ಬಾಷ್ ನಿಂದ 5 ಲಕ್ಷ ರಕ್ಷಣಾತ್ಮಕ ಮುಖಗವಸು ಉತ್ಪಾದನೆ
ಬೆಂಗಳೂರು, ಜೂನ್ 25: ಕೊರೋನಾವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಬಾಷ್ ತನ್ನದೇ ಆದ ವಿಶಿಷ್ಟ ರೀತಿಯ ರಕ್ಷಣಾ ಮುಖಗವಸು (ಮಾಸ್ಕ್) ಅನ್ನು ವಿನ್ಯಾಸಗೊಳಿಸಿದೆ. ಸಂಪೂರ್ಣ ಸ್ವಯಂಚಾಲಿತ ರಕ್ಷಣಾ ಮಾಸ್ಕ್ ಉತ್ಪಾದನಾ ವ್ಯವಸ್ಥೆಯನ್ನು ಬಾಷ್ ತನ್ನ ಬೆಂಗಳೂರಿನ ನಾಗನಾಥಪುರದಲ್ಲಿರುವ ಘಟಕದಲ್ಲಿ ಆರಂಭಿಸಿದೆ. ಇದರೊಂದಿಗೆ ದಿನಕ್ಕೆ 1,00,000 ದಷ್ಟು ಮಾಸ್ಕ್ ಗಳನ್ನು ಉತ್ಪಾದಿಸುವ ಗುರಿಯನ್ನು ಬಾಷ್ ಹೊಂದಿದೆ.
Recommended Video
ಭಾರತದಲ್ಲಿ ನಾಗನಾಥಪುರ ಸೇರಿದಂತೆ ವಿಶ್ವದ ತನ್ನ ಐದು ಆಟೋಮೇಟೆಡ್ ಉತ್ಪಾದನಾ ಘಟಕಗಳಲ್ಲಿ ಬಾಷ್ ಜಾಗತಿಕವಾಗಿ ದಿನಕ್ಕೆ 5,00,000 ಕ್ಕೂ ಅಧಿಕ ಮಾಸ್ಕ್ ಗಳನ್ನು ತಯಾರಿಸುತ್ತಿದೆ. ಈ ಮಾಸ್ಕ್ ಗಳನ್ನು ಬಾಷ್ ನ ವಿಶೇಷ ಘಟಕವು ವಿನ್ಯಾಸಗೊಳಿಸಿದೆ. ಈ ಮಾಸ್ಕ್ ಗಳು ಭಾರತದ ಬಾಷ್ ನಲ್ಲಿ ಲಭ್ಯವಿವೆ.
ಬಾಷ್ ನ ಮತ್ತೊಂದು ವಿಶಿಷ್ಟವಾದ ನಿರ್ಧಾರವೆಂದರೆ 30,00,000 ಕ್ಕೂ ಅಧಿಕ ಮಾಸ್ಕ್ ಗಳನ್ನು ಎರಡನೇ ಹಂತದ ಕೋವಿಡ್-19 ವಿರುದ್ಧ ಸೇವೆ ಸಲ್ಲಿಸುತ್ತಿರುವ ಆರೋಗ್ಯ ರಕ್ಷಣೆ ಕಾರ್ಯಕರ್ತರು, ಪೊಲೀಸ್, ಮುನ್ಸಿಪಲ್ ಕಾರ್ಪೊರೇಷನ್ ಕಾರ್ಮಿಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಹಾಗೂ ಎನ್ ಜಿಒಗಳಿಗೆ ಉಚಿತವಾಗಿ ನೀಡಲಿದೆ.

ಈ ಮೂರು ಪದರದ ಮಾಸ್ಕ್ ಗಳು ಬಳಕೆದಾರನ ಮೂಗು ಮತ್ತು ಗಂಟಲಿನೊಳಗೆ ಬ್ಯಾಕ್ಟೀರಿಯಾಗಳು ಪ್ರವೇಶ ಮಾಡುವುದನ್ನು ನಿಯಂತ್ರಣ ಮಾಡುತ್ತವೆ. ಈ ಮಾಸ್ಕ್ ಗಳು ಸಂಪೂರ್ಣವಾಗಿ ಉಚಿತವಾಗಿ ವಿತರಣೆ ಆಗುವ ಹಿನ್ನೆಲೆಯಲ್ಲಿ ಮಾಸ್ಕ್ ನ ಕೆಳಭಾಗದಲ್ಲಿ ಬಾಷ್ ಕಂಪನಿಯ ಲೋಗೋವನ್ನು ಒಳಗೊಂಡಿರುತ್ತವೆ.
ಈ ಮಾಸ್ಕ್ ತಯಾರಿಕೆಯು ಭಾರತ ಸರ್ಕಾರದ ''ಮೇಕ್ ಇನ್ ಇಂಡಿಯಾ'' ಪರಿಕಲ್ಪನೆಯನ್ನು ಉತ್ತೇಜಿಸಲಿದೆ. ಒಟ್ಟಾರೆ, ಬಾಷ್ ನ ಐದು ಘಟಕಗಳಲ್ಲಿ ಜೂನ್ ಅಂತ್ಯದ ವೇಳೆಗೆ ತಿಂಗಳಿಗೆ 10 ದಶಲಕ್ಷಕ್ಕೂ ಅಧಿಕ ಮಾಸ್ಕ್ ತಯಾರಿಸಲಿದೆ.

ಈ ಘಟಕದ ಉದ್ಘಾಟನೆ ವೇಳೆ ಮಾತನಾಡಿದ ಬಾಷ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ & ಬಾಷ್ ಗ್ರೂಪ್ ಇನ್ ಇಂಡಿಯಾದ ಅಧ್ಯಕ್ಷರಾದ ಸೌಮಿತ್ರ ಭಟ್ಟಾಚಾರ್ಯ ಅವರು, ''ಬಾಷ್ ನಲ್ಲಿ ನಮ್ಮ ಎಲ್ಲಾ ಕಾರ್ಯಾಚರಣೆಗಳಲ್ಲಿ ನಮ್ಮ ಸಿಬ್ಬಂದಿಯ ಸುರಕ್ಷತೆ ಮತ್ತು ಭದ್ರತೆಗೆ ಒತ್ತು ನೀಡುತ್ತಿದ್ದೇವೆ. ಕೋವಿಡ್-19 ವಿರುದ್ಧದ ಹೋರಾಟಕ್ಕೆ 50 ಕೋಟಿ ರೂಪಾಯಿಗಳ ದೇಣಿಗೆಯ ನಮ್ಮ ಬದ್ಧತೆಯ ಒಂದು ಭಾಗ ಇದಾಗಿದೆ. ನಮ್ಮ ಆವಿಷ್ಕಾರಕ ತಂತ್ರಜ್ಞಾನಗಳು ಮತ್ತು ಸಾಮರ್ಥ್ಯವನ್ನು ಬಳಸಿಕೊಂಡು ನಾವು ಈ ಸರ್ಜಿಕಲ್ ಮಾಸ್ಕ್ ಗಳನ್ನು ಉತ್ಪಾದಿಸುತ್ತಿದ್ದೇವೆ'' ಎಂದು ತಿಳಿಸಿದರು.
-
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ












Click it and Unblock the Notifications