ಬೆಂಗಳೂರಿನಲ್ಲಿ ಬೋರ್ವೆಲ್ ಮಾಫಿಯಾ, ಸರ್ಕಾರಿ ಇಲಾಖೆಯ ಸಹಕಾರ ?
ಬೆಂಗಳೂರಿನಲ್ಲಿ ಜಲಮಂಡಳಿಯು ಬೋರ್ವೆಲ್ ಕೊರೆಯಬಾರದು ಎಂದು ನಿರ್ದೇಶನ ನೀಡಿದೆ. ಅಲ್ಲದೆ ಬೇಸಿಗೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಲವೊಂದು ಪ್ರಮುಖ ಕ್ರಮಗಳನ್ನು ಸಹ ತೆಗೆದುಕೊಳ್ಳಲಾಗಿದೆ. ಯಾವುದೇ ಕಾರಣಕ್ಕೂ ಬೋರ್ವೆಲ್ ಕೊರೆಯಬಾರದು. ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮವನ್ನು ತೆಗೆದುಕೊಳ್ಳುವುದಾಗಿ ಮುನ್ನೆಚ್ಚರಿಕೆ ನೀಡಲಾಗಿದೆ. ಆದರೆ, ಇದೀಗ ಬೆಂಗಳೂರಿನಲ್ಲಿ ಬೋರ್ವೆಲ್ ಮಾಫಿಯಾ ನಡೆಯುತ್ತಿರುವುದಾಗಿ ಹಾಗೂ ಅದಕ್ಕೆ ಸರ್ಕಾರದ ಪ್ರಮುಖ ಇಲಾಖೆಯೇ ಸಹಕಾರ ನೀಡುತ್ತಿರುವ ಬಗ್ಗೆ ಗಂಭೀರವಾದ ಆರೋಪಗಳು ಕೇಳಿ ಬಂದಿವೆ.
ಬೆಂಗಳೂರಿನಲ್ಲಿ ಎಲ್ಲರಿಗೂ ತಿಳಿದಿರುವಂತೆ ಜಲಮಂಡಳಿಯು ಈಚೆಗೆ ಬೋರ್ವೆಲ್ ಕೊರೆಯುವುದರ ಮೇಲೆ ನಿಷೇಧ ಹೇರಿದೆ. ಆದರೆ, ಇದೀಗ ಅಂತರ್ಜಲ ನಿರ್ದೇಶನಾಲಯ ಮತ್ತು ಕರ್ನಾಟಕ ಅಂತರ್ಜಲ ಪ್ರಾಧಿಕಾರವು / KGWA ಕಾನೂನುಗಳನ್ನು ಉಲ್ಲಂಘನೆ ಮಾಡುವ ಮೂಲಕ ಬೋರ್ವೆಲ್ಗಳನ್ನು ಕೊರೆಸುವುದಕ್ಕೆ / ಕೊರೆಯುವುದಕ್ಕೆ ಅನುಮತಿ ನೀಡುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. Whitefield Citizens Ward Committeesನಿಂದ ಈ ರೀತಿಯ ಆರೋಪವೊಂದು ಕೇಳಿ ಬಂದಿದೆ.

KGWA ಮೇಲೆ ಗಂಭೀರ ಆರೋಪ: ಬೆಂಗಳೂರಿನಲ್ಲಿ ಕೆಜಿಡ್ಲ್ಯೂಎ ಅನಧಿಕೃತವಾಗಿ ಹಾಗೂ ಕಾನೂನು ಬಾಹಿರವಾಗಿ ಬೋರ್ವೆಲ್ಗಳನ್ನು ಕೊರೆಯುವುದಕ್ಕೆ ಅನುಮತಿ ನೀಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಕೆಜಿಡ್ಲ್ಯೂಎ ಅಧಿಕಾರಿಗಳು ಯಾವುದೇ ಸ್ಥಳ ಪರಿಶೀಲನೆ ಮಾಡದೆ. ಬೋರ್ವೆಲ್ ಕೊರೆಯುವುದಕ್ಕೆ ಸೂಕ್ತ ಪ್ರದೇಶವೇ ಎನ್ನುವ ಯಾವುದೇ ಅಂಶಗಳನ್ನು ಸಹ ಈ ಸಂದರ್ಭಗಳಲ್ಲಿ ಗಮನಿಸುತ್ತಿಲ್ಲ. ವಾಣಿಜ್ಯ ಉದ್ದೇಶಕ್ಕಾಗಿ ಈ ಬೋರ್ವೆಲ್ಗಳನ್ನು ಬಳಸಲಾಗುತ್ತಿದೆಯೇ ಎನ್ನುವುದು ಪರಿಶೀಲನೆ ಮಾಡುತ್ತಿಲ್ಲ. ನೀರನ್ನು ಯಾವುದಾದರು ಮನೆ / ಕಟ್ಟಡ ನಿರ್ಮಾಣ ಬಳಕೆಗೆ ಮಾತ್ರ ಬಳಸಲಾಗಿದೆಯೇ ಎಂದು ಪರಿಶೀಲನೆ ಮಾಡುತ್ತಿಲ್ಲ ಎಂದು ವೈಟ್ಫೀಲ್ಡ್ನ ನಿವಾಸಿಗಳು ದೂರಿದ್ದಾರೆ.
ವೈಟ್ಫೀಲ್ಡ್ನಲ್ಲಿರುವ ಪ್ರತಿಯೊಂದು ಬೃಹತ್ ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಅಂತರ್ಜಲದ ವ್ಯಾಪಕ ದುರುಪಯೋಗ ಮಾಡಲಾಗುತ್ತಿದ್ದು. ಇದರಲ್ಲಿ ಈ ಪ್ರಾಧಿಕಾರವು ಸಂಪೂರ್ಣವಾಗಿ ವಿಫಲವಾಗಿರುವುದು ಬಹಿರಂಗವಾಗಿದೆ. ಅಂತರ್ಜಲದ ದುರುಪಯೋಗವನ್ನು ನಿಯಂತ್ರಿಸಲು ಅಂತಹ ಯಾವುದೇ ಪ್ರಾಧಿಕಾರ ಅಸ್ತಿತ್ವದಲ್ಲಿಲ್ಲ ಎಂಬಂತೆ ವರ್ತಿಸುತ್ತಿದೆ. ಈ ರೀತಿ ಕೆಲಸ ಮಾಡದ ಅನುಪಯುಕ್ತ ಪ್ರಾಧಿಕಾರಕ್ಕೆ ನಮ್ಮ ತೆರಿಗೆ ಹಣವನ್ನು ಏಕೆ ಖರ್ಚು ಮಾಡಬೇಕು ಎಂದು ಸಾಮಾಜಿಕ ಹೋರಾಟಗಾರ ಸಂದೀಪ್ ಅನಿರುದ್ಧನ್ ಅವರು ಪ್ರಶ್ನೆ ಮಾಡಿದ್ದಾರೆ.
ಈ ಪ್ರಾಧಿಕಾರವು ಅಸ್ತಿತ್ವದಲ್ಲಿರುವ ಏಕೈಕ ಉದ್ದೇಶವೆಂದರೆ ಅಂತರ್ಜಲವನ್ನು ರಕ್ಷಿಸುವುದು ಮತ್ತು ಸಂರಕ್ಷಿಸುವುದು. ಇದು ಸಾರ್ವಜನಿಕ ಸಂಪನ್ಮೂಲವಾಗಿದ್ದು, ಅತಿಯಾಗಿ ಬಳಸಲ್ಪಡುವ ನವೀಕರಿಸಲಾಗದ ಸಂಪನ್ಮೂಲವಾಗಿದೆ ಮತ್ತು ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಬಳಕೆಗೆ ಸುರಕ್ಷಿತವಾಗಿಡಬೇಕಾಗಿದೆ ಎಂದು ಅವರು ಹೇಳಿದ್ದಾರೆ.
ಮುಂದುವರಿದು ಕಾನೂನಿನ ಪ್ರಕಾರ, ಬೆಂಗಳೂರಿನ ಎಲ್ಲಾ ತಾಲ್ಲೂಕುಗಳಲ್ಲಿ ಅಂತರ್ಜಲ ಮಟ್ಟ ಕಡಿಮೆ ಇರುವುದರಿಂದ ಸಾರ್ವಜನಿಕವಾಗಿ ಈಗಾಗಲೇ ಬಳಕೆ ಮಾಡಲಾಗುತ್ತಿರುವ ಸಾರ್ವಜನಿಕ ಬೋರ್ವೆಲ್ಗಳನ್ನು ಹೊರತುಪಡಿಸಿ ಯಾವುದೇ ಬೋರ್ವೆಲ್ ಅನುಮತಿಗಳನ್ನು ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಆದರೆ, ಈ ಭಾಗದಲ್ಲಿ ಕೆಜಿಡ್ಲ್ಯೂಎ ಬಿಲ್ಡರ್ಗಳ ಮಾಫಿಯಾಕ್ಕೆ ಮಣಿಯುತ್ತಿದೆ ಎಂದು ಅವರು ದೂರಿದ್ದಾರೆ.
ಬೆಂಗಳೂರಿನಲ್ಲಿ ಕುಡಿಯುವ ಹಾಗೂ ನೀರಿನ ಸಮಸ್ಯೆಯ ಆತಂಕ ಇದೆ. ಈ ರೀತಿ ಇರುವಾಗಲೇ ಬೋರ್ವೆಲ್ಗಳನ್ನು ಕೊರೆಯುವುದಕ್ಕೆ ಅನುಮತಿ ನೀಡುವ ಮೂಲಕ ನೀರಿನ ಸಮಸ್ಯೆಯನ್ನು ಹೆಚ್ಚಳ ಮಾಡುತ್ತಿದೆ ಎಂದೂ ಆರೋಪಿಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications