ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಆಘಾತ: ‘ಕೈ’ ತೊರೆದು ಬಿಜೆಪಿ ಸೇರಿದ ನಾಯಕರು!
ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 'ಗ್ರೆಟರ್ ಬೆಂಗಳೂರು ಅಥಾರಿಟಿ' ರಚನೆ ಮಾಡಿರುವ ಸರ್ಕಾರ ಇನ್ನೇನು ಚುನಾವಣೆ ನಡೆಸಲು ಸಜ್ಜಾಗಿದೆ. ಒಂದು ಕಡೆ, ಕರ್ನಾಟಕದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ವಿಚಾರವಾಗಿದ್ದರೆ, ಇನ್ನೊಂದು ಕಡೆ ಬಿಜೆಪಿ ನಾಯಕರು ಗೆಲುವಿಗಾಗಿ ರಣತಂತ್ರ ಹೆಣೆಯುತ್ತಿದ್ದಾರೆ. ಹೀಗಾಗಿಯೇ ಗ್ರೆಟರ್ ಬೆಂಗಳೂರು ಚುಣಾವಣೆಗೆ ಬೇಕಾಗಿರುವ ಸಿದ್ಧತೆಗಳನ್ನ ಕೈಗೊಂಡು, ಗೆಲುವು ನಮ್ಮದೇ ಅಂತಾ ಹೇಳುತ್ತಿದ್ದ ಕಾಂಗ್ರೆಸ್ ನಾಯಕರಿಗೆ ಇದೀಗ ದಿಢೀರ್ ಆಘಾತ ಎದುರಾಗಿದೆ.
'ಗ್ರೆಟರ್ ಬೆಂಗಳೂರು' ಚುನಾವಣೆಗೆ ಮೊದಲು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರೆ ನಾಯಕರು. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಐಟಿಐ ಲೇಔಟ್ ಮೈದಾನದಲ್ಲಿ ಕಾಂಗ್ರೆಸ್ ತೊರೆದಿದ್ದ ನಾಯಕರು ಬಿಜೆಪಿ ಸೇರ್ಪಡೆಯಾದರು. ಈ ಹಿಂದಿನ ಬಿಬಿಎಂಪಿ ಮಂಗಮ್ಮನಪಾಳ್ಯ ವಾರ್ಡ್-190ರ ನಿಕಟಪೂರ್ವ ಸದಸ್ಯೆ ಶೋಭಾ ಜಗದೀಶ್, ಜಗದೀಶ್ ಗೌಡ ಸೇರಿ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಬಿಜೆಪಿಗೆ ಬಲ
ಈ ಸೇರ್ಪಡೆಯ ಮೂಲಕ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಬಿಜೆಪಿ ಬಲ ಮತ್ತಷ್ಟು ಹೆಚ್ಚಾಗಿದ್ದರೆ, ಕಾಂಗ್ರೆಸ್ಗೆ ಆಘಾತವೇ ಎದುರಾಗಿದೆ. ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಸತತವಾಗಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರೇ ಗೆದ್ದು ಆಯ್ಕೆ ಆಗುತ್ತಾ ಬರುತ್ತಿದ್ದು, ಹಿಂದೆ ಬಿಬಿಎಂಪಿ ಇದ್ದಾಗಲೂ ಭಾಗಶಃ ಕಾರ್ಪೊರೇಟರ್ಸ್ ಬಿಜೆಪಿ ಪಕ್ಷದಿಂದಲೇ ಗೆಲ್ಲುತ್ತಿದ್ದರು. ಇದೀಗ ಮತ್ತೆ ಜಿಬಿಎ ಬಂದಾಗಲೂ ಅದೇ ಟ್ರೆಂಡ್ ಮುಂದುವರಿಯುವ ಮುನ್ಸೂಚನೆ ಸಿಕ್ಕಿದೆ.
ಪ್ರತಿಪಕ್ಷ ನಾಯಕ ಆರ್. ಅಶೋಕ್ ಭಾಗಿ
ಶೋಭಾ ಜಗದೀಶ್ ಹಾಗೂ ಜಗದೀಶ್ ಗೌಡ ಸೇರಿದಂತೆ ಬೊಮ್ಮನಹಳ್ಳಿ ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆ ಆಗುವ ಕಾರ್ಯಕ್ರಮದಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಭಾಗವಹಿಸಿ ಎಲ್ಲಾ ನಾಯಕರನ್ನು ಬರಮಾಡಿಕೊಂಡರು. ಈ ಸಮಯದಲ್ಲಿ ಬೊಮ್ಮನಹಳ್ಳಿ ವಾರ್ಡ್ ಮಾಜಿ ಸದಸ್ಯರಾದ ಮಂಜುನಾಥ್ ರೆಡ್ಡಿ, ಸ್ಥಳೀಯ ಮುಖಂಡರಾದ ಶ್ರೀನಿವಾಸ್ ರೆಡ್ಡಿ ಮತ್ತಿತರ ಪ್ರಮುಖರು ಭಾಗಹಿಸಿದರು. ಈ ಮೂಲಕ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಈಗ ಜಿಬಿಎ ಚುನಾವಣೆಗೂ ಮೊದಲೇ ಬಿಜೆಪಿ ಪಕ್ಷಕ್ಕೆ ಬಲ ಹೆಚ್ಚಾಗಿದ್ದರೆ, ಕಾಂಗ್ರೆಸ್ ನಾಯಕರು ಚಿಂತೆ ಮಾಡುವಂತೆ ಆಗಿದೆ.
ಗ್ರೇಟರ್ ಬೆಂಗಳೂರು ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಗೆಲುವಿಗಾಗಿ ಒಂದು ಕಡೆ ಕಾಂಗ್ರೆಸ್ ಎಲ್ಲಾ ರೀತಿಯ ತಂತ್ರ & ಪ್ರತಿತಂತ್ರ ಹೆಣೆಯುತ್ತಿದೆ. ಹಾಗೇ ಬಿಜೆಪಿ ನಾಯಕರು ಕೂಡ ಈ ವಿಚಾರದಲ್ಲಿ ಅಲರ್ಟ್ ಆಗಿ ಚುನಾವಣೆಗೆ ಸಿದ್ಧರಾಗುತ್ತಿದ್ದಾರೆ. ಡಿಸೆಂಬರ್ ಅಂತ್ಯಕ್ಕೆ ಅಥವಾ 2026 ಜನವರಿ ಆರಂಭದಲ್ಲೇ ಗ್ರೇಟರ್ ಬೆಂಗಳೂರು ಚುನಾವಣೆ ನಡೆಯುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಗ್ರೇಟರ್ ಬೆಂಗಳೂರು ರಚನೆ ಮಾಡಿ ಒಟ್ಟು 5 ವಿಭಾಗ ಮಾಡಲಾಗಿದೆ. ಈ ಮೂಲಕ ಬೆಳೆಯುತ್ತಿರುವ ಬೆಂಗಳೂರಿನ ಅಭಿವೃದ್ಧಿಗೆ ಶಕ್ತಿ ತುಂಬಲ ಯೋಜಿಸಲಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications