ನಾಳಿನ ವಿವೇಕಾನಂದರಾಗಿ: AAP ನಾಯಕಿ ಶಾಂತಲಾ ದಾಮ್ಲೆ ಕರೆ
"ಇಂದಿನ ಯುವಜನತೆ ಇತಿಹಾಸದ ವಿವೇಕಾನಂದರನ್ನು ಸ್ಮರಿಸುವುದು ಮಾತ್ರವಲ್ಲ, ನಾಳಿನ ವಿವೇಕಾನಂದರೂ ಆಗುವ ಪಣ ತೊಡಬೇಕು ಮತ್ತು ದೇಶದ ಭವಿಷ್ಯವನ್ನು ರೂಪಿಸುವಲ್ಲಿಮಹತ್ತರ ಪಾತ್ರ ವಹಿಸಬೇಕು. ಆಧುನಿಕ ದಿನದ ಸಮಸ್ಯೆಗಳನ್ನುಹಳೆಯ ಚಿಂತನೆಗಳ ಮೂಲಕ ಪರಿಹರಿಸಲಾಗುವುದಿಲ್ಲ."
"ಭಾರತದ ಜನಸಂಖ್ಯೆಯಲ್ಲಿ ಸುಮಾರು 35% ಇರುವಉತ್ಸಾಹಭರಿತ ಯುವಶಕ್ತಿ ಇಂದು ಬದಲಾವಣೆಯಹರಿಕಾರರಾಗಬೇಕು " ಎಂದು ಬಿಬಿಎಂಪಿ ಕ್ಯಾಂಪೇನ್ ತಂಡದ ಉಸ್ತುವಾರಿ, ಆಮ್ ಆದ್ಮಿ ಪನಾಯಕಿಕ್ಷದ ಬೆಂಗಳೂರು ಘಟಕದ ಶಾಂತಲಾ ದಾಮ್ಲೆ ಕರೆ ನೀಡಿದರು.
ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ, 35 ವರ್ಷದೊಳಗಿನ ಯುವಜನತೆಯ ನೇತೃತ್ವದಲ್ಲಿನಡೆಯಲಿರುವ "ಬೊಂಬಾಟ್ ಬೆಂಗಳೂರು ಶ್ಯಾಡೋಕೌನ್ಸಿಲ್" ಎಂಬ ವಿಶಿಷ್ಟ ಕಾರ್ಯಕ್ರಮವೊಂದನ್ನುಪ್ರಾರಂಭಿಸಿದ್ದು, ಈ ಸಂದರ್ಭದಲ್ಲಿ ದಾಮ್ಲೆ ಮಾತನಾಡುತ್ತಿದ್ದರು.

"ಬೆಂಗಳೂರಿನ ನಾಗರಿಕರು ಅಸಮರ್ಥ ಆಡಳಿತ ಮತ್ತು ಭ್ರಷ್ಟಾಚಾರದ ಬೇಗೆಯನ್ನು ಅನುಭವಿಸುತ್ತಿದ್ದಾರೆ. ಕಸ, ಸಂಚಾರದಟ್ಟಣೆ, ಪರಿಸರ ಮಾಲಿನ್ಯ, ನಶಿಸುತ್ತಿರುವ ಕೆರೆಗಳು ಮುಂತಾದ ಅನೇಕ ಸಮಸ್ಯೆಗಳನ್ನು ಎಲ್ಲಾ ಪಕ್ಷಗಳು ನಿರ್ಲಕ್ಷ್ಯಿಸುತ್ತಲೇ ಬಂದಿವೆ. ಅನೇಕ ಯುವಕರು ಪ್ರಾಣ ತೆತ್ತಸಂದರ್ಭಗಳೂ ಇವೆ. ಸೇವಿಸುವ ಗಾಳಿ ಮತ್ತು ಕುಡಿಯುವ ನೀರಿನ ಮಾಲಿನ್ಯದಿಂದ ನಮ್ಮ ಮುಂದಿನ ಪೀಳಿಗೆಯ ಆರೋಗ್ಯ ನಿರಂತರ ದಾಳಿಗೊಳಗಾಗಿದೆ" ಎಂದು ಅವರು ವಿಷಾದ ವ್ಯಕ್ತಪಡಿಸಿದರು.
"ಇದಕ್ಕೆ ವ್ಯತಿರಿಕ್ತವಾಗಿ, ಪ್ರಾಮಾಣಿಕತೆ, ಬದ್ಧತೆ, ಹೊಸಚಿಂತನೆಗಳು ಮತ್ತು ರಾಜಕೀಯ ಇಚ್ಛಾಶಕ್ತಿ ಒಂದಾದಲ್ಲಿ ಕೇವಲ 4 ವರ್ಷಗಳಲ್ಲಿ ಏನೆಲ್ಲಾ ಸಾಧಿಸಬಹುದು ಎಂದು ದೆಹಲಿಯಲ್ಲಿ ಆಪ್ ಸರ್ಕಾರ ತೋರಿಸಿದೆ. ಈ ಸಾಧನೆಯಲ್ಲಿ ಸ್ಥಳೀಯ ಆಡಳಿತದಲ್ಲಿ ನಾಗರಿಕರ, ಅದರಲ್ಲೂ ಯುವಜನತೆಯ, ಭಾಗವಹಿಸುವಿಕೆಯೂ ಪ್ರಮುಖ ಕಾರಣ. ನಮ್ಮ ಕನಸು ಮತ್ತುಗುರಿ "ಬೊಂಬಾಟ್ ಬೆಂಗಳೂರು". ಬಿಬಿಎಂಪಿ ಯಿಂದಪ್ರಾರಂಭಿಸಿ, ಬೆಂಳೂರಿನ ಆಡಳಿತ ವ್ಯವಸ್ಥೆಯನ್ನು ನವೀಕರಿಸುವುದು" ಎಂದು ಅವರು ಹೇಳಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications