Breaking: ಜಯದೇವ ನಿರ್ದೇಶಕ ಸಿ.ಎನ್. ಮಂಜುನಾಥ್ ಸೇವಾ ಅವಧಿ ವಿಸ್ತರಿಸಿದ ಸರ್ಕಾರ
ಬೆಂಗಳೂರು ಜುಲೈ.12: ನಿವೃತ್ತಿಯಾಗಬೇಕಿದ್ದ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ಸೇವಾ ಅವಧಿಯನ್ನು ಒಂದು ವರ್ಷ ವಿಸ್ತರಣೆ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ.
ಈ ಕುರಿತು ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರೆ ದೂರವಾಣಿ ಮೂಲಕ ಕರೆ ಮಾಡಿ ತಿಳಿಸಿದ್ದಾರೆ. ನಗರದ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ಸೇವೆ ನಾಳೆ (ಜುಲೈ 19)ಮಂಗಳವಾರಕ್ಕೆ ಮುಗಿಯಬೇಕಿತ್ತು.

ಆದರೆ ಡಾ.ಸಿ.ಎನ್. ಮಂಜುನಾಥ್ ಅವರನ್ನೆ ಸೇವೆಯಲ್ಲಿ ಮುಂದುವರಿಸುವಂತೆ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಸೇರಿದಂತೆ ಹಲವಾರು ಗಣ್ಯರು ಸರ್ಕಾರದ ಮೇಲೆ ಒತ್ತಡ ತಂದಿದ್ದರು ಎಂದು ತಿಳಿದು ಬಂದಿದೆ.

ಅಲ್ಲದೇ ಕೋವಿಡ್ ಕಾಲದಲ್ಲಿ ಸಿ.ಎನ್.ಮಂಜುನಾಥ್ ಅವರ ಸೇವೆ ಪರಿಗಣಿಸಿದ ರಾಜ್ಯ ಸರ್ಕಾರ ಅವರ ಸೇವಾ ಅವಧಿಯನ್ನು ಮುಂದಿನ ಒಂದು ವರ್ಷಕ್ಕೆ ವಿಸ್ತರಣೆ ಮಾಡಿ ನಿವೃತ್ತಿಗೂ ಒಂದು ಮುನ್ನವೇ ಘೋಷಿಸಿದೆ. ಈ ಕುರಿತು ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸುವುದು ಒಂದೇ ಬಾಕಿ ಇದೆ.ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ವೇಳೆಯಲ್ಲಿಯೂ ಸಹ ಡಾ.ಸಿ ಎನ್ ಮಂಜುನಾಥ್ ಅವರ ಸೇವಾ ಅವಧಿ ವಿಸ್ತರಿಸಲಾಗಿತ್ತು. ಇದೀಗ ಬಸವರಾಜ ಬೊಮ್ಮಾಯಿ ಅವರು ಸಹ ಒಂದು ವರ್ಷ ಅವರ ಸೇವಾವಧಿ ವಿಸ್ತರಿಸಿದ್ದಾರೆ.
ಮಂಜುನಾಥ್ ಅವರ ಕಾರ್ಯವೈಖರಿ, ಆಸ್ಪತ್ರೆಯಲ್ಲಿ ಸಿಬ್ಬಂದಿ ಹಾಗೂ ವೈದ್ಯರನ್ನು ನಡೆಸಿಕೊಳ್ಳುವ ರೀತಿ, ರೋಗಿಗಳಿಗೆ ನೀಡುತ್ತಿದ್ದ ಅವರ ಸ್ಪಂದನೆ ಎಲ್ಲಿರಗೂ ಮೆಚ್ಚುಗೆಯಾಗಿತ್ತು. ಕೋವಿಡ್ ಅಲೆ ಕುರಿತು ಅವರ ಎಚ್ಚರಿಕೆ ಸಂದೇಶಗಳು ಸತ್ಯದಿಂದ ಕೂಡಿದ್ದವು.
Recommended Video
ಎಲ್ಲಿಕ್ಕಿಂತ ಮಿಗಿಲಾಗಿ ಅವರ ಮಾನವೀಯತೆ ಗುಣ, ಸರಳ ನಿಜಕ್ಕೂ ಮೆಚ್ಚುವಂತದ್ದು. ಕಡಿಮೆ ವೆಚ್ಚದಲ್ಲಿ ಬಡವರಿಗೆ ಕೆಲವೊಮ್ಮೆ ಹಣವಿಲ್ಲದಿದ್ದರೂ ರೋಗಿಗಳಿಗೆ ಚಿಕಿತ್ಸೆ ನೀಡಿದ ಉದಾಹರಣೆ ಸಾಕಷ್ಟಿವೆ.
ಈ ಎಲ್ಲ ಕಾರಣಗಳಿಂದ ಅವರನ್ನು ಪುನಃ ಜಯದೇವ ಹೃದ್ರೋಗ ಆಸ್ಪತ್ರೆ ಸೇವೆಯಲ್ಲಿ ಒಂದು ವರ್ಷ ಮುಂದುವರಿಯುವಂತೆ ರಾಜ್ಯ ಸರ್ಕಾರ ಘೋಷಿಸಿದೆ ಎಂದು ತಿಳಿದು ಬಂದಿದೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications