ಸಿಲಿಕಾನ್ ಸಿಟಿಯಲ್ಲಿ ಮದುವೆ ಆಗಲ್ಲ ಅಂದಿದ್ದಕ್ಕೆ ವಿವಾಹಿತೆ ಮನೆ ಸುಟ್ಟುಹಾಕಿದ ಪಾಪಿ ಪ್ರೇಮಿ
ಬೆಂಗಳೂರು, ಮೇ, 02: ಬೆಂಗಳೂರಿನಲ್ಲಿ ಪ್ರತಿನಿತ್ಯವೂ ನೀಚಕೃತ್ಯಗಳು ನಡೆಯುತ್ತಲೇ ಇವೆ. ಆದ್ದರಿಂದ ಈ ಸಿಲಿಕಾನ್ ಸಿಟಿ ಕ್ರೈಂ ಸಿಟಿ ಅಂತಲೇ ಹೆಸರುವಾಸಿಯಾಗಿದೆ. ಇನ್ನು ಇಂದು (ಮೇ 02) ಬೆಳ್ಳಂಬೆಳ್ಳಗೆಯೆ ಮದುವೆ ಆಗುವುದಿಲ್ಲ ಅಂದಿದ್ದಕ್ಕೆ ಪಾಪಿ ಪ್ರೇಮಿಯೊಬ್ಬ ವಿವಾಹಿತೆ ಮಹಿಳೆಯ ಮೆನೆಗೆ ಬೆಂಕಿಯಿಟ್ಟ ಘಟನೆ ನಡೆದಿದೆ.
ಸಾಮಾನ್ಯವಾಗಿ ಪ್ರೀತಿ, ಪ್ರೇಮ ವಿಚಾರಕ್ಕೆ ಗಲಾಟೆ, ಕೊಲೆಗಳು ಆಗಿರುವುದನ್ನು ನಾವು ಕೇಳಿರುತ್ತೇವೆ. ಮತ್ತೊಂದೆಡೆ ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿರುವಂತಹ ಹಲವು ಪ್ರಕರಣಗಳು ಕೂಡ ಬೆಳಕಿಗೆ ಬಂದಿರುವುದನ್ನು ನೋಡಿರುತ್ತೇವೆ. ಆದರೆ ಇಲ್ಲೊಬ್ಬ ಪಾಪಿ ಪ್ರೇಮಿ ಮದುವೆ ಆಗಲ್ಲ ಅಂದಿದ್ದಕ್ಕೆ ವಿವಾಹಿತ ಮಹಿಳೆ ಮನೆಯನ್ನು ಸುಟ್ಟುಹಾಕಿರುವ ವಿಚಿತ್ರ ಘಟನೆಯೊಂದು ನಡೆದಿದೆ.

ಆತ ಒಬ್ಬ ಪಾಗಲ್ ಪ್ರೇಮಿ ಆಗಿದ್ದ ವಿವಾಹಿತೆಯನ್ನು ದುವೆಯಾಗು ಎಂದು ಕಾಡುತ್ತಿದ್ದ. ಆದರೆ ವಿವಾಹಿತೆ ಮದುವೆ ಆಗುವುದಕ್ಕೆ ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಪಾಪಿ ಪ್ರೇಮಿ ವಿವಾಹಿತೆ ಮನೆಗೆ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ಸಾರಾಯಿಪಾಳ್ಯದಲ್ಲಿ ನಡೆದಿದೆ ಎನ್ನುವ ಮಾಹಿತಿಯೊಂದು ತಿಳಿದುಬಂದಿದೆ.
ಮಹಿಳೆಯ ಮನೆಗೆ ಪಾಪಿ ಪ್ರೇಮಿ ಅರ್ಬಾಜ್ ಎಂಬ ವ್ಯಕ್ತಿ ಬೆಂಕಿ ಇಟ್ಟಿದ್ದಾನೆ. ಅರ್ಬಜ್ ಮಹಿಳೆಯ ದೂರದ ಸಂಬಂಧಿ ಆಗಿದ್ದಾನೆ ಎಂದು ಹೇಳಲಾಗುತ್ತಿದೆ. ಈತ ಮದುವೆಯಾಗು ಎಂದು ಮಹಿಳೆಯ ಹಿಂದೆ ಬಿದ್ದಿದ್ದು, ಈ ಬಗ್ಗೆ ಎರಡು ಕುಟುಂಬದ ಹಿರಿಯರು ಆತನಿಗೆ ಬುದ್ಧಿ ಮಾತನ್ನು ಹೇಳಿದ್ದರು. ಹಿರಿಯರ ಬುದ್ಧಿಮಾತಿಗೂ ಅರ್ಬಾಜ್ ಬಗ್ಗದೇ ಈ ಒಂದು ದುಷ್ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.
ಇಂದು (ಮೇ 02) 4 ಗಂಟೆ ಸುಮಾರಿಗೆ ಪಾಪಿ ಪ್ರೇಮಿ ಅರ್ಬಾಜ್ ಮಹಿಳೆ ಮನೆಗೆ ಬೆಂಕಿ ಹಚ್ಚಿದ್ದು, ಸದ್ಯ ಈ ವೇಳೆ ಮನೆಯಲ್ಲಿ ಯಾರು ಇಲ್ಲದ ಕಾರಣ ಭಾರಿ ಅನಾಹುತವೊಂದು ತಪ್ಪಿದೆ. ಇನ್ನು ಮನೆಯಲ್ಲಿದ್ದ ವಸ್ತುಗಳೆಲ್ಲವೂ ಬೆಂಕಿಗಾಹುತಿಯಾಗಿವೆ. ಬಳಿಕ ಕೇಸ್ ದಾಖಲಿಸಿಕೊಂಡು ಪೊಲೀಸರು ಅರ್ಬಜ್ನನ್ನು ಬಂಧಿಸಿದ್ದು, ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎನ್ನಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications