ನಾಳಿನ ವಿವೇಕಾನಂದರಾಗಿ: AAP ನಾಯಕಿ ಶಾಂತಲಾ ದಾಮ್ಲೆ ಕರೆ
"ಇಂದಿನ ಯುವಜನತೆ ಇತಿಹಾಸದ ವಿವೇಕಾನಂದರನ್ನು ಸ್ಮರಿಸುವುದು ಮಾತ್ರವಲ್ಲ, ನಾಳಿನ ವಿವೇಕಾನಂದರೂ ಆಗುವ ಪಣ ತೊಡಬೇಕು ಮತ್ತು ದೇಶದ ಭವಿಷ್ಯವನ್ನು ರೂಪಿಸುವಲ್ಲಿಮಹತ್ತರ ಪಾತ್ರ ವಹಿಸಬೇಕು. ಆಧುನಿಕ ದಿನದ ಸಮಸ್ಯೆಗಳನ್ನುಹಳೆಯ ಚಿಂತನೆಗಳ ಮೂಲಕ ಪರಿಹರಿಸಲಾಗುವುದಿಲ್ಲ."
"ಭಾರತದ ಜನಸಂಖ್ಯೆಯಲ್ಲಿ ಸುಮಾರು 35% ಇರುವಉತ್ಸಾಹಭರಿತ ಯುವಶಕ್ತಿ ಇಂದು ಬದಲಾವಣೆಯಹರಿಕಾರರಾಗಬೇಕು " ಎಂದು ಬಿಬಿಎಂಪಿ ಕ್ಯಾಂಪೇನ್ ತಂಡದ ಉಸ್ತುವಾರಿ, ಆಮ್ ಆದ್ಮಿ ಪನಾಯಕಿಕ್ಷದ ಬೆಂಗಳೂರು ಘಟಕದ ಶಾಂತಲಾ ದಾಮ್ಲೆ ಕರೆ ನೀಡಿದರು.
ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ, 35 ವರ್ಷದೊಳಗಿನ ಯುವಜನತೆಯ ನೇತೃತ್ವದಲ್ಲಿನಡೆಯಲಿರುವ "ಬೊಂಬಾಟ್ ಬೆಂಗಳೂರು ಶ್ಯಾಡೋಕೌನ್ಸಿಲ್" ಎಂಬ ವಿಶಿಷ್ಟ ಕಾರ್ಯಕ್ರಮವೊಂದನ್ನುಪ್ರಾರಂಭಿಸಿದ್ದು, ಈ ಸಂದರ್ಭದಲ್ಲಿ ದಾಮ್ಲೆ ಮಾತನಾಡುತ್ತಿದ್ದರು.

"ಬೆಂಗಳೂರಿನ ನಾಗರಿಕರು ಅಸಮರ್ಥ ಆಡಳಿತ ಮತ್ತು ಭ್ರಷ್ಟಾಚಾರದ ಬೇಗೆಯನ್ನು ಅನುಭವಿಸುತ್ತಿದ್ದಾರೆ. ಕಸ, ಸಂಚಾರದಟ್ಟಣೆ, ಪರಿಸರ ಮಾಲಿನ್ಯ, ನಶಿಸುತ್ತಿರುವ ಕೆರೆಗಳು ಮುಂತಾದ ಅನೇಕ ಸಮಸ್ಯೆಗಳನ್ನು ಎಲ್ಲಾ ಪಕ್ಷಗಳು ನಿರ್ಲಕ್ಷ್ಯಿಸುತ್ತಲೇ ಬಂದಿವೆ. ಅನೇಕ ಯುವಕರು ಪ್ರಾಣ ತೆತ್ತಸಂದರ್ಭಗಳೂ ಇವೆ. ಸೇವಿಸುವ ಗಾಳಿ ಮತ್ತು ಕುಡಿಯುವ ನೀರಿನ ಮಾಲಿನ್ಯದಿಂದ ನಮ್ಮ ಮುಂದಿನ ಪೀಳಿಗೆಯ ಆರೋಗ್ಯ ನಿರಂತರ ದಾಳಿಗೊಳಗಾಗಿದೆ" ಎಂದು ಅವರು ವಿಷಾದ ವ್ಯಕ್ತಪಡಿಸಿದರು.
"ಇದಕ್ಕೆ ವ್ಯತಿರಿಕ್ತವಾಗಿ, ಪ್ರಾಮಾಣಿಕತೆ, ಬದ್ಧತೆ, ಹೊಸಚಿಂತನೆಗಳು ಮತ್ತು ರಾಜಕೀಯ ಇಚ್ಛಾಶಕ್ತಿ ಒಂದಾದಲ್ಲಿ ಕೇವಲ 4 ವರ್ಷಗಳಲ್ಲಿ ಏನೆಲ್ಲಾ ಸಾಧಿಸಬಹುದು ಎಂದು ದೆಹಲಿಯಲ್ಲಿ ಆಪ್ ಸರ್ಕಾರ ತೋರಿಸಿದೆ. ಈ ಸಾಧನೆಯಲ್ಲಿ ಸ್ಥಳೀಯ ಆಡಳಿತದಲ್ಲಿ ನಾಗರಿಕರ, ಅದರಲ್ಲೂ ಯುವಜನತೆಯ, ಭಾಗವಹಿಸುವಿಕೆಯೂ ಪ್ರಮುಖ ಕಾರಣ. ನಮ್ಮ ಕನಸು ಮತ್ತುಗುರಿ "ಬೊಂಬಾಟ್ ಬೆಂಗಳೂರು". ಬಿಬಿಎಂಪಿ ಯಿಂದಪ್ರಾರಂಭಿಸಿ, ಬೆಂಳೂರಿನ ಆಡಳಿತ ವ್ಯವಸ್ಥೆಯನ್ನು ನವೀಕರಿಸುವುದು" ಎಂದು ಅವರು ಹೇಳಿದರು.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ











Click it and Unblock the Notifications