ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ: ವಾಹನ ಸವಾರರೇ ಎಚ್ಚರಿಕೆ! ವೇಗ ಮಿತಿ ಮೀರಿದರೆ ಬೀಳುತ್ತೆ ಕೇಸ್!
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡುವ ದೃಷ್ಟಿಯಿಂದ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಹೆದ್ದಾರಿಯಲ್ಲಿ ವೇಗವಾಗಿ ಹೋದರೆ ಪ್ರಕರಣ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ. ರಾಮನಗರ ಪೊಲೀಸರು ಹೆದ್ದಾರಿಯಲ್ಲಿ ಬ್ಯಾರಿಕೇಡ್ ಅಳವಡಿಸಿದ್ದು, ಸ್ಪೀಡ್ ರಾಡಾರ್ ಗನ್ ಮೂಲಕ ವಾಹನಗಳ ವೇಗವನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಸೋಮವಾರದಿಂದಲೇ ರಾಮನಗರ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದು, ವೇಗ ಮಿತಿ ಮೀರಿ ಚಲಿಸುವ ವಾಹನಗಳ ಸವಾರರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ. ಕರ್ನಾಟಕದ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಎಡಿಜಿಪಿ ಅಲೋಕ್ ಕುಮಾರ್ ಈ ಬಗ್ಗೆ ಟ್ವೀಟ್ ಮಾಡಿದ್ದು, ವೇಗವಾಗಿ ಚಲಿಸಿದರೆ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಿತಿ ಮೀರಿದ ವೇಗದಲ್ಲಿ ಚಲಿಸುವ ವಾಹನಗಳನ್ನು ಸ್ಪೀಡ್ ರಾಡಾರ್ ಬಳಸಿಕೊಂಡು ಪತ್ತೆ ಹಚ್ಚಲಾಗುತ್ತಿದ್ದು, ಪ್ರಕರಣ ದಾಖಲಿಸಲಾಗುತ್ತಿದೆ. ಈ ಕ್ರಮ ತೆಗೆದುಕೊಂಡಿರುವ ರಾಮನಗರ ಎಸ್ಪಿ ಮತ್ತು ಅವರ ತಂಡವನ್ನು ಶ್ಲಾಘಿಸುತ್ತೇನೆ. ಜೀವ ಉಳಿಸಲು ಸಂಚಾರ ನಿಯಮಗಳನ್ನು ಪಾಲಿಸಿ, ದಂಡದ ಹಣವನ್ನು ಉಳಿಸಲು ಅಲ್ಲ" ಎಂದು ವಾಹನ ಸವಾರರಿಗೆ ಮನವಿ ಮಾಡಿದ್ದಾರೆ.
Booking cases using Speed Radar Guns for over speeding on Bangalore- Mysore Expressway
— alok kumar (@alokkumar6994) July 4, 2023
Appreciate action by SP Ramanagara & his team👍
“Follow traffic rules to save lives, not to save fine amount “ pic.twitter.com/ijDi9fMeag
ದುಬಾರಿ ಟೋಲ್ ಜೊತೆ, ಯಾಮಾರಿದ್ರೆ ಫೈನ್!
ಈಗಾಗಲೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ದುಬಾರಿ ಟೋಲ್ ವಸೂಲಿ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಗಣಂಗೂರು ಬಳಿ ಎರಡನೇ ಟೋಲ್ ವಸೂಲಿ ಆರಂಭಿಸಿದ್ದು, ನೀವು ಕಾರಿನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತೆರಳಲು 320 ರೂಪಾಯಿ ಟೋಲ್ ದರ ಪಾವತಿಸಬೇಕಿದೆ. ಇದರ ಜೊತೆಗೆ ವೇಗಮಿತಿ ಮೀರಿ ವಾಹನ ಚಲಾಯಿಸಿದರೆ ಪ್ರಕರಣ ದಾಖಲಾಗುವ ಜೊತೆ ಅದಕ್ಕೂ ದಂಡ ಕಟ್ಟಬೇಕಾಗುತ್ತದೆ.
ಅಪಘಾತ ಪ್ರಮಾಣ ಕಡಿಮೆ ಮಾಡಲು ಕಸರತ್ತು
ಬೆಂಗಳೂರು-ಮೈಸೂರು ಹೆದ್ದಾರಿ ಅಪಘಾತಗಳ ಸಂಖ್ಯೆಯಿಂದ ಭಾರಿ ಟೀಕೆಗೆ ಒಳಗಾಗಿದೆ. ಜನವರಿಯಿಂದ ಈವರೆಗೆ ಈ ಹೆದ್ದಾರಿಯಲ್ಲಿ 500ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದು 60ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿ ಇರುವ ಗ್ರಾಮಗಳ ಜನ ರಸ್ತೆ ದಾಟಲು ಅಂಡರ್ ಪಾಸ್ ನಿರ್ಮಾಣ ಮಾಡಿಲ್ಲ, ಕೆಲವು ಕಡೆ ಅಂಡರ್ ಪಾಸ್ಗಳನ್ನು ಹಳ್ಳಿಗಳಿಂದ ದೂರದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತವಾಗಿದೆ. ಹಲವು ಕಡೆಗಳಲ್ಲಿ ರಸ್ತೆಗೆ ಹಾಕಿರುವ ಬೇಲಿಯನ್ನು ಮುರಿದು ಜನ ರಸ್ತೆ ದಾಟುತ್ತಿರುವುದು ಕೂಡ ಅಪಘಾತಗಳಿಗೆ ಕಾರಣವಾಗಿದೆ.
Only in India you get to see police barricading an expressway to reduce speed on an expressway. Idiocy has no limits. https://t.co/g7KegjJilS
— Aruna Urs (@Arunaurs) July 4, 2023
ಭಾರತದಲ್ಲಿ ಮಾತ್ರ ಇದೆಲ್ಲಾ ಸಾಧ್ಯ!
ಎಕ್ಸ್ಪ್ರೆಸ್ವೇನಲ್ಲಿ ಬ್ಯಾರಿಕೇಡ್ ಅಳವಡಿಸಿ, ವೇಗವಾಗಿ ಚಲಿಸುವ ವಾಹನಗಳಿಗೆ ದಂಡ ವಿಧಿಸುವ ಕ್ರಮಕ್ಕೆ ಟೀಕೆ ಕೂಡ ವ್ಯಕ್ತವಾಗಿದೆ. ವೇಗವಾಗಿ ಸಾಗಲು ಎಕ್ಸ್ಪ್ರೆಸ್ವೇ ಮಾಡಿ ನಂತರ ಬ್ಯಾರಿಕೇಡ್ ಅಳವಡಿಸಿ, ವೇಗವಾಗಿ ಚಲಿಸಿದರೆ ದಂಡ ಹಾಕುವುದು ಭಾರತದಲ್ಲಿ ಮಾತ್ರ ಸಾಧ್ಯ ಎಂದು ಟ್ವಿಟರ್ ಬಳಕೆದಾರರೊಬ್ಬರು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.
ಮಾತ್ರವಲ್ಲದೆ, "ನಾನು ಇಂದು ಬೆಳಿಗ್ಗೆ ಈ ಹೆದ್ದಾರಿಯಲ್ಲಿ ಕನಿಷ್ಠ 6 ಸ್ಥಳಗಳಲ್ಲಿ ಜನ ರಸ್ತೆ ದಾಟುವುದನ್ನು ನೋಡಿದೆ. ಅವರು ಸುರಕ್ಷಿತವಾಗಿ ರಸ್ತೆ ದಾಟಲು ಸಿಗ್ನಲ್ ಲೈಟ್ಗಳನ್ನು ಅಳವಡಿಸಿ" ಎಂದು ಅಲೋಕ್ ಕುಮಾರ್ ಅವರಿಗೆ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications