70ರ ಹೊಸಿಲಿನಲ್ಲಿ ಗಿರಿಜಾ ಲೋಕೇಶ್; "ಗಿರಿಜಾ ಪರಸಂಗ" ಪುಸ್ತಕ ಬಿಡುಗಡೆ
ಬೆಂಗಳೂರು, ಜನವರಿ 08: ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ನಟಿ ಗಿರಿಜಾ ಲೋಕೇಶ್ ಅವರೀಗ 70ರ ವಸಂತಕ್ಕೆ ಕಾಲಿಡುತ್ತಿದ್ದಾರೆ.
ಮೂಲತಃ ರಂಗಭೂಮಿ ಕಲಾವಿದೆಯಾಗಿರುವ ಗಿರಿಜಾ ಲೋಕೇಶ್ ಅವರು ಸಾವಿರಾರು ನಾಟಕಗಳ ಮೂಲಕ ಮನೆ ಮಾತಾದವರು. 1963ರಲ್ಲಿ ರಂಗಭೂಮಿ ಪ್ರವೇಶಿಸಿದ ನಂತರ ಅವರು ಹೊರಳಿದ್ದು ಸಿನಿಮಾ ಲೋಕಕ್ಕೆ. ಕಾಕನಕೋಟೆ, ಭುಜಂಗಯ್ಯನ ದಶಾವತಾರ, ದಾಹ ಹೀಗೆ ನೂರಾರು ಸಿನಿಮಾಗಳಲ್ಲಿನ ಗಿರಿಜಾ ಲೋಕೇಶ್ ಅವರ ಉತ್ಸಾಹದ ನಟನೆಯನ್ನು ಮರೆಯಲು ಸಾಧ್ಯವಾದೀತೇ?
ಸುಮಾರು 200ಕ್ಕೂ ಹೆಚ್ಚು ಚಿತ್ರಗಳಲ್ಲಿ, ಮುನ್ನೂರಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ಭಿನ್ನ ಭಿನ್ನ ಪಾತ್ರಗಳಲ್ಲಿ ನಟನೆಯಿಂದ ಜನಮನ್ನಣೆ ಗಳಿಸಿದ ಗಿರಿಜಾ ಲೋಕೇಶ್ ಅವರನ್ನು ಸಾಕಷ್ಟು ಪ್ರಶಸ್ತಿಗಳೂ ಅರಸಿಕೊಂಡು ಬಂದಿವೆ.

ಮೇರು ನಟ ಲೋಕೇಶ್ ಅವರ ಪತ್ನಿಯಾಗಿರುವ ಗಿರಿಜಾ ಲೋಕೇಶ್ ಅವರು ಇದೇ ಜನವರಿ 10ರಂದು 70ರ ವಸಂತಕ್ಕೆ ಕಾಲಿರಿಸಲಿದ್ದಾರೆ. ಈ ಸವಿಗಳಿಗೆಯಲ್ಲಿ ಅವರ ಬದುಕಿನ ನೆನಪುಗಳನ್ನು ಸ್ಮರಿಸಲು ಜನವರಿ 10ರಂದು "ಗಿರಿಜಾ ಲೋಕೇಶ್ 70 ಸಂವಾದ" ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಈ ಕಾರ್ಯಕ್ರಮವನ್ನು ನಿರ್ದೇಶಕ, ನಟ ನಾಗಾಭರಣ ಉದ್ಘಾಟಿಸಲಿದ್ದು, ನಿರ್ದೇಶಕ ಟಿಎನ್ ಸೀತಾರಾಮ್, ದೊಡ್ಡಣ್ಣ, ಶೈಲಶ್ರೀ, ಆಶಾಲತಾ, ಫಣಿರಾಮಚಂದ್ರ, ವಿಜಯಶ್ರೀ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬನಶಂಕರಿಯ ಸುಚಿತ್ರಾ ಫಿಲ್ಮ್ ಸೊಸೈಟಿಯಲ್ಲಿ ಬೆಳಿಗ್ಗೆ 11ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಅದೇ ದಿನ ಸಂಜೆ 6 ಗಂಟೆಗೆ ಅಂಕಿತ ಪುಸ್ತಕ ಪ್ರಕಟಿಸಿರುವ "ಗಿರಿಜಾ ಪರಸಂಗ" ಪುಸ್ತಕವನ್ನು ಬಿಡುಗಡೆಗೊಳಿಸಲಾಗುತ್ತಿದೆ.

ಗಿರಿಜಾ ಲೋಕೇಶ್ ಅವರ ಈ ಆತ್ಮಕಥನವನ್ನು ಜೋಗಿ ನಿರೂಪಿಸಿದ್ದಾರೆ. ಸಾಹಿತಿ ಚಂದ್ರಶೇಖರ ಕಂಬಾರರು ಈ ಪುಸ್ತಕಕ್ಕೆ ಮುನ್ನುಡಿ ಬರೆದಿದ್ದಾರೆ. ವಿಜಯಮ್ಮ ಅವರು ಪುಸ್ತಕ ಬಿಡುಗಡೆ ಮಾಡಲಿದ್ದು, ಗಿರೀಶ ಕಾಸರವಳ್ಳಿ, ಸಂದೇಶ್ ನಾಗರಾಜ್, ಜಯಮಾಲಾ, ಎಚ್ ಎಸ್ ವೆಂಕಟೇಶಮೂರ್ತಿ, ಮುಖ್ಯಮಂತ್ರಿ ಚಂದ್ರು ಹಾಗೂ ಜೋಗಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications