ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೊಸವರ್ಷದಂದು ಕಾಣೆಯಾಗಿದ್ದ ಬಾಲಕ ನೀಲಗಿರಿ ತೋಪಿನಲ್ಲಿ ಶವವಾಗಿ ಪತ್ತೆ

|
Google Oneindia Kannada News

ಬೆಂಗಳೂರು, ಜನವರಿ 5: ಹೊಸ ವರ್ಷದಂದು ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದದ ನಾಲ್ಕು ವರ್ಷದ ಬಾಲಕ ಮನೆಯಿಂದ 300 ಮೀ ದೂರದಲ್ಲಿರುವ ನೀಲಗಿರಿ ತೋಪಿನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಕ್ತದ ಮಡುವಿನಲ್ಲಿದ್ದರೂ ಹೆಂಡತಿಗೆ ಕರೆ ಮಾಡಿ ನನ್ನನ್ನು ಬದುಕಿಸು ಎಂದಿದ್ದ ಸೈಯದ್ ಕ್ತದ ಮಡುವಿನಲ್ಲಿದ್ದರೂ ಹೆಂಡತಿಗೆ ಕರೆ ಮಾಡಿ ನನ್ನನ್ನು ಬದುಕಿಸು ಎಂದಿದ್ದ ಸೈಯದ್

ಹೊಸಕೋಟೆಯ ದೊಡ್ಡದುಣ್ಣ ಸಂದ್ರದ ಅನುಗೊಂಡನಹಳ್ಳಿಯಲ್ಲಿ ಘಟನೆ ನಡೆದಿದೆ. ಗುರುವಾರ ಮನೆಯ ಹತ್ತಿರದಲ್ಲಿರುವ ನೀಲಗಿರಿ ತೋಪಿನಲ್ಲಿ ಶವ ಪತ್ತೆಯಾಗಿದ್ದು ಆದರೆ ಶವದ ಮೇಲೆ ಯಾವುದೇ ಗಾಯಗಳು ಕಂಡುಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶಿವನಸಮುದ್ರದಲ್ಲಿ ನವದಂಪತಿ ಶವ ಪತ್ತೆ: ಮರ್ಯಾದಾ ಹತ್ಯೆ ಶಂಕೆ ಶಿವನಸಮುದ್ರದಲ್ಲಿ ನವದಂಪತಿ ಶವ ಪತ್ತೆ: ಮರ್ಯಾದಾ ಹತ್ಯೆ ಶಂಕೆ

ದುಷ್ಕರ್ಮಿಗಳು ಬಾಲಕ(ರೀನ್ಸ್) ಉಸಿರುಗಟ್ಟಿಸಿ ಕೊಲೆ ಮಾಡಿರಬಹುದು ಎಂದು ಅಂದಾಜಿಸಲಾಗಿದೆ. ಪೋಸ್ಟ್‌ಮಾರ್ಟಮ್ ಗೆ ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ. ಬಾಲಕನ ತಂದೆ ಸಿಬೇಶ್ ಕುಮಾರ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Boy went missing on New year found dead in Grove

ಸಿಬೇಶ್ ಮೂಲತಃ ಜಾರ್ಖಂಡ್‌ನವರಾಗಿದ್ದು, ಹೆಂಡತಿ ರಾಜಾಮುನಿ ದೇವಿ, ಮಗ ರೀನ್ಸ್ ಜೊತೆಗೆ ವಾಸವಾಗಿದ್ದರು. ಆನ್‌ಲೈನ್ ಮಾರ್ಕೆಟಿಂಗ್ ಗೋಡೌನ್‌ನಲ್ಲಿ ಕೆಲಸ ಮಾಡುತ್ತಿದ್ದರು.

ಅಕ್ರಮ ಸಂಬಂಧದಿಂದ ಹುಟ್ಟಿದ ನವಜಾತ ಶಿಶುವನ್ನು ಕೊಂದ ಪಾಪಿ ಅಪ್ಪನ ಬಂಧನ ಅಕ್ರಮ ಸಂಬಂಧದಿಂದ ಹುಟ್ಟಿದ ನವಜಾತ ಶಿಶುವನ್ನು ಕೊಂದ ಪಾಪಿ ಅಪ್ಪನ ಬಂಧನ

ಹೊಸ ವರ್ಷದಂದು ಸಂಜೆ 6.30ರಿಂದ ರೀನ್ಸ್ ನಾಪತ್ತೆಯಾಗಿದ್ದ, ಎಲ್ಲೋ ಕೊಲೆ ಮಾಡಿ ಬಳಿಕ ನೀಲಗಿರಿ ತೋಪಿನಲ್ಲಿ ಎಸೆದು ಹೋಗಿರಬಹುದು ಎಂದು ಅಂದಾಜಿಸಲಾಗಿದೆ.

English summary
A four year boy called Reens who went missing on January 1 was found dead under mysterious circumstances at a eucalyptus grove 300m away from his residence in Doddadunnsandra village near Anugondanahalli in Hoskote.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X