2 ಕೋಟಿ ರುಪಾಯಿ ವೆಚ್ಚದಲ್ಲಿ ಲಾಲ್ಬಾಗ್ನಲ್ಲಿ ಶೀಘ್ರದಲ್ಲೇ ಗ್ರಾನೈಟ್ ಬೆಂಚುಗಳ ಅಳವಡಿಕೆ
ಬೆಂಗಳೂರು, ಆಗಸ್ಟ್ 18: 2 ಕೋಟಿ ರೂಪಾಯಿ ವೆಚ್ಚದಲ್ಲಿ ಲಾಲ್ಬಾಗ್ನಲ್ಲಿ ಗ್ರಾನೈಟ್ ಬೆಂಚುಗಳನ್ನು ಅಳವಡಿಸಲಾಗುವುದು ಎಂದು ಶಾಸಕ ಉದಯ್ ಗರುಡಾಚಾರ್ ತಿಳಿಸಿದ್ದಾರೆ. ಎರಕಹೊಯ್ದ ಕಬ್ಬಿಣದಿಂದ ಮಾಡಿದ ಹಳೆಯ ಮತ್ತು ಶಿಥಿಲವಾದ ಬೆಂಚುಗಳನ್ನು ತೆಗೆದು ಶೀಘ್ರದಲ್ಲೇ ಗ್ರಾನೈಟ್ನಿಂದ ನಿರ್ಮಿಸಿದ ಬೆಂಚುಗಳನ್ನು ಹಾಕಲಾಗುತ್ತದೆ.
ಲಾಲ್ಬಾಗ್ನಲ್ಲಿ ಶಿಥಿಲವಾದ ಬೆಂಚುಗಳನ್ನು ಗಮನಿಸಿದ ಶಾಸಕ ಉದಯ್ ಗರುಡಾಚಾರ್, ತೋಟಗಾರಿಕಾ ಸಚಿವ ಮುನಿರತ್ನ ಬಳಿ ವಿಷಯ ಪ್ರಸ್ತಾಪಿಸಿದ್ದಾರೆ. ಉದ್ಯಾನವನದ ಸಮಗ್ರ ಅಭಿವೃದ್ಧಿಗೆ 5 ಕೋಟಿ ರುಪಾಯಿ ಬಿಡುಗಡೆ ಮಾಡಲು ಕೇಳಿಕೊಂಡಿದ್ದಾರೆ.
ಈ ಕುರಿತು ಮಾತನಾಡಿದ ಶಾಸಕ ಉದಯ್ ಗರುಡಾಚಾರ್, "ಆಗಸ್ಟ್ 5 ರಂದು, ಸಚಿವ ಮುನಿರತ್ನ ಮತ್ತು ನಾನು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಎಲೆಕ್ಟ್ರಿಕ್ ಬಂಡಿ ಹತ್ತಿ ಉದ್ಯಾನವನದ ಸುತ್ತಲೂ ಸವಾರಿ ಮಾಡಿದೆವು. ನಾನು ಮುನಿರತ್ನನಿಗೆ ಮುರಿದ ಬೆಂಚುಗಳನ್ನು ತೋರಿಸಿದೆ. ಮುಖ್ಯಮಂತ್ರಿಗಳ ಬಳಿ ಚರ್ಚಿಸಿ 5 ಕೋಟಿ ರುಪಾಯಿ ಬಿಡುಗಡೆ ಮಾಡುವಂತೆ ಕೇಳಿದಾಗ ಅವರು 2 ಕೋಟಿ ರುಪಾಯಿ ಬಿಡುಗಡೆ ಮಾಡಲು ಒಪ್ಪಿದರು. ಅನುದಾನ ಯಾವಾಗ ಬೇಕಾದರೂ ಬರಬಹುದು ಮತ್ತು ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನದ ವೇಳೆಗೆ ಕಲ್ಲು ಬೆಂಚುಗಳು ಜಾರಿಯಾಗಲಿವೆ,'' ಎಂದರು.

ಪರಿಸರಪ್ರಿಯರ ವಿರೋಧ ಸಾಧ್ಯತೆ
ಮುನಿರತ್ನ ಕೂಡ ಶೀಘ್ರದಲ್ಲೇ ಲಾಲ್ಬಾಗ್ನಲ್ಲಿ ಹೊಸ ಗ್ರಾನೈಟ್ ಬೆಂಚ್ಗಳು ಬರಲಿವೆ ಎಂದು ಖಚಿತಪಡಿಸಿದರು. ಆದರೆ, ಲಾಲ್ಬಾಗ್ನ ಹಿರಿಯ ಅಧಿಕಾರಿಯೊಬ್ಬರು, ಕಲ್ಲಿನ ಬೆಂಚುಗಳು ವಿವಾದಕ್ಕೆ ಕಾರಣವಾಗಬಹುದು ಎಂದು ಹೇಳಿದ್ದಾರೆ. ಪರಿಸರಪ್ರಿಯರು ಕಲ್ಲಿನ ಬೆಂಚ್ಗಳನ್ನು ಅಳವಡಿಸಲು ವಿರೋಧ ವ್ಯಕ್ತಪಡಿಸಬಹುದು ಎಂದರು.
"ಎರಕಹೊಯ್ದ ಕಬ್ಬಿಣದಿಂದ ಮಾಡಿದ ಹಳೆಯ ಬೆಂಚುಗಳು ಒಳ್ಳೆಯದು, ಮತ್ತು ಅನೇಕ ಸಂದರ್ಶಕರು ಆ ಬೆಂಚುಗಳ ಜೊತೆ ಭಾವನಾತ್ಮಕ ನಂಟು ಹೊಂದಿದ್ದಾರೆ. ಗ್ರಾನೈಟ್ ಬೆಂಚುಗಳ ಬದಲಿಗೆ ಹಳೆಯ ಬೆಂಚುಗಳನ್ನು ಬದಲಾಯಿಸಿ ದುರಸ್ತಿ ಮಾಡಬೇಕು. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಈ ಎಲ್ಲಾ ಸಲಹೆಗಳು ಲಾಲ್ಬಾಗ್ ತಜ್ಞರ ಸಮಿತಿಯ ಮುಂದೆ ಬರುತ್ತವೆ," ಎಂದು ಅಧಿಕಾರಿ ಹೇಳಿದರು.

ಯಶಸ್ವಿ ಸ್ವಾತಂತ್ರ್ಯ ದಿನಾಚರಣೆಯ ಫಲಪುಷ್ಪ ಪ್ರದರ್ಶನದ ನಂತರ, ಅಧಿಕಾರಿಗಳು ಉದ್ಯಾನವನವನ್ನು ಸ್ವಚ್ಛಗೊಳಿಸುವ ಮತ್ತು ರಾಜ್ಯದ ವಿವಿಧ ಭಾಗಗಳಿಂದ ತರಲಾದ ಡಾ. ರಾಜ್ಕುಮಾರ್ ಮತ್ತು ಡಾ. ಪುನೀತ್ ರಾಜ್ಕುಮಾರ್ ಅವರ ಪ್ರತಿಮೆಗಳನ್ನು ಸ್ಥಳಾಂತರಿಸುವಲ್ಲಿ ನಿರತರಾಗಿದ್ದಾರೆ.
Recommended Video
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications