ಕರ್ನಾಟಕಾದ್ಯಂತ ಬೋರ್ವೆಲ್ ಕೊರೆಯುವ ದರ ದುಪ್ಪಟ್ಟು
Recommended Video

ಬೆಂಗಳೂರು, ಸೆಪ್ಟೆಂಬರ್ 14: ಕುಡಿಯುವ ನೀರು ಹಾಗೂ ಕೃಷಿ ಉದ್ದೇಶಕ್ಕಾಗಿ ಬೋರ್ ವೆಲ್ ಕೊರೆಸುವ ರಾಜ್ಯದ ಜನರಿಗೆ ಭಾರಿ ಆಘಾತ ಕಾದಿದೆ. ಈವರೆಗೆ ಅಡಿಗೆ 60-70ರೂ ಬೋರ್ ವೆಲ್ ಕೊರೆಸಲು ಹಣ ಖರ್ಚು ಮಾಡುತ್ತಿದ್ದ ರಾಜ್ಯದ ಜನರು ಇನ್ನು ಒಂದು ಅಡಿಗೆ 120 ರೂಗಳ ಬೆಲೆ ತೆರಬೇಕಾಗುತ್ತದೆ.
ಕರ್ನಾಟಕ ರಾಜ್ಯ ಬೋರ್ ವೆಲ್ ಮಾಲೀಕರ ಸಂಘ ಕಳೆದ ಮೂರು ದಿನಗಳಿಂದ ಬೋರ್ ವೆಲ್ ಕೊರೆಯುವುದನ್ನು ಸ್ಥಗಿತಗೊಳಿಸಿದ್ದಾರೆ, ಡೀಸೆಲ್ ದರ ಹೆಚ್ಚಳದಿಂದ ಉಂಟಾಗಿರುವ ಆರ್ಥಿಕ ನಷ್ಟವನ್ನು ಭರಿಸಿಕೊಳ್ಳಲು ಬೋರ್ ವೆಲ್ ಕೊರೆಯುವ ಶುಲ್ಕವನ್ನು ದುಪ್ಪಟ್ಟು ಹೆಚ್ಚಿಸಲು ಮುಂದಾಗಿದ್ದಾರೆ.
ಈ ಕುರಿತು ಸೆಪ್ಟೆಂಬರ್ 16ರಂದು ಭಾನುವಾರ ಬೆಂಗಳೂರಿನ ಕೆಂಗೇರಿ ಬಳಿ ಕರ್ನಾಟಕ ರಾಜ್ಯ ಬೋರ್ ವೆಲ್ ಮಾಲೀಕರ ಸಂಘದ ಬೃಹತ್ ಸಭೆ ನಡೆಯಲಿದೆ. ಬೋರ್ ವೆಲ್ ಕೊರೆಯುವ ಶುಲ್ಕವನ್ನು ಪ್ರತಿ ಅಡಿಗೆ 60ರಿಂದ 120 ರೂಗಳಿಗೆ ಹೆಚ್ಚಿಸಲು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.

ಪ್ರತಿಯೊಂದು ಬೋರ್ ವೆಲ್ ಕೊರೆಯುವ ವಾಹನದ ಮೌಲ್ಯ 1.2ಕೋಟಿ ರೂ. ಆಗಿದ್ದು, ಇದರ ನಡುವೆಯೇ ಡೀಸೆಲ್ ದರ ಕಳೆದ ಆರು ತಿಂಗಳಲ್ಲಿ ಶೇ.3ರಷ್ಟು ಹೆಚ್ಚಾಗಿದೆ. ಹೀಗಾಗಿ ಬೋರ್ ವೆಲ್ ಕೊರೆಯುವುದರಿಂದ ಸಾಕಷ್ಟು ನಷ್ಟ ಅನುಭವಿಸುತ್ತಿರುವ ಬೋರ್ ವೆಲ್ ಮಾಲೀಕರು ಆರ್ಥಿಕ ನಷ್ಟ ಭರಿಸಲಾಗದೆ ಕಳೆದ ಮೂರು ದಿನಗಳಿಂದ ಕಾರ್ಯ ಸ್ಥಗಿತಗೊಳಿಸಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಸುಂಆರು 300 ವಾಹನಗಳು ಕೆಂಗೇರಿ ಸ್ಯಾಟಲೈಟ್ ಟೌನ್ ಬಳಿ ಜಮಾವಣೆಗೊಂಡಿ, ಅನಿರ್ಧಿಷ್ಟ ಮುಷ್ಕರ ನಡೆಸಿ ಮುಂದೇನು ಮಾಡಬೇಕು ಎನ್ನುವ ಗೊಂದಲದಲ್ಲಿ ಮುಳುಗಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಕರ್ನಾಟಕ ಬೋರ್ ವೆಲ್ ಮಾಲೀಕರ ಸಂಘಟದ ನಿರ್ದೇಶಕ ಅನಿಲ್ ಕುಮಾರ್ , ಪ್ರತಿ ಚದರಡಿಗೆ 60 ರೂಗಳನ್ನು ಶುಲ್ಕವಾಗಿ ವಸೂಲಿ ಮಾಡುತ್ತಿದ್ದೇವೆ, ನಮಗೆ ಪ್ರತಿ ಬೋರ್ ವೆಲ್ ಕೊರೆಯಲು ಕನಿಷ್ಠ 50 ರೂ ವೆಚ್ಚವಾಗುತ್ತಿದೆ. ಹೀಗಾಗಲೇ ಕೇವಲ 10-15 ರೂಗೆ ಒಂದು ಕೋಟಿಗೂ ಹೆಚ್ಚು ಮೌಲ್ಯದ ವಾಹನವನ್ನು ಇಟ್ಟುಕೊಂಡು ವಹಿವಾಟು ನಡೆಸುವುದು ದುಸ್ತರವಾಗಿದೆ.

ದೇಶದಲ್ಲೇ ಮೊದಲ ಬಾರಿಗೆ 300 ಕ್ಕೂ ಹೆಚ್ಚು ವಾಹನಗಳನ್ನು ಒಂದೆಡೆ ನಿಲ್ಲಿಸಿ ಮುಷ್ಕರ ನಡೆಸುತ್ತಿದ್ದೇವೆ, ನಾವು ಸರ್ಕಾರದ ವಿರುದ್ಧ ಮುಷ್ಕರ ನಡೆಸುತ್ತಿಲ್ಲ, ಬದಲಾಗಿ ನಮ್ಮ ಉದ್ಯಮವನ್ನು ಮುನ್ನಡೆಸಲು ಆರ್ಥಿಕವಾಗಿ ಸಾಧ್ಯವಾಗದೆ ನಷ್ಟಕ್ಕೀಡಾಗಿ ಎಲ್ಲರೂ ವಹಿವಾಟು ನಿಲ್ಲಿಸಿದ್ದೇವೆ.
ಒಂದೆಡೆ ಕೇಂದ್ರ ಸರ್ಕಾರ ನಮ್ಮ ಸಂಕಷ್ಟವನ್ನು ಆಲಿಸಬೇಕು. ಮತ್ತೊಂದೆಡೆ ಬೋರ್ ವೆಲ್ ಕೊರೆಸುವ ಗ್ರಾಹಕರು ನಮಗೆ ಹೊಸ ಶುಲ್ಕವನ್ನು ನಿಗದಿಮಾಡಲು ಒಪ್ಪಿಕೊಳ್ಳಬೇಕು. ಒಂದೊಮ್ಮೆ ಒಪ್ಪಿಕೊಳ್ಳದಿದ್ದರೆ ನಮ್ಮ ಉದ್ಯಮ ನಿಂತು ಹೋಗುವ ಪರಿಸ್ಥಿತಿಯಲ್ಲಿದೆ ಎಂದು ಅಳಲನ್ನು ತೋಡಿಕೊಂಡರು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications