ನಿವೇಶನ ಹೆಸರಲ್ಲಿ ಮೋಸ ಮಾಡಿದ್ದ ಬೃಂದಾವನ್ ಪ್ರಾಪರ್ಟಿ ಎಂಡಿ ಸೆರೆ
ಬೆಂಗಳೂರು, ಆ. 02: ಕಡಿಮೆ ಬೆಲೆಗೆ ನಿವೇಶನ ಕೊಡುವ ಆಸೆ ಹುಟ್ಟಿಸಿ ಪೊಲೀಸರು ಸೇರಿದಂತೆ ಅನೇಕರಿಗೆ ಮಕ್ಮಲ್ ಟೋಪಿ ಹಾಕಿದ್ದ ಬೃಂದಾವನ್ ಪ್ರಾಪರ್ಟಿ ದಿನೇಶ್ ಗೌಡನನ್ನು ಹಾಸನ ಜಿಲ್ಲೆಯ ಅರಕಲ ಗೂಡಿನಲ್ಲಿ ಬಂಧಿಸಲಾಗಿದೆ.
ತಾನು ಯಾರಿಗೂ ಐದು ಪೈಸೆ ಮೋಸ ಮಾಡಲ್ಲ. ನಾನು ಪರಾರಿಯಾಗಿರುವ ಬಗ್ಗೆ ಸುದ್ದಿಗಳು ಬಂದಿವೆ. ಕೊರೊನಾದಿಂದ ಸಂಕಷ್ಟಕ್ಕೆ ಈಡಾಗಿದ್ದೇನೆ ಎಂದು ಐಷಾರಾಮಿ ಕಾರಿನಲ್ಲಿ ಕೂತು ನಲವತ್ತು ಸೆಕೆಂಡಿನ ವಿಡಿಯೋ ಜತೆಗೆ ಪ್ರಕಟಣೆ ಬಿಡುಗಡೆ ಮಾಡಿದ್ದ. ವಿಡಿಯೋ ಬಿಡುಗಡೆ ಮಾಡಿದ ಬೆನ್ನಲ್ಲೇ ಬೃಂದಾವನ ಪ್ರಾಪರ್ಟಿ ವ್ಯವಸ್ಥಾಪಕ ನಿರ್ದೇಶಕ ದಿನೇಶ್ ಗೌಡ ಅರಕಲಗೂಡಿನಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಈತನ ಬಂಧನವನ್ನು ಉತ್ತರ ವಿಭಾಗದ ಡಿಸಿಪಿ ಖಚಿತ ಪಡಿಸಿದ್ದಾರೆ.
ಕಥೆ ಕಟ್ಟಿ ಎಸ್ಕೇಪ್ ಗೆ ಪ್ಲಾನ್: ಕೊರೊನಾ ಲಾಕ್ ಡೌನ್ ಎಲ್ಲಾ ಕ್ಷೇತ್ರದವರನ್ನೂ ಹೈರಾಣಾಗಿಸಿದೆ. ಅದರಲ್ಲಿ ರಿಯಲ್ ಎಸ್ಟೇಟ್ ಮಾರುಕಟ್ಟೆಯೂ ಹೊರತಾಗಿಲ್ಲ. ಕಳೆದ ಎರಡು ವರ್ಷಗಳ ಆರ್ಥಿಕ ಹಿಂಜರಿತದಿಂದಾಗಿ ನಮ್ಮ ಮಾರುಕಟ್ಟೆ ಮತ್ತು ಹಣದ ಸರಪಳಿ ಹಳಿತಪ್ಪಿದೆ. ಈ ಹಳಿತಪ್ಪಿರುವ ಹಣದ ಮತ್ತು ಮಾರುಕಟ್ಟೆಯ ಸರಪಳಿ ಇನ್ನು ಕೆಲವೇ ದಿನಗಳಲ್ಲಿ ಸರಿಹೋಗಲಿದ್ದು, ಎಲ್ಲಾ ಹೂಡಿಕೆದಾರರಿಗೂ ಕೂಡಾ ನಾವು ಯಾವುದೇ ಅನ್ಯಾಯವಿಲ್ಲದ ರೀತಿಯಲ್ಲಿ ಸೈಟು ಅಥವಾ ಹಣವ ಹಿಂದಿರುಗಿಸಲಿದ್ದೇವೆ ಎಂದು ಬೃಂದಾವನ್ ಪ್ರಾಪರ್ಟೀಸ್ ಸಂಸ್ಥೆಯ ಮಾಲೀಕ ದಿನೇಶ್ ಗೌಡ ಸ್ಪಷ್ಟನೆ ನೀಡಿದ್ದ.

ಬೃಂದಾವನ್ ಪ್ರಾಪರ್ಟಿ ಮನವಿ: ಕರೋನಾ ಮಹಾಮಾರಿಯ ಹೊಡೆತಕ್ಕೆ ನಾವೆಲ್ಲಾ ಸಿಲುಕಿಕೊಂಡಿದ್ದೇವೆ. ಇದಕ್ಕೆ ನೀವು ಹೊರತಾಗಿಲ್ಲ. ನೀವು ಹೂಡಿಕೆ ಮಾಡಿರುವ ಹಣವನ್ನು ನಾನು ಹಿಂದೆ ನೀಡದೇ ಎಲ್ಲಿಯೂ ಹೋಗಲ್ಲ. ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸಿದ್ದೇನೆ. ಹಲವರಿಗೆ ನಿವೇಶನ ನೋಂದಣಿ ಮಾಡಿಸಿದ್ದೇನೆ. ಸೈಟು ಬೇಡ ಎಂದವರಿಗೆ ಹಣ ವಾಪಸು ಕೊಟ್ಟಿದ್ದೇನೆ. ಭೂ ಪರಿವರ್ತನೆ ಹಾಗೂ ಕೊರೊನಾ ಲಾಕ್ ಡೌನ್ ನಿಂದ ಸಮಸ್ಯೆ ಆಗಿದೆ. ನೀವು ನೀಡಿರುವ ಹಣ ಭೂಮಿ ರೂಪದಲ್ಲಿ ಎಂದು ತಿಳಿಸಿದ್ದಾನೆ.
ಬೀಸೋ ದೋಣ್ಣೆಯಿಂದ ತಪ್ಪಿಸಿಕೊಳ್ಳುವ ಪ್ಲಾನ್:
ಬೃಂದಾವನ್ ಪ್ರಾಪರ್ಟಿ ಯದ್ದು ಕೇವಲ ಭೂ ಪರಿವರ್ತನೆ ಸಮಸ್ಯೆ ಆಗಿದ್ದಲ್ಲಿ ರಾಜಾಜಿನಗರದ ಕಚೇರಿಯನ್ನು ರಾತ್ರೋ ರಾತ್ರಿ ಖಾಲಿ ಮಾಡುವ ಅಗತ್ಯವಿಲ್ಲ. ಎಲ್ಲಾ ಗ್ರಾಹಕರಿಗೂ ತಿಳಿಸಿ ಸ್ಥಳಾಂತರ ಮಾಡಬಹುದಿತ್ತು. ಬೇರೆಲ್ಲೂ ಸ್ಥಳಾಂತರ ಮಾಡದೇ ಕಚೇರಿ ಖಾಲಿ ಮಾಡುವ ಉದ್ದೇಶ ಏನಿತ್ತು? ಇನ್ನು ಅನೇಕರಿಗೆ ಕೊಟ್ಟಿರುವ ನಿವೇಶನ ದಾಖಲೆಗಳು ಬೋಗಸ್ ಎಂಬುದು ಗೊತ್ತಾಗಿದೆ. ಜಮೀನೇ ಇಲ್ಲದಿದ್ದರೂ ಬೇರೆ ಯಾರಿಗೂ ಸೇರಿದ ಭೂಮಿಗೆ ಸಂಬಂಧಿಸಿದ ದಾಖಲೆಗಳನ್ನು ಕೊಡುವ ಪ್ರಮೇಯ ಇರಲಿಲ್ಲ.

ಬೃಂದಾವನ್ ಪ್ರಾಪರ್ಟಿಯ ಮೇಲೆ ವಂಚನೆ ಆರೋಪ ಕೇಳಿ ಬರುತ್ತಿರುವುದು ಇತ್ತೀಚೆಗೆ ಮಾತ್ರವಲ್ಲ. 2019 ರಿಂದಲೂ ಬೃಂದಾವನ್ ಪ್ರಾಪರ್ಟಿ ಮೇಲೆ ವಂಚನೆ ದೂರುಗಳು ಕೇಳಿ ಬಂದಿದ್ದವು. ಆರಂಭದಲ್ಲಿ ರಾಜಾಜಿನಗರ ಪೊಲೀಸರೇ ದೂರು ಸ್ವೀಕರಿಸುತ್ತಿರಲಿಲ್ಲ. ಇದೀಗ ಸಾಮೂಹಿಕವಾಗಿ ಜನರು ಸೇರಿ ಪ್ರತಿಭಟನೆ ಮಾಡಿದ್ದರಿಂದ ಅಕ್ರಮದ ಬಗ್ಗೆ ಪೊಲೀಸರು ತಲೆ ಕೆಡಿಸಿಕೊಂಡಿದ್ದಾರೆ.

ಈ ಹಿಂದೆ ಪೊಲೀಸರು ನಿರ್ಲಕ್ಷ್ಯ ಮಾಡಿದ್ದರಿಂದ ಕೆಲವರು ಕೋರ್ಟ್ ಮೊರೆ ಹೋಗಿ ಖಾಸಗಿ ದೂರು ಸಲ್ಲಿಸಿದ್ದರು. ತನ್ನ ಬಳಿ ಎಷ್ಟು ಪ್ರಾಪರ್ಟಿಯಿದೆ, ಎಷ್ಟು ಮಂದಿಗೆ ನಿವೇಶನ ಕೊಡಬೇಕು. ಎಷ್ಟು ಎಕರೆಯನ್ನು ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸಲಾಗಿದೆ ಎಂಬುದರ ಬಗ್ಗೆ ಸಣ್ಣ ಮಾಹಿತಿ ಕೂಡ ದಿನೇಶ್ ಗೌಡ ಹಂಚಿಕೊಂಡಿಲ್ಲ. ಹೀಗಾಗಿ ತನಿಖೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಈ ನಾಟಕ ಆಡಿದನೇ ಎಂಬ ಅನುಮಾನ ವ್ಯಕ್ತವಾಗಿದೆ.

ಆಸ್ತಿ ಜಪ್ತಿಗೆ ಸಿದ್ಧತೆ :
ಈವರೆಗೂ ಸುಮಾರು ಐದು ನೂರಕ್ಕೂ ಹೆಚ್ಚು ಮಂದಿ ಬೃಂದಾವನ್ ಪ್ರಾಪರ್ಟಿ ವಿರುದ್ಧ ದೂರು ನೀಡಿದ್ದಾರೆ. ದಿನೇಶ್ ಗೌಡನ ವಿರುದ್ಧ ದೂರು ನೀಡಿದರೆ ಆತ ಹಣ ವಾಪಸು ನೀಡಲ್ಲ ಎಂಬ ಕಾರಣಕ್ಕೆ ದೂರು ನೀಡದೇ ಹಿಂದೇಟು ಹಾಕಿದ್ದಾರೆ. ದಿನೇಶ್ ಗೌಡನ ವಂಚನೆ ಕುರಿತು ತನಿಖೆ ನಡೆಸಿ ಆತನ ಆಸ್ತಿಯನ್ನು ಸಂಪೂರ್ಣ ಜಪ್ತಿ ಮಾಡಿಕೊಂಡು ಹರಾಜು ಹಾಕಿ ಬರುವ ಹಣವನ್ನು ಮೋಸ ಹೋದವರಿಗೆ ನೀಡಲು ಪೊಲೀಸರು ಮುಂದಾಗಿದ್ದಾರೆ.
-
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ











Click it and Unblock the Notifications