ಬೆಂಗಳೂರು: ಹೋಮ್ ವರ್ಕ್ ಮಾಡಿಲ್ಲವೆಂದು ಬಾಲಕನಿಗೆ ರಾಡ್ನಿಂದ ಮನಸೋಇಚ್ಛೆ ಹೊಡೆದ ಶಿಕ್ಷಕಿ
ಬೆಂಗಳೂರು, ಡಿಸೆಂಬರ್ 08: ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ನಡೆದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ತಾನು ಕೊಟ್ಟ ಹೋಮ್ವರ್ಕ್ ಮಾಡಿಲ್ಲ ಎಂದು ಶಿಕ್ಷಕಿಯೊಬ್ಬರು ವಿದ್ಯಾರ್ಥಿ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಹುಳಿಮಾವು ಬಿಜಿ ರಸ್ತೆಯಲ್ಲಿರುವ ಖಾಸಗಿ ಶಾಲೆಯ ಶಿಕ್ಷಕಿ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಅಸೈನ್ಮೆಂಟ್ ನೀಡಿದ್ದಾರೆ. ಮಾರನೇ ದಿನ ಶಾಲೆಗೆ ಬಂದ ಶಿಕ್ಷಕಿ ಕೊಟ್ಟ ಅಸೈನ್ಮೆಂಟ್ ಪರೀಕ್ಷಿಸಿದ್ದಾರೆ. ಈ ವೇಳೆ ವಿದ್ಯಾರ್ಥಿಯೊಬ್ಬ ಹೋಮ್ವರ್ಕ್ ಮಾಡದೇ ತರಗತಿಗೆ ಹಾಜರಾಗಿದ್ದಾನೆ. ಇದರಿಂದ ಕೋಪಗೊಂಡ ಶಿಕ್ಷಕಿ ರಕ್ತಬರುವಂತೆ ವಿದ್ಯಾರ್ಥಿಗೆ ರಾಡ್ನಿಂಡ ಹೊಡೆದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ರಾಡ್ನಲ್ಲಿ ಹೊಡೆದ ಪರಿಣಾಮ ಕೈಗೆ ಗಂಭೀರ ಗಾಯವಾಗಿದ್ದು, ಸಮವಸ್ತ್ರದಲ್ಲೇ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಸದ್ಯ ಹುಳಿಮಾವು ಸಾಯಿರಾಮ್ ಆಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗಿದ್ದು, ವಿದ್ಯಾರ್ಥಿ ಕೈಗೆ ಆರು ಹೊಲಿಗೆ ಹಾಕಲಾಗಿದೆ. ಶಿಕ್ಷಕಿ ಕೊಟ್ಟ ಅಸೈನ್ಮೆಂಟ್ ಮಾಡಿಲ್ಲ ಎಂಬ ಕಾರಣಕ್ಕೆ ಹಲ್ಲೆ ಮಾಡಿದ್ದಾರೆ ಎಂದು ವಿದ್ಯಾರ್ಥಿ ಆರೋಪಿಸಿದ್ದು, ಶಾಲಾ ಆಡಳಿತ ಮಂಡಳಿಯಿಂದ ಪ್ರಕರಣ ಮುಚ್ಚಿಹಾಕಲು ಯತ್ನಿಸಿದೆ ಎನ್ನುವ ಆರೋಪ ಕೂಡ ಕೇಳಿಬಂದಿದೆ.
ಜಿಲ್ಲಾಧಿಕಾರಿ ಹೆಸರನ್ನೇ ಬಳಸಿ ಹಣಕ್ಕೆ ಬೇಡಿಕೆ ಇಟ್ಟ ಕಿಲಾಡಿಗಳು
ಬೆಂಗಳೂರು: ಬೆಂಗಳೂರು ನಗರದ ಜಿಲ್ಲಾಧಿಕಾರಿ ಹೆಸರನ್ನೇ ಬಳಸಿ ಕಿಲಾಡಿಗಳು ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರು ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಹೆಸರಲ್ಲಿ ಆರೋಪಿಗಳು ಹಣಕ್ಕೆ ಬೇಡಿಕೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.
ಜಿಲ್ಲಾಧಿಕಾರಿ ಕೆ.ಎ ದಯಾನಂದ್ ಅವರ ಫೋಟೋ ಬಳಸಿ ವಾಟ್ಸಾಪ್ ನಂಬರ್ ಕ್ರಿಯೆಟ್ ಮಾಡಿರುವ ಅಪರಿಚಿತ ವ್ಯಕ್ತಿಗಳು ಬಳಿಕ ಆ ನಂಬರ್ನಿಂದ ಜಿಲ್ಲಾಡಳಿತದ ಕೆಲವು ಅಧಿಕಾರಿಗಳಿಗೆ ಹಣ ನೀಡುವಂತೆ ಮೆಸೇಜ್ ಕಳುಹಿಸಿದ್ದಾರೆ. ತುರ್ತು ಕಾರ್ಯಕ್ಕೆ ಹಣ ಬೇಕಿದೆ ತಕ್ಷಣ ಕಳುಹಿಸಿ ಎಂದು ಅಧಿಕಾರಿಗಳಿಗೆ ಮೆಸೇಜ್ ಕಳುಹಿಸಲಾಗಿದೆ. ಇದರಿಂದ ಅನುಮಾನಗೊಂಡ ಕೆಲವು ಅಧಿಕಾರಿಗಳು ಕೂಡಲೇ ಕೆ.ಎ ದಯಾನಂದ್ ಅವರಿಗೆ ಮಾಹಿತಿ ನೀಡಿದ್ದಾರೆ.
ತಮ್ಮ ಹೆಸರಿನಲ್ಲಿ ನಕಲಿ ವಾಟ್ಸಾಪ್ ನಂಬರ್ನಲ್ಲಿ ಹಣ ಬೇಡಿಕೆ ಇಡುತ್ತಿದ್ದ ಕಿಡಿಗೇಡಿಗಳ ಬಗ್ಗೆ ಬೆಂಗಳೂರು ಸೆಂಟ್ರಲ್ ಸೈಬರ್ ಕ್ರೈಂ ಠಾಣೆಯಲ್ಲಿ ಜಿಲ್ಲಾಧಿಕಾರಿ ಡಿಸಿ ಕೆ.ಎ ದಯಾನಂದ್ ಪ್ರಕರಣ ದಾಖಲಿಸಿದ್ದಾರೆ. ಕಿಡಿಗೇಡಿಗಳು ಬಳಸುತ್ತಿದ್ದ ನಂಬರ್ ಆಧಾರದ ಮೇಲೆ ದೂರು ದಾಖಲಾಗಿದೆ. ಸದ್ಯ ಎಫ್ಐಆರ್ ದಾಖಲಿಸಿರುವ ಸೆಂಟ್ರಲ್ ಸೈಬರ್ ಕ್ರೈಂ ಠಾಣೆ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
-
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications