ಕರ್ನಾಟಕದಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಪ್ರಕರಣ
ಬೆಂಗಳೂರು, ಜೂ. 16 : ಕರ್ನಾಟಕದಲ್ಲಿ ಪ್ರತಿವರ್ಷ 45 ಸಾವಿರಕ್ಕೂ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ದಾಖಲಾಗುತ್ತಿದ್ದು, ಅವುಗಳಲ್ಲಿ 8 ಸಾವಿರದಷ್ಟು ಪ್ರಕರಣಗಳು ಸ್ತನ ಕ್ಯಾನ್ಸರಿಗೆ ಸಂಬಂಧಿಸಿರುತ್ತದೆ. ಇದು ವರ್ಷದಿಂದ ವರ್ಷಕ್ಕೆ ವೃದ್ಧಿಯಾಗುತ್ತಲಿರುವುದು ನಿಜಕ್ಕೂ ಆಘಾತಕಾರಿ ಸಂಗತಿ.
ಕ್ಯಾನ್ಸರ್ ಚಿಕಿತ್ಸೆ ನೀಡುತ್ತಿರುವ ಸರಕಾರಿ ಆಸ್ಪತ್ರೆ ಕಿದ್ವಾಯಿ ಸಂಸ್ಥೆಯಲ್ಲೇ ಪ್ರತಿವರ್ಷ ದಾಖಲಾಗುವ 22 ಸಾವಿರ ಕ್ಯಾನ್ಸರ್ ಪ್ರಕರಣಗಳಲ್ಲಿ 850 ಸ್ತನ ಕ್ಯಾನ್ಸರ್ ಆಗುರುತ್ತವೆ ಎಂದು ಸಂಸ್ಥೆ ಹೇಳಿದೆ. ಕ್ಯಾನ್ಸರ್ ರೋಗ ಕುರಿತು ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಕಿದ್ವಾಯಿ ಸೋಮವಾರ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ಇಷ್ಟೊಂದು ಪ್ರಕರಣಗಳು ದಾಖಲಾಗಲು ಕಾರಣವೇನು ಗೊತ್ತಾ? ಬದಲಾಗುತ್ತಿರುವ ಜೀವನಶೈಲಿ. ತಡವಾಗಿ ಮದುವೆಯಾಗುವುದು, ಮಕ್ಕಳು ಬೇಡ ಅನ್ನುವುದು, ಸ್ತನ್ಯಪಾನ ಮಾಡಿಸದಿರುವುದು, ಕುಡಿತ ಸಿಗರೇಟಿಗೆ ದಾಸರಾಗುವುದು, ನಗರೀಕರಣ, ಅತಿಯಾಗಿ ಗರ್ಭನಿರೋಧಕ ಮಾತ್ರೆ ನುಂಗುವುದು ಕ್ಯಾನ್ಸರ್ ರೋಗ ಉಲ್ಬಣವಾಗಲು ಕಾರಣ ಎಂದು ಹೇಳುತ್ತಾರೆ ವೈದ್ಯರು.

ಅತಿಯಾದ ನಗರೀಕರಣಕ್ಕೆ ಒಡ್ಡಿಕೊಂಡಿರುವ ಬೆಂಗಳೂರು ಸ್ತನ ಕ್ಯಾನ್ಸರ್ ರಾಜಧಾನಿ ಎಂಬ ಕುಖ್ಯಾತಿಗೆ ಪಾತ್ರವಾಗಿದೆ. ಪಾಪ್ಯುಲೇಷನ್ ಬೇಸ್ಡ್ ಕ್ಯಾನ್ಸರ್ ರಿಜಿಸ್ಟ್ರಿ 2013ರಲ್ಲಿ ನಡೆಸಿದ ಅಧ್ಯಯನದಲ್ಲಿ ಈ ಆತಂಕಕಾರಿ ಸಂಗತಿ ಬಯಲಾಗಿದೆ. [ಬೆಂಗಳೂರು, ಭಾರತದ ನೂತನ ಸ್ತನ ಕ್ಯಾನ್ಸರ್ ರಾಜಧಾನಿ!]
ಅಮೆರಿಕದ ಫಿಲಡೆಲ್ಫಿಯಾದಲ್ಲಿ ಕ್ಯಾನ್ಸರ್ ಚಿಕಿತ್ಸಾ ತಜ್ಞೆಯಾಗಿರುವ ಶರ್ಮಿಳಾ ಐತಾಳ್ ಅವರು ಕ್ಯಾನ್ಸರ್ ರೋಗ ಹಬ್ಬುತ್ತಿರುವ ಮತ್ತು ಅದರ ಚಿಕಿತ್ಸಾ ವಿಧಾನದ ಕುರಿತು ವಿಸ್ತೃತವಾಗಿ ಮಾತನಾಡಿದರು. ಭಾರತಕ್ಕಿಂತ ಅಮೆರಿಕದಲ್ಲಿ ಸ್ತನ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವೈದ್ಯ ಡಾ. ಎಂ. ವಿಜಯಕುಮಾರ್ ಅವರು, ಸ್ತನ ಕ್ಯಾನ್ಸರ್ ಆಗುವುದನ್ನು ತಡೆಗಟ್ಟಲು ಸಾಧ್ಯವಿಲ್ಲ. ಆದರೆ, ಆಗಾಗ ತಪಾಸಣೆ ಮಾಡಿಸುವುದರಿಂದ ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತವಾದ ಚಿಕಿತ್ಸೆ ಕೊಡಿಸಬಹುದು ಎಂದು ಅಭಿಪ್ರಾಯಪಟ್ಟರು.
-
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ












Click it and Unblock the Notifications