Breaking: ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದ ಗ್ಯಾಲರಿ ಕುಸಿತ
ಬೆಂಗಳೂರು, ಮೇ 8: ಬೊಮ್ಮನಹಳ್ಳಿ ವಾರ್ಡ್ ವ್ಯಾಪ್ತಿಯ ಎಚ್ಎಚ್ಆರ್ ಬಡಾವಣೆಯಲ್ಲಿ ನಿರ್ಮಾಣ ಹಂತದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದ ಗ್ಯಾಲರಿ ಭಾಗ ನೆಲಕ್ಕುರಳಿದೆ. ಮೇ 8ರಂದು ಸಂಜೆ ಬೀಸಿದ ಬಿರುಗಾಳಿ ಮಳೆಗೆ ಕ್ರೀಡಾಂಗಣದ ಗ್ಯಾಲರಿ ಒಂದು ಭಾಗ ಧರೆಗುರುಳಿದ್ದರೆ, ಇನ್ನೊಂದು ಭಾಗ ಮುರಿದು ಹೋಗಿದೆ.
ಸುಮಾರು 50 ಕೋಟಿ ರು ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದ 3.5 ಕೋಟಿ ರು ವೆಚ್ಚದ ಕಾಮಗಾರಿಯನ್ನು ಮಾರ್ಚ್ 1ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದ್ದರು.
ಈ ಕ್ರೀಡಾಂಗಣದ ವ್ಯಾಪ್ತಿಯಲ್ಲಿರುವ ಒಳಾಂಗಣ ಸ್ಟೇಡಿಯಂ ಸುಮಾರು ನಾಲ್ಕು ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಬಿಬಿಎಂಪಿ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಕ್ರೀಡಾಂಗಣ ಮಳೆಗೆ ಹಾನಿಗೊಂಡಿದ್ದು, ಕಳಪೆ ಕಾಮಗಾರಿಗೆ ಸಾಕ್ಷಿಯಾಗಿದೆ.

ಲೋಕಾರ್ಪಣೆಗೊಂಡ ಭಾಗವು ಎರಡೇ ತಿಂಗಳಲ್ಲಿ ನೆಲ ಸಮವಾಗಿದ್ದು, ಸುಮಾರು 4 ಕೋಟಿ ರೂ ನಷ್ಟ ಅಂದಾಜಿಸಲಾಗಿದೆ. ಕ್ರೀಡಾಂಗಣದ ಒಂದು ಗ್ಯಾಲರಿ ಮರಗಳಲ್ಲಿ ಸಿಲುಕ್ಕಿದ್ದರೆ, ಮತ್ತೊಂದು ಗ್ಯಾಲರಿ ಧರೆಗುರುಳಿದೆ. ಗ್ಯಾಲರಿ ಹಿಂಭಾಗದಲ್ಲಿ ನಿಲ್ಲಿಸಿದ್ದ ವಾಹನಗಳು ಮೇಲೂ ಕಬ್ಬಿಣದ ಸರಳುಗಳು ಬಿದ್ದಿವೆ. ಗಾಳಿ ಮಳೆಗೆ ಗ್ರಾನೈಟ್ ಸಮೇತ ಸ್ಲ್ಯಾಬ್ ಗಳು ಕಿತ್ತು ಹೋಗಿವೆ. ಭಾರಿ ಮರಗಳಿಲ್ಲದಿದ್ದರೆ, ಗಾಳಿ ಮಳೆಯಿಂದ ಭಾರಿ ಅನಾಹುತ ಸಂಭವಿಸುವ ಸಾಧ್ಯತೆಯಿತ್ತು. ಈ ದುರ್ಘಟನೆ ಜೊತೆಗೆ ಮರದ ಕೊಂಬೆ ಉರುಳಿದ್ದು, ಅದರಲ್ಲಿ ಗೂಡು ಕಟ್ಟಿದ್ದ ಹದ್ದು ಕೂಡಾ ಗಾಯಗೊಂಡಿದೆ ಎಂದು ತಿಳಿದು ಬಂದಿದೆ.
Recommended Video
ಬೊಮ್ಮನಹಳ್ಳಿ ವಾರ್ಡ್ ಕಾರ್ಪೊರೇಟರ್ ಮೋಹನ್ ರಾಜು ಅವರು ಆಸಕ್ತಿವಹಿಸಿ ಕಸದ ಕ್ವಾರಿಯಾಗಿದ್ದ ಜಾಗವನ್ನು ಕ್ರೀಡಾಂಗಣವನ್ನಾಗಿ ಪರಿವರ್ತಿಸಿದ್ದರು. ಬ್ಯಾಸ್ಕೆಟ್ ಬಾಲ್, ಸ್ಕೇಟಿಂಗ್ ಅಭ್ಯಾಸ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಈ ಕ್ರೀಡಾಂಗಣದ ನಿರ್ಮಾಣ ಕಾಮಗಾರಿಯನ್ನು ಆಂಧ್ರ ಮೂಲದ ಗುತ್ತಿಗೆದಾರ ಶಶಿಕುಮಾರ್ ಅವರು ಬಿಬಿಎಂಪಿಯಿಂದ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications