ಕಾಂಗ್ರೆಸ್ ಬಿಡುಗಡೆ ಮಾಡಿದ ಡೈರಿ ನಕಲಿ, ಆರೋಪವೆಲ್ಲ ಸುಳ್ಳು: ಯಡಿಯೂರಪ್ಪ
ಬೆಂಗಳೂರು, ಮಾರ್ಚ್ 22: ಬಿಜೆಪಿ ಹೈಕಮಾಂಡ್ ನಾಯಕರಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕಪ್ಪ ಕಾಣಿಕೆ ನೀಡುತ್ತಿದ್ದರು ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ಮಾಡಿರುವ ಆರೋಪವನ್ನು ಯಡಿಯೂರಪ್ಪ ಅವರು ಅಲ್ಲಗೆಳೆದಿದ್ದಾರೆ.
'ಕಪ್ಪ ನೀಡಿರುವ ವಿಚಾರವನ್ನು ಬಿಎಸ್ ಯಡಿಯೂರಪ್ಪ ಹಾಗೂ ದಿವಂಗತ ಸಂಸದ ಅನಂತ್ ಕುಮಾರ್ ಅವರು ಸಂಭಾಷಣೆ ನಡೆಸಿದ್ದು ದೃಢಪಟ್ಟಿದೆ. ಇಬ್ಬರು ನಾಯಕರು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಡಿಯನ್ನು ಕಾಂಗ್ರೆಸ್ ಈ ಹಿಂದೆ ಕೂಡಾ ಬಿಡುಗಡೆ ಮಾಡಿತ್ತು. ಆದರೆ, ತನಿಖೆ ಪ್ರಗತಿ ಕಂಡಿಲ್ಲ, ಈ ಬಗ್ಗೆ ಲೋಕಪಾಲ ತನಿಖೆ ನಡೆಯಲಿದೆ ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಆದರೆ, ಕಾಂಗ್ರೆಸ್ ಇಂದು ಬಿಡುಗಡೆ ಮಾಡಿರುವ ಕೈ ಬರಹವುಳ್ಳ ಡೈರಿ ಹಾಗೂ ಅದರಲ್ಲಿರುವ ಹಸ್ತಾಕ್ಷರ ಎಲ್ಲವೂ ನಕಲಿ, ಈ ಬಗ್ಗೆ ತನಿಖೆ ಪ್ರಗತಿಯಲ್ಲಿದೆ. ಚುನಾವಣೆ ಸಂದರ್ಭದಲ್ಲಿ ಈ ರೀತಿ ಆರೋಪಗಳು ಮಾಡುವುದು ಕಾಂಗ್ರೆಸ್ಸಿನಿಂದ ನಿರೀಕ್ಷಿತ ಎಂದು ಯಡಿಯೂರಪ್ಪ ಹೇಳಿದರು.
ಕೇಂದ್ರ ಸಚಿವ ಅರುಣ್ ಜೇಟ್ಲಿ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಸೇರಿದಂತೆ ವಿವಿಧ ನಾಯಕರಿಗೆ 1800 ಕೋಟಿ ರು ಗೂ ಅಧಿಕ ಮೊತ್ತವನ್ನು ಯಡಿಯೂರಪ್ಪ ಅವರು ನೀಡಿದ್ದಾರೆ ಈ ಬಗ್ಗೆ ತನಿಖೆ ನಡೆಯಲಿದೆ ಎಂದು ಸುರ್ಜೆವಾಲ ಆಗ್ರಹಿಸಿದ್ದಾರೆ.

ಯಡಿಯೂರಪ್ಪ ಸಿಡಿಸಿದ ಬಾಂಬಿಗೆ ಪ್ರತಿಬಾಂಬ್
ಸಿದ್ದರಾಮಯ್ಯ ಅವರು, ಹೈಕಮಾಂಡ್ ಗೆ 1000 ಕೋಟಿ ರು. ನೀಡಿದ್ದಾರೆಂಬ ವಿಚಾರ ಎಂಎಲ್ಸಿ ಗೋವಿಂದರಾಜು ಡೈರಿಯಲ್ಲಿರುವುದಾಗಿ ಯಡಿಯೂರಪ್ಪ ಬಾಂಬ್ ಸಿಡಿಸಿದ್ದರು. ನಂತರ ಬಿಜೆಪಿ ಕಚೇರಿಯಲ್ಲಿ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ನಡುವೆ ನಡೆದ ಸಂಭಾಷಣೆಯ ಸಿಡಿಯನ್ನು ಕಾಂಗ್ರೆಸ್ ನಾಯಕರು ಬಿಡುಗಡೆ ಮಾಡಿದ್ದರು. ನಂತರ ಇಬ್ಬರು ನಾಯಕರ ವಿರುದ್ಧ ಮಲ್ಲೇಶ್ವರ ಪೊಲೀಸ್ ಠಾಣೆ, ಎಸಿಬಿ, ಸೈಬರ್ ಪೊಲೀಸರಿಗೆ ಕಾಂಗ್ರೆಸ್ ದೂರು ನೀಡಿತ್ತು. ಸದ್ಯ ಈ ಪ್ರಕರಣದ ವಿಚಾರಣೆ ಕೋರ್ಟಿನಲ್ಲಿದೆ
|
ಅಪ್ಪನ ಪರ ವಿಜಯೇಂದ್ರ ವಾದ
ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ, ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರು ಟ್ವೀಟ್ ಮಾಡಿ, ಕಾಂಗ್ರೆಸ್ ಬಿಡುಗಡೆ ಮಾಡಿರುವ ಸಿಡಿ ನಕಲಿ, ಆರೋಪಗಳೆಲ್ಲವೂ ಸುಳ್ಳು ಎಂದಿದ್ದಾರೆ.

ಕಾಂಗ್ರೆಸ್ಸಿಗರು ನಾಯಕರು ವೈಚಾರಿಕವಾಗಿ ದಿವಾಳಿ
* ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರು ವೈಚಾರಿಕವಾಗಿ ದಿವಾಳಿಯಾಗಿದ್ದಾರೆ.
* ಕಾಂಗ್ರೆಸ್ ನಾಯಕರು ಸಾರ್ವಜನಿಕವಾಗಿ ಚರ್ಚಿಸಲು ಯಾವುದೇ ಅಭಿವೃದ್ಧಿಪರ ವಿಷಯಗಳಿಲ್ಲ.
* ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಜನಪ್ರಿಯತೆ ದಿನ ಕಳೆದಂತೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರು ತೀವ್ರ ಹತಾಶೆಗೊಂಡಿದ್ದಾರೆ.

ದಾಖಲೆಗಳೆಲ್ಲವೂ ನಕಲಿ ಎಂದು ಸಾಬೀತಾಗಿದೆ
* 2019ರ ಚುನಾವಣೆಯಲ್ಲಿ ಸೋಲು ತಮಗೆ ಕಟ್ಟಿಟ್ಟ ಬುತ್ತಿ ಎನ್ನುವುದು ಕಾಂಗ್ರೆಸ್ ನಾಯಕರಿಗೆ ಸ್ಪಷ್ಟವಾಗಿ ಅರಿವಾಗಿದೆ.
* ಕಾಂಗ್ರೆಸ್ ನಾಯಕರು ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡಿದ್ದಾರೆ.
* ಈಗ ಪ್ರಸ್ತಾಪಿಸಿರುವ ಭ್ರಷ್ಟಾಚಾರದ ಆರೋಪದ ಕುರಿತು ಈ ಹಿಂದೆಯೇ ವಿಚಾರಣೆ ನಡೆದು ಇದಕ್ಕೆ ಸಂಬಂಧಿಸಿದ ದಾಖಲೆಗಳಲ್ಲವೂ ನಕಲಿ ಎಂದು ಸಾಬೀತಾಗಿದೆ

ಕಾಂಗ್ರೆಸ್ಸಿನಿಂದ ಅಪಪ್ರಚಾರ ಮತ್ತು ನಕಲಿ ಸುದ್ದಿ
ಆದಾಯ ತೆರಿಗೆ ಇಲಖೆಯು ದಾಖಲೆಗಳನ್ನು ಮತ್ತು ನನ್ನ ಕೈ ಬರಹ ಹಾಗೂ ಸಹಿಯನ್ನು ಕೂಡಾ ತಪಾಸಣೆಗೆ ಒಳಪಡಿಸಿದ್ದು, ಅವೆಲ್ಲವೂ ನಕಲಿ ಎನ್ನುವುದು ದೃಢಪಟ್ಟಿದೆ.
ಕಾಂಗ್ರೆಸ್ ನಾಯಕರು ದುರುದ್ದೇಶಪೂರಿತ ಅಪಪ್ರಚಾರ ಮತ್ತು ನಕಲಿ ಸುದ್ದಿಗಳನ್ನು ಹರಡುವುದರಲಿ ನಿಸ್ಸೀಮರು.
ರಾಜಕೀಯವಾಗಿ ಲಾಭ ಪಡೆಯುವ ಉದ್ದೇಶ ಬಿಟ್ಟರೆ ಇದರ ಹಿಂದೆ ಯಾವುದೇ ವಾಸ್ತವಾಂಶ ಇಲ್ಲ
ಕಾಂಗ್ರೆಸ್ ನಾಯಕರು ಪ್ರಸ್ತಾಪಿಸಿರುವ ವಿಷಯಗಳು ಅಪ್ರಸ್ತುತ ಮತ್ತು ಸುಳ್ಳಿನ ಕಂತೆ. ಈ ವಿಷಯ ಮುಗಿದ ಅಧ್ಯಾಯ
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ












Click it and Unblock the Notifications