Bomb Threats: ಬೆಂಗಳೂರಿನ ಪ್ರತಿಷ್ಠಿತ ಕಾಲೇಜುಗಳಿಗೆ ಬಾಂಬ್ ಬೆದರಿಕೆ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವು ಎಲ್ಲರವನ್ನೂ ಬೆಚ್ಚಿಬೀಳಿಸಿತ್ತು. ಇದರ ಆರೋಪಿಗಳನ್ನು ಬೆನ್ನತ್ತಿದಾಗ ಬಿಜೆಪಿ ಕಚೇರಿ ಸ್ಫೋಟಿಸುವ ವಿಚಾರ ಕೂಡ ಬೆಳಕಿಗೆ ಬಂದಿತ್ತು. ಇದೀಗ ಬೆಂಗಳೂರಿನ ಪ್ರತಿಷ್ಠಿತ ಕಾಲೇಜುಗಳಿಗೂ ಕಿಡಿಗೇಡಿಗಳಿಂದ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ ಎಂದು ವರದಿಯಾಗಿವೆ.
ಹೌದು, ಉದ್ಯಾನನಗರಿಯ ದಕ್ಷಿಣ ವಿಭಾಗದ ಮೂರು ಹೆಸರಾಂತ ಕಾಲೇಜುಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಕೂಡಲೇ ಈ ವಿಚಾರ ಪೊಲೀಸರಿಗೆ ತಿಳಿಸಿದ್ದರಿಂದ ಕಾಲೇಜು ಆವರಣಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ), ಬಿಎಂಎಸ್ಸಿಇ ಹಾಗೂ ಎಂಎಸ್ಆರ್ಐಟಿ ಕಾಲೇಜುಗಳಿಗೆ ಇ-ಮೇಲ್ನಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆ ಮೆಸೇಜ್ ಬಂದಿದೆ. ಇನ್ನು ಕೂಡಲೇ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಬಾಂಬ್ ಪತ್ತೆದಳ ಹಾಗೂ ಹನುಮಂತನಗರ ಠಾಣೆ ಪೊಲೀಸರು ಜಮಾಯಿಸಿ, ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲೇ ಈ ರೀತಿ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದವು. ಕಳೆದ ವಾರ ಬೆಂಗಳೂರಿನ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್ಗೆ, ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹೋಟೆಲ್ವೊಂದಕ್ಕೆ ಇದೇ ರೀತಿ ಇಮೇಲ್ನಲ್ಲಿ ಸಂದೇಶ ಬಂದಿತ್ತು. ಈಗ ಮತ್ತೆ ವಿವಿಧ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿರುವುದರಿಂದ ಜನ ಸಿಟಿ ಮಂದಿ ಬೆಚ್ಚಿಬೀಳುತ್ತಿದ್ದಾರೆ.
ಸತ್ತನಾಥಪುರಂ ಬಿ ಶೇಖರ್ ಎಂಬ ಇ-ಮೇಲ್ ವಿಳಾಸದಿಂದ ಈ ರೀತಿ ಸಂದೇಶ ಬಂದಿದೆ. ಕಾಲೇಜಿನಲ್ಲಿ ಐಇಡಿ ಸ್ಫೋಟಕಗಳನ್ನು ಇಟ್ಟಿದ್ದು, ಸಂಜೆ 5 ಗಂಟೆಯೊಳಗೆ ಎಲ್ಲರೂ ಕಾಲೇಜು ಬಿಟ್ಟು ಹೋಗಿ ಎಂದು ಸಂದೇಶದಲ್ಲಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಬಿಎಂಎಸ್ ಕಾಲೇಜು ಮಾತ್ರವಲ್ಲದೆ, ಬಿಐಟಿ, ಎಂಎಸ್ಆರ್ಐಟಿ ಕಾಲೇಜುಗಳಿಗೂ ಇದೇ ಮಾದರಿಯಲ್ಲಿ ಬಾಂಬ್ ಬೆದರಿಕೆ ಹಾಕಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಎಲ್ಲ ಕಾಲೇಜುಗಳು ಬೆಂಗಳೂರು ದಕ್ಷಿಣ ಭಾಗದಲ್ಲೇ ಇದ್ದು, ಒಂದೇ ದಿನವೇ ಈ ರೀತಿ ಬೆದರಿಕೆ ಮೇಲ್ ಬಂದಿರುವುದರಿಂದ ಯಾರೋ ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರತಿಷ್ಠಿತ ಎಂ.ಎಸ್.ರಾಮಯ್ಯ ಕಾಲೇಜಿಗೂ ಸಹ ಕಿಡಿಗೇಡಿಗಳು ಬಾಂಬ್ ಬೆದರಿಕೆ ಇ-ಮೇಲ್ ಕಳಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇಲ್ಲಿಯೂ ಕಾಲೇಜಿನ ಸ್ಥಳಕ್ಕೆ ಸದಾಶಿವನಗರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇ-ಮೇಲ್ ಕಳುಹಿಸಿರುವ ದುಷ್ಕರ್ಮಿಗಳ ಪತ್ತೆಗೂ ಪೊಲೀಸರು ಬಲೆ ಬೀಸಿದ್ದಾರೆ.
ಇತ್ತೀಚೆಗೆ ಈ ರೀತಿಯ ಬೆದರಿಕೆ ಕರೆಗಳು ಬೆಂಗಳೂರಿನ ಹಲವು ಭಾಗಗಳಲ್ಲಿ ವರದಿಯಾಗುತ್ತಿವೆ. ಇದರಿಂದ ಬೆಚ್ಚಿಬಿದ್ದಿರುವ ಸಿಲಿಕಾನ ಸಿಟಿ ಜನರು ಜೀವಭಯದಲ್ಲೇ ಹೊರಗಡೆ ಹೋಗುವಂತಾಗಿದೆ. ಪೊಲೀಸರು ಇಂತಹ ಕೃತ್ಯಗಳ ಬಗ್ಗೆ ತನಿಖೆ ಚುರುಕುಗೊಳಿಸಿ, ದುಷ್ಕರ್ಮಿಗಳನ್ನು ಪತ್ತೆ ಹಚ್ಚಬೇಕು ಎಂದು ಒತ್ತಾಯಿಸಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications