ಜಾಹೀರಾತು ಫಲಕಗಳ ವಿರುದ್ಧ ಬಿಬಿಎಂಪಿ ಸಮರ
ಬೆಂಗಳೂರು, ಜ.29 : ಬೆಂಗಳೂರು ನಗರದಲ್ಲಿರುವ ಜಾಹೀರಾತು ಫಲಕಗಳ ವಿರುದ್ಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಮರ ಸಾರಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಎಲ್ಲ ವಿಧದ ಜಾಹೀರಾತು ಫಲಕಗಳ ಮೇಲೆ ನಿಷೇಧ ವಿಧಿಸಲು ಕೌನ್ಸಿಲ್ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ನಗರದಲ್ಲಿ 21,000 ಅನಧಿಕೃತ ಜಾಹೀರಾತು ಫಲಕಗಳಿವೆ.
ಬುಧವಾರ ನಡೆದ ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಆಡಳಿತ ಪಕ್ಷದ ನಾಯಕ ಎನ್.ಆರ್. ರಮೇಶ್ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಎಲ್ಲ ವಿಧದ ಜಾಹೀರಾತು ಫಲಕಗಳನ್ನು ನಿಷೇಧಿಸುವ ನಿರ್ಣಯವನ್ನು ಮಂಡಿಸಿದರು. ಸಭೆ ಸರ್ವಾನುಮತದಿಂದ ಇದಕ್ಕೆ ಒಪ್ಪಿಗೆ ಸೂಚಿಸಿತು. [ಬೆಂಗಳೂರಿನಲ್ಲಿ ಜಾಹೀರಾತು ಗರಂ]

ಬೆಂಗಳೂರು ನಗರದ ಸೌಂದರ್ಯ, ವಾಹನ ಚಾಲಕರ ಸುರಕ್ಷತೆ, ಆಡಳಿತಾತ್ಮಕ ಶಿಸ್ತು ಹಾಗೂ ಪರಿಸರಮಾಲಿನ್ಯ ನಿಯಂತ್ರಣದ ದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. ಅನಧಿಕೃತ ಜಾಹೀರಾತು ಫಲಕವನ್ನು ತೆರವುಗೊಳಿಸುವ ಕಾರ್ಯವೂ ಆರಂಭವಾಗಿದೆ. [ಬ್ಯಾನರ್ ಹಾಕಲು ಬಂತು ಮಾರ್ಗಸೂಚಿ]
ವಾಣಿಜ್ಯ ವ್ಯವಹಾರಗಳಿಗೆ ಅವುಗಳ ಹೆಸರು, ವಿಳಾಸ ನಮೂದಿಸಲು ಪ್ರತಿ ಸಂಸ್ಥೆಗೆ ನಿಗದಿತ ಉದ್ದ ಹಾಗೂ ಅಗಲದ ಒಂದು ಫಲಕವನ್ನು ಹಾಕಿಕೊಳ್ಳಲು ಮಾತ್ರ ಉಚಿತವಾಗಿ ಅನುಮತಿ ನೀಡಲಾಗುತ್ತದೆ. ಉಳಿದಂತೆ ಸ್ವಂತ ಫಲಕದ ಹೆಸರಿನಲ್ಲಿ ಯಾವುದೇ ಜಾಹೀರಾತು ಫಲಕ ಅಳವಡಿಸಿಕೊಳ್ಳಲು ಅವಕಾಶ ನೀಡುವುದಿಲ್ಲ.
ಬಿಬಿಎಂಪಿ ನೀಡಿರುವ ಮಾಹಿತಿಯಂತೆ ನಗರದಲ್ಲಿ ಒಟ್ಟು 2,261 ಅಧಿಕೃತ ಜಾಹೀರಾತು ಫಲಕಗಳಿವೆ. 21,000 ಅನಧಿಕೃತ ಫಲಕಗಳಿವೆ. ಜಾಹೀರಾತಿನಿಂದ 300 ಕೋಟಿ ಆದಾಯ ನಿರೀಕ್ಷಿಸಲಾಗಿತ್ತು. ಆದರೆ, ಬರುತ್ತಿರುವ ಆದಾರ ಕೇವಲ 20 ಕೋಟಿ.
-
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ









Click it and Unblock the Notifications