ಬಿಡದಿಯ ಶ್ಯಾನುಮಂಗಲ ಕೆರೆಗೆ ಹೊಸ ರೂಪ ನೀಡಿದ ಬಾಷ್
ಬೆಂಗಳೂರು, ಮಾರ್ಚ್ 01: ಬಾಷ್ ಲಿಮಿಟೆಡ್ ಪುನರುಜ್ಜೀವನಗೊಳಿಸಿರುವ ಬಿಡದಿಯ ಉತ್ಪಾದನಾ ಘಟಕಗಳಿಗೆ ಹೊಂದಿಕೊಂಡಂತಿರುವ ಶ್ಯಾನುಮಂಗಲ ಕೆರೆಯನ್ನು ಉದ್ಘಾಟಿಸಲಾಗಿದೆ.
ಕಳೆದ ಹಲವು ವರ್ಷಗಳಿಂದ ಶ್ಯಾನುಮಂಗಲ ಕೆರೆ ಒತ್ತುವರಿ ಹಾಗೂ ನಿರ್ವಹಣಾ ಕೊರತೆಯಿಂದ ತನ್ನ ಹಳೆಯ ವರ್ಚಸ್ಸನ್ನು ಕಳೆದುಕೊಂಡಿತ್ತು. ಕೆರೆಯ ಜಲಾನಯನ ಪ್ರದೇಶವನ್ನು ತಡೆಗಟ್ಟಿರುವುದರಿಂದ ಹೂಳು ಸಂಗ್ರಹವಾಗಲು ಮತ್ತು ಕೆರೆಯ ಶೇಖರಣಾ ಸಾಮರ್ಥ್ಯ ಕೂಡ ಕಡಿಮೆಯಾಗಿತ್ತು. ಇದರಿಂದ ಸುತ್ತಮುತ್ತಲಿನ ಜನರು ನೀರಿನ ಅಭಾವ ಎದುರಿಸುತ್ತಿದ್ದರು.
ಬಿಡದಿ ಒಂದು ಕಾಲದಲ್ಲಿ ದ್ರಾಕ್ಷಿ ಕೃಷಿ ಮತ್ತು ಕೋಳಿ ಸಾಕಾಣಿಕೆಗೆ ಪ್ರಸಿದ್ಧವಾಗಿತ್ತು. ಈ ಪಟ್ಟಣ ಮತ್ತು ಅದರ ಹತ್ತಿರದ ಸಮುದಾಯಗಳಿಗೆ ಕೆರೆ ನೀರಿನ ಮಹತ್ವನ್ನು ಗುರುತಿಸಿದ ಬಾಷ್, 2017 ರ ಕೊನೆಯಲ್ಲಿ ಅದರ ಪುನರುಜ್ಜೀವನ ಚಟುವಟಿಕೆಗಳನ್ನು ಪ್ರಾರಂಭಿಸಿದರು. ಕೆರೆ ಪ್ರದೇಶದ ಹೊರಗೆ ಜಾನುವಾರು ತೊಟ್ಟಿ ನಿರ್ಮಾಣ, ನಿರ್ಜಲೀಕರಣ, ಬಂಡ್ ಬಲಪಡಿಸುವಿಕೆ, ಪೊದೆ ಸಸ್ಯ ತೆರವುಗೊಳಿಸುವಿಕೆ, ಜಲಾನಯನ ಪ್ರದೇಶದ ಉದ್ದಕ್ಕೂ ವಾಕಿಂಗ್ ಪಥಗಳ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳಲಾಗಿತ್ತು.

ಬಾಷ್ ಕಂಪನಿಯ ಪರಿಸರ ಸಂರಕ್ಷಣೆ
ಬಾಷ್ ಕಂಪನಿಯ ಪರಿಸರ ಸಂರಕ್ಷಣೆ ಹಾಗೂ ಕೆರೆಯ ಸುತ್ತಮುತ್ತಲಿನ ಪ್ರದೇಶದ ಜನರ ಜೀವನ ಸುಧಾರಣೆಯ ಬದ್ದತೆ ಈ ಕೆರೆಯನ್ನು ಮತ್ತೊಮ್ಮೆ ಸುಂದರ ತಾಣವನ್ನಾಗಿಸಿದೆ. ಸಾಮಾಜಿಕ ಜವಾಬ್ದಾರಿ, ಪರಿಸರ ಸುಸ್ಥಿರತೆಯನ್ನು ಗಮನದಲ್ಲಿರಿಸಿಕೊಂಡು ಸಂಸ್ಥೆ ಈ ಯೋಜನೆ ಕೈಗೆತ್ತಿಕೊಂಡಿತ್ತು. ಪುನರುಜ್ಜೀವನ ಕಾಮಗಾರಿ ಆರಂಭಿಸುವ ಮುನ್ನ ಸಂಸ್ಥೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಸಮುದಾಯದ ಸದಸ್ಯರೊಂದಿಗೆ ಚರ್ಚೆ ನಡೆಸಿತ್ತು.

ಬಾಷ್ ಸಮೂಹದ ಅಧ್ಯಕ್ಷ ಸೌಮಿತ್ರಾ ಭಟ್ಟಾಚಾರ್ಯ
ಕೆರೆಯ ಉದ್ಘಾಟನಾ ಸಂದರ್ಭದಲ್ಲಿ ಮಾತನಾಡಿದ ಬಾಷ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಬಾಷ್ ಸಮೂಹದ ಅಧ್ಯಕ್ಷ ಸೌಮಿತ್ರಾ ಭಟ್ಟಾಚಾರ್ಯ, ''ಬಾಷ್ ನಲ್ಲಿ ನಾವು ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸುವ ಹಾಗೂ ಪರಿಸರದ ಸುಸ್ಥಿರತೆಯನ್ನು ಉತ್ತೇಜಿಸುವ ಪ್ರಾಮುಖ್ಯತೆಯನ್ನು ಗುರುತಿಸುತ್ತೇವೆ. ಕೆರೆ ಸಮೀಪದಲ್ಲಿರುವ ಸ್ಥಳೀಯರ ಹೆಚ್ಚುತ್ತಿರುವ ಬೇಡಿಕೆಗಳನ್ನು ಪೂರೈಸುವ ಅನಿವಾರ್ಯತೆಯನ್ನು ಅರಿತು 2017ರಲ್ಲಿ ಕೆರೆಯ ಪುನರುಜ್ಜೀವನ ಯೋಜನೆಯನ್ನು ಕೈಗೆತ್ತಿಕೊಂಡೆವು. ಈಗ ಅದರ ಫಲಿತಾಂಶ ಜನರ ಕಣ್ಮುಂದೆ ಇದೆ. ಮುಂದಿನ ದಿನಗಳಲ್ಲಿ ಕೂಡ ನಾವು ಇಂತಹ ಹಲವು ಉಪಯುಕ್ತ ಯೋಜನೆಗಳನ್ನು ಕೈಗೆತ್ತಿಕೊಳ್ಳಲಿದ್ದೇವೆ'' ಎಂದರು.

ಮಾಗಡಿ ಶಾಸಕ ಎ.ಮಂಜುನಾಥ್ ಮಾತನಾಡಿ
ಮಾಗಡಿ ಶಾಸಕ ಎ.ಮಂಜುನಾಥ್ ಮಾತನಾಡಿ, "ಬಾಷ್ ಲಿಮಿಟೆಡ್ ಸಂಸ್ಥೆಯ ಯೋಜನೆಯ ಭಾಗವಾಗಿರಲು ಹೆಮ್ಮೆಯೆನಿಸುತ್ತಿದೆ. ಇಂದು ನಮಗೆ ಸ್ವಚ್ಛ ಹಾಗೂ ಸುಸ್ಥಿರ ವಾತಾವರಣದ ತುರ್ತು ಅಗತ್ಯವಿದೆ. ಶ್ಯಾನುಮಂಗಲ ಕೆರೆಯ ಪುನರುಜ್ಜೀವನ ಈನಿಟ್ಟಿನಲ್ಲಿ ಸಕಾರಾತ್ಮಕ ಹೆಜ್ಜೆಯಾಗಿದೆ. ಈ ಕೆರೆಯ ನೀರನ್ನು ಶುದ್ಧವಾಗಿರಿಸಿಕೊಳ್ಳಲು ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿರಿಸಲು ಸಾರ್ವಜನಿಕರು ಕೈಜೋಡಿಸಬೇಕು'' ಎಂದು ಮನವಿ ಮಾಡಿದರು.

ಶ್ಯಾನುಮಂಗಲ ಕೆರೆಗೆ ಹೊಸ ರೂಪ ನೀಡಿದ ಬಾಷ್
ಕೆರೆ ಪ್ರದೇಶದ ಹೊರಗೆ ಜಾನುವಾರು ತೊಟ್ಟಿ ನಿರ್ಮಾಣ, ನಿರ್ಜಲೀಕರಣ, ಬಂಡ್ ಬಲಪಡಿಸುವಿಕೆ, ಪೊದೆ ಸಸ್ಯ ತೆರವುಗೊಳಿಸುವಿಕೆ, ಜಲಾನಯನ ಪ್ರದೇಶದ ಉದ್ದಕ್ಕೂ ವಾಕಿಂಗ್ ಪಥಗಳ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳಲಾಗಿತ್ತು. ಪುನರುಜ್ಜೀವನಗೊಂಡಿರುವ ಕೆರೆಯಲ್ಲಿ ಅಂತರ್ಜಲ ಮಟ್ಟದ ವೃದ್ದಿಯಂತಹ ವ್ಯವಸ್ಥೆಗಳನ್ನು ಅಳವಡಿಸಲಾಗಿದ್ದು, ಪರಿಸರ ಸಂರಕ್ಷಣೆಗೆ ಮಹತ್ವದ ಕೊಡುಗೆ ನೀಡಲಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications