಿಕಾನ ಸಿಟಿ ಜನರು ಜೀವಭಯದಲ್ಲೇ ಹೊರಗಡೆ ಹೋಗುವಂತಾಗಿದೆ. ಪೊಲೀಸರು ಇಂತಹ ಕೃತ್ಯಗಳ ಬಗ್ಗೆ ತನಿಖೆ ಚುರುಕುಗೊಳಿಸಿ, ದುಷ್ಕರ್ಮಿಗಳನ್ನು ಪತ್ತೆ ಹಚ್ಚಬೇಕು ಎಂದು ಒತ್ತಾಯಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications