ಬ್ರಾಡ್ ವೇ ಆಸ್ಪತ್ರೆಗೆ ಇನ್ಫೋಸಿಸ್ ಮೂಲ ಸೌಕರ್ಯ, ಸುಧಾಕರ್ ಮೆಚ್ಚುಗೆ
ಬೆಂಗಳೂರು, ಜುಲೈ 8: ಶಿವಾಜಿನಗರದ ಬ್ರಾಡ್ ವೇ ರಸ್ತೆಯಲ್ಲಿರುವ ಬಿಬಿಎಂಪಿಗೆ ಸೇರಿದ ಕಟ್ಟಡವನ್ನು ಸುಸಜ್ಜಿತ ಕೋವಿಡ್ ಆಸ್ಪತ್ರೆಯಾಗಿ ಸಜ್ಜುಗೊಳಿಸಲಾಗುತ್ತಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಚಿವ ಸುಧಾಕರ್ ಅವರು, ಆಸ್ಪತ್ರೆಗೆ ಅಗತ್ಯವಿರುವ 30 ಕೋಟಿ ವೆಚ್ಚದ ಮೂಲಸೌಕರ್ಯವನ್ನು ಪ್ರತಿಷ್ಠಿತ ಇನ್ಫೋಸಿಸ್ ಫೌಂಡೇಷನ್ನಿನಿಂದ ಒದಗಿಸಲಾಗುತ್ತಿದ್ದು ಶೀಘ್ರದಲ್ಲೇ ಪೂರ್ಣ ಪ್ರಮಾಣದ ಕೋವಿಡ್ ಆಸ್ಪತ್ರೆಯಾಗಿ ರೂಪುಗೊಳ್ಳಲಿದೆ ಎಂದು ತಿಳಿಸಿದರು.

ಅರಂಭದಲ್ಲಿ ಹೈ ಫ್ಲೋ ಆಕ್ಸಿಜೆನ್ ಹೊಂದಿರುವ 180 ಹಾಸಿಗೆಗಳ ಸೌಕರ್ಯ ಒದಗಿಸಲಾಗುತ್ತಿದ್ದು, ಅಗತ್ಯವಿದ್ದಲ್ಲಿ ವೆಂಟಿಲೇಟರ್ ಅಳವಡಿಸುವ ವ್ಯವಸ್ಥೆ ಹೊಂದಿರುತ್ತದೆ ಎಂದು ಸಚಿವರು ಹೇಳಿದರು. ಆಸ್ಪತ್ರೆಗೆ 30 ವೆಂಟಿಲೇಟರ್ ಒದಗಿಸಲಾಗುತ್ತಿದ್ದು, ನ್ಯೂರೋ ಸರ್ಜರಿ ಓಟಿ, ಕಾರ್ಡಿಯೋ ಓಟಿ, ಸಿಟಿ ಸ್ಕ್ಯಾನ್ ಸೌಲಭ್ಯವನ್ನು ಈ ಆಸ್ಪತ್ರೆ ಒಳಗೊಂಡಿರುತ್ತದೆ. ಮುಂದಿನ 10 ದಿನಗಳ ಒಳಗೆ ಸಂಪೂರ್ಣವಾಗಿ ಸಿದ್ಧವಾಗಲಿದೆ ಎಂದು ಸಚಿವರು ತಿಳಿಸಿದರು.

ನಂತರ ಬೌರಿಂಗ್ ಮತ್ತು ಲೇಡಿ ಕರ್ಜ಼ನ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಸುಧಾಕರ್ ಅವರು, ಚಿಕಿತ್ಸಾ ಸೌಲಭ್ಯ ಸೇರಿದಂತೆ ಇಲ್ಲಿ ಪಾಲಿಸಲಾಗುತ್ತಿರುವ ಸುರಕ್ಷತಾಕ್ರಮಗಳ ಪರಾಮರ್ಶೆ ನಡೆಸಿದರು. ಸೋಂಕಿತರೊಂದಿಗೆ ವೀಡಿಯೋ ಸಂವಾದ ನಡೆಸಿ ಯೋಗಕ್ಷೇಮ ವಿಚಾರಿಸಿದರು.
ಚಿಕಿತ್ಸಾ ಸೌಲಭ್ಯಗಳ ಕುರಿತು ಇಲ್ಲಿನ ರೋಗಿಗಳು ತೃಪ್ತಿ ವ್ಯಕ್ತಪಡಿಸಿದ್ದಾರೆ. ಇದೇ ಆಸ್ಪತ್ರೆಯಲ್ಲಿ ಕೋವಿಡ್ ಮರಣ ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ಮರಣ ಮೌಲ್ಯಮಾಪನಾ ವರದಿ (Death Audit Report ) ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications