ಜಿಬಿಎ ಚುನಾವಣೆ: ಮತದಾರರ ಸಮಸ್ಯೆಗಳ ಪರಿಹಾರಕ್ಕಾಗಿ 'ಬುಕ್ ಎ ಕಾಲ್' ಆಪ್ ಬಿಡುಗಡೆ, ಬಳಕೆ ವಿಧಾನ ಇಲ್ಲಿದೆ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಕೆಲವೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಈ ಸಂಬಂಧ ಜಿಬಿಎ ಅಧಿಕಾರಿಗಳು ಈಗಾಗಲೇ ಕರಡು ಮತದಾರರ ಪಟ್ಟಿ ಪ್ರಕಟಿಸಿದ್ದಾರೆ. ಇದೀಗ ಕೇಂದ್ರ ಚುನಾವಣೆ ಆಯೋಗವು ಮತದಾರರ ಅಹವಾಲು ಆಲಿಸಿ ಪರಿಹಾರಕ್ಕೆ ಅನುಕೂಲವಾಗುವಂತೆ 'Book a call' ಎಂದು ಅಪ್ಲಿಕೇಷನ್ ಅನ್ನು ಬಿಡುಗಡೆ ಮಾಡಿದೆ. ಇದರ ಬಳಕೆ ಹೇಗೆ, ವಿಧಾನಗಳು ಇಲ್ಲಿವೆ.
ಮತದಾರರಿಗೆ ಸ್ಥಳೀಯವಾಗಿ ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಸುಲಲಿತವಾಗಿ ಮತಗಟ್ಟೆ ಅಧಿಕಾರಿಗಳಿಂದ ಮತದಾರರ ಪಟ್ಟಿಯ ಅಹವಾಲುಗಳ ಉತ್ತರ ಪಡೆಯಲು Book a call ಎಂಬ ಅಂತರ್ಜಾಲದ ಅಪ್ಲಿಕೇಷನ್ ಅನ್ನು ಪರಿಚಯ ಮಾಡಲಾಗಿದೆ. ಈ ಸೌಲಭ್ಯವನ್ನು ಪಡೆಯಲು ಕೆಳಕಂಡಂತೆ ಕ್ರಮ ಅನುಸರಿಸಬೇಕಿದೆ ಎಂದು ಭಾರತ ಚುನಾವಣಾ ಆಯೋಗ (ಇಸಿಐ) ಮಾಹಿತಿ ನೀಡಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ತಿಳಿಸಿದೆ.

ಭಾರತ ಚುನಾವಣಾ ಆಯೋಗದ ಜಾಲತಾಣ eci.in ನಲ್ಲಿ ವೊಟರ್ ಸರ್ವೀಸ್ ಪೋರ್ಟಲ್ (VSP) ತೆರೆದ ನಂತರ ಬುಕ್ ಎ ಕಾಲ್ ಟು ಬಿಎಲ್ಓ ನಮೂದಿಸಬೇಕು. ಬಳಿಕ ಕಾಲ್ ರಿಕ್ವೆಸ್ಟ್ ಟು ಬಿಎಲ್ಓ ಆಯ್ಕೆ ಮೇಲೆ ಕ್ಲಿಕ್ ಮಾಡಿದರೆ ಮತದಾರರಿಗೆ ರೆಫ್ರೆನ್ಸ್ ಐಡಿ ಬರುತ್ತದೆ. ಇದರ ಆಧಾರದ ಮೇಲೆ ಮತಗಟ್ಟೆ ಅಧಿಕಾರಿಗಳು ನಮೂದಾಗಿರುವ ತಮ್ಮ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಅಹವಾಲುಗಳನ್ನು ಪರಿಹರಿಸಲಿದ್ದಾರೆ.
ಇನ್ನೂ ಈ ಸೌಲಭ್ಯವನ್ನು ವಿಶೇಷ ಸಮಗ್ರ ಪರಿಷ್ಕರಣೆ-2025 (Special Intensive Revision) ಮೊದಲೇ ಸಕ್ರಿಯವಾಗಿದೆ. ಚಾಲ್ತಿಯಲ್ಲಿರುವ ಈ ಸೇವೆಯನ್ನು ಮತದಾರರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತರ ಮನವಿ ಮಾಡಿದ್ದಾರೆ.
ಹೊಸ ಆಪ್ ಮೂಲಕ ಸೌಲಭ್ಯ ಪಡೆಯುವ ವಿಧಾನ
1.ಭಾರತ ಚುನಾವಣಾ ಆಯೋಗದ ಅಧಿಕೃತ ವೆಬ್ಸೈಟ್ eci.in ಗೆ ಭೇಟಿ ನೀಡಿ.
2. Voter Service Portal (VSP) ಆಯ್ಕೆಮಾಡಿ.
3. Book a Call to BLO" ಮೇಲೆ ಕ್ಲಿಕ್ ಮಾಡಿ.
4. Call Request to BLO ಸಲ್ಲಿಸಿ.
5. ಸಲ್ಲಿಸಿದ ನಂತರ ಮತದಾರರಿಗೆ Reference ID ನೀಡಲಾಗುತ್ತದೆ.
6. ಮತಗಟ್ಟೆ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು.
ಜನವರಿ 30ರ ಶುಕ್ರವಾರ ಫೋನ್-ಇನ್ ಕಾರ್ಯಕ್ರಮ
ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರ ಅಹವಾಲುಗಳನ್ನು ನೇರವಾಗಿ ಆಲಿಸುವ ಉದ್ದೇಶದಿಂದ ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ ಇದೇ ಶುಕ್ರವಾರ ಜನವರಿ 30ರಂದು ಫೋನ್-ಇನ್ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ಬೆಳಗ್ಗೆ 7ಗಂಟೆಯಿಂದ 9.00 ಗಂಟೆಯವರೆಗೆ ಸಾರ್ವಜನಿಕರು ಸ್ಥಳೀಯರ ಸಮಸ್ಯೆಗಳ ಕುರಿತು ಪರಿಹಾರವನ್ನು ನೇರವಾಗಿ ಆಯುಕ್ತರಿಂದ ಪಡೆಯಬಹುದಾಗಿದೆ.
ಈ ಅವಧಿಯಲ್ಲಿ ನಾಗರಿಕರು ರಸ್ತೆ ಗುಂಡಿಗಳು ಹಾಗೂ ದುರಸ್ತಿ ಕಾರ್ಯಗಳು, ಬೀದಿ ದೀಪಗಳ ನಿರ್ವಹಣೆ, ಮನೆ ಮನೆ ಕಸ ಸಂಗ್ರಹಣೆ ಮತ್ತು ವಿಲೇವಾರಿ, ಅಪಾಯಕಾರಿಯಾದ ಮರಗಳು ಮತ್ತು ಕೊಂಬೆಗಳ ತೆರವು, ಸೊಳ್ಳೆ ನಿಯಂತ್ರಣ ಕ್ರಮಗಳು, ಬೀದಿ ನಾಯಿಗಳ ನಿಯಂತ್ರಣ, ಉದ್ಯಾನವನಗಳ ಅಭಿವೃದ್ಧಿ ಹಾಗೂ ಸಂರಕ್ಷಣೆ, ಅನಧಿಕೃತ ಬ್ಯಾನರ್ ಮತ್ತು ಪೋಸ್ಟರ್ ಗಳ ತೆರವು, ಪಾದಚಾರಿ ಮಾರ್ಗಗಳ ಮೇಲಿನ ಒತ್ತುವರಿ ನಿವಾರಣೆ, ಇ-ಖಾತಾ ಸಂಬಂಧಿತ ಸಮಸ್ಯೆಗಳು ಸೇರಿದಂತೆ ವಿವಿಧ ನಾಗರಿಕ ಸಮಸ್ಯೆಗಳ ಕುರಿತು ಆಯುಕ್ತರೊಂದಿಗೆ ನೇರವಾಗಿ ಮಾತನಾಡಬಹುದು.
ಫೋನ್-ಇನ್ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಎಲ್ಲಾ ಅಹವಾಲುಗಳನ್ನು 'ಸಹಾಯ 2.0' ಪೋರ್ಟಲ್ ನಲ್ಲಿ ದಾಖಲಿಸಿ, ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ತಕ್ಷಣವೇ ಕಳುಹಿಸಲಾಗುತ್ತದೆ. ದೂರು ದಾಖಲಾಗಿರುವ ವಿವರಗಳು ಹಾಗೂ ಸಂಬಂಧಿತ ಅಧಿಕಾರಿಗಳ ಮಾಹಿತಿಯನ್ನು ನಾಗರಿಕರಿಗೆ ಎಸ್.ಎಂ.ಎಸ್ ಮೂಲಕ ತಿಳಿಸಲಾಗುವುದು.
ಸಾರ್ವಜನಿಕರು ಮೊಬೈಲ್/ವಾಟ್ಸಪ್: 9480685705 ಅಥವಾ ಲ್ಯಾಂಡ್ಲೈನ್ 080-22975936 / 080-23636671ಗೆ ಸಂಪರ್ಕಿಸುವಂತೆ ಪಾಲಿಕೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications