ಶಿಕ್ಷಣ, ಕಲೆ & ಕ್ರೀಡೆ ಜೊತೆಗೆ ಸಮಾಜ ನಿರ್ಮಾಣಕ್ಕೂ ಬದ್ಧರಾಗಿರಿ: ಶಾಸಕ ಸತೀಶ್ ರೆಡ್ಡಿ
ಯುವಕರು ಶಿಕ್ಷಣ, ಕಲೆ ಹಾಗೂ ಕ್ರೀಡೆಯ ಜೊತೆಗೆ ಸಮಾಜ ನಿರ್ಮಾಣಕ್ಕೂ ಬದ್ಧರಾಗಿರಬೇಕು ಎಂದು ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಅವರು ಸಲಹೆ ನೀಡಿದರು. ಬೆಂಗಳೂರಿನ ಪ್ರತಿಷ್ಠಿತಿ ಎಚ್ಎಸ್ಆರ್ ಲೇಔಟ್ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ ಮಾಡಿದ್ದ 2025-26ನೇ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ, ಕ್ರೀಡೆ ಮತ್ತು ಯುವ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಅವರು ಮಾತನಾಡಿದರು.
ಹಿರಿಯರ ಮಾರ್ಗದರ್ಶನದಲ್ಲಿ ಯುವಕರು ಶೈಕ್ಷಣಿಕ ಸಾಧನೆ ಮಾಡಬೇಕು. ಸರ್ಕಾರಿ ಸಂಸ್ಥೆಗಳಲ್ಲಿ ಈಗ ಅತ್ಯುತ್ತಮವಾದ ಶಿಕ್ಷಣ ದೊರೆಯುತ್ತಿದ್ದು ಅದರ ಸದುಪಯೋಗ ಪಡೆಯಬೇಕು. ಬೆಂಗಳೂರು ನಗರದಲ್ಲಿ ಅತ್ಯುತ್ತಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಗಳ ಪೈಕಿ ಎಚ್ಎಸ್ಆರ್ ಕಾಲೇಜು ಕೂಡ ಸೇರಿರುವುದು ಹೆಮ್ಮೆಯ ವಿಚಾರ. ಯುವಕರ ಶಕ್ತಿ, ಕಲೆ ಮತ್ತು ಕ್ರೀಡೆಯ ಮೆಲುಕು ಮಾತ್ರವಲ್ಲದೆ ಸಮಾಜ ನಿರ್ಮಾಣಕ್ಕೂ ಶಕ್ತಿಯುತ ಅಸ್ತ್ರ. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿ, ಸಮಾಜಕ್ಕೆ ಮಾದರಿಯಾಗಬೇಕು ಎಂಬುದು ನನ್ನ ಹಾರೈಕೆ ಎಂದು ಶಾಸಕ ಸತೀಶ್ ರೆಡ್ಡಿ ಅವರು ಪ್ರತಿಪಾದಿಸಿದರು.

ಎಚ್ಎಸ್ಆರ್ ಬಡಾವಣೆಯ ಸರ್ಕಾರಿ ಕಾಲೇಜು
ಆಧುನಿಕ ಕಾಲಘಟ್ಟದಲ್ಲಿ ಸಾಕಷ್ಟು ಬದಲಾವಣೆ ಆಗುತ್ತಿದ್ದು, ತಂತ್ರಜ್ಞಾನ ಅಳವಡಿಸಿಕೊಂಡು ಈ ಸಮಯದಲ್ಲಿ ಶಿಕ್ಷಣ ಪಡೆಯುವ ಅಗತ್ಯತೆ ಇದೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ, ಪ್ರಮುಖವಾಗಿ ನಮ್ಮ ಬೆಂಗಳೂರಿನ ಎಚ್ಎಸ್ಆರ್ ಬಡಾವಣೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಲ್ಲಾ ರೀತಿಯ ಸೌಲಭ್ಯ ಇದೆ. ವಿದ್ಯಾರ್ಥಿಗಳು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲಭ್ಯವಿರುವ ಎಲ್ಲಾ ಸೌಲಭ್ಯ ಬಳಸಿಕೊಂಡು ತಮ್ಮ ಶಿಕ್ಷಣ ಪೂರೈಸಬೇಕು ಎಂದು ಶಾಸಕರು ಈ ವೇಳೆ ಸಲಹೆ ನೀಡಿದರು. ಎಚ್ಎಸ್ಆರ್ ಬಡಾವಣೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದಿದ ನೂರಾರು ವಿದ್ಯಾರ್ಥಿಗಳು ಉನ್ನತವಾದ ಕೆಲಸ ಪಡೆದಿದ್ದು, ಬೆಂಗಳೂರು ನಗರದಲ್ಲಿ ಈ ಕಾಲೇಜು ಉತ್ತಮ ಹೆಸರು ಪಡೆದಿದೆ.
ಕಾಲೇಜಿನ ವಿದ್ಯಾರ್ಥಿಗಳಿಗೆ ನಿರಂತರ ಪ್ರೋತ್ಸಾಹ
ಕಾರ್ಯಕ್ರಮ ಉದ್ಘಾಟನೆಯಲ್ಲಿ ನಗರಸಭಾ ಮಾಜಿ ಸದಸ್ಯರಾದ ಶ್ರೀನಿವಾಸ ರೆಡ್ಡಿ ಅವರು ಸೇರಿದಂತೆ, ಮುನಿರಾಜು, ಕಾಲೇಜು ಪ್ರಾಂಶುಪಾಲರು, ಶಿಕ್ಷಕರು ಹಾಗೂ ಸ್ಥಳೀಯ ಮುಖಂಡರು ಸೇರಿದಂತೆ ಎಚ್ಎಸ್ಆರ್ ಲೇಔಟ್ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದು ಈ ವಿಶೇಷ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಎಚ್ಎಸ್ಆರ್ ಬಡಾವಣೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಕಾಲೇಜು ವತಿಯಿಂದ ವಿವಿಧ ಕ್ರೀಡಾ ಸ್ಪರ್ಧೆಗಳಿಗೆ ಪ್ರೋತ್ಸಾಹವನ್ನ ನೀಡುತ್ತಾ ಬರುತ್ತಿದ್ದು, ಸಾಧನೆ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಈ ಮೂಲಕ ಬೆಂಬಲಿಸಲಾಗುತ್ತಿದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications