ಸಿಎಂ ಆಗುವ ಮೊದಲೇ ಕುಮಾರಸ್ವಾಮಿ ಆದೇಶಗಳಿಗೆ ತಡೆ ನೀಡಿದ ಯಡಿಯೂರಪ್ಪ
ಬೆಂಗಳೂರು, ಜುಲೈ 26: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುವ ಮುನ್ನವೇ ಬಿಎಸ್ ಯಡಿಯೂರಪ್ಪ ಅವರು ಸರ್ಕಾರದ ಆಡಳಿತಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ.
ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರವು ಈ ತಿಂಗಳ ಆರಂಭದಿಂದ ಅನುಮೋದನೆ ನೀಡಿರುವ ಕಾಮಗಾರಿಗಳು, ವರ್ಗಾವಣೆ ಆದೇಶಗಳಿಗೆ ತಡೆ ನೀಡುವಂತೆ ಯಡಿಯೂರಪ್ಪ ನಿರ್ದೇಶಿಸಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರಿಗೆ ಪತ್ರ ಬರೆದಿರುವ ಯಡಿಯೂರಪ್ಪ ಅವರು, ಜುಲೈ ತಿಂಗಳಿನಲ್ಲಿ ಸರ್ಕಾರ ನೀಡಿರುವ ವಿವಿಧ ಮಹತ್ವದ ಆದೇಶಗಳಿಗೆ ಕೂಡಲೇ ತಡೆ ನೀಡುವಂತೆ ಸೂಚಿಸಿದ್ದಾರೆ.
ಯಡಿಯೂರಪ್ಪ ಅವರ ಸೂಚನೆಯನ್ನು ಈಗಾಗಲೇ ಜಾರಿಗೆ ತಂದಿರುವ ಮುಖ್ಯಕಾರ್ಯದರ್ಶಿ ಟಿಎಂ ವಿಜಯಭಾಸ್ಕರ್ ಅವರು ಎಲ್ಲ ಇಲಾಖೆಗಳಿಗೂ ಈ ಸಂಬಂಧ ಸೂಚನೆ ಹೊರಡಿಸಿದ್ದಾರೆ.

ಹೊಸ ಕಾಮಗಾರಿಗಳನ್ನು ಜಾರಿಗೊಳಿಸುವಂತಿಲ್ಲ
'ಮಾನ್ಯ ನಿಯೋಜಿತ ಮುಖ್ಯಮಂತ್ರಿಗಳು ಜುಲೈ 2019ರ ತಿಂಗಳಿನಲ್ಲಿ ಅನುಮೋದನೆಗೊಂಡಿರುವ ಎಲ್ಲ ಹೊಸ ಕಾಮಗಾರಿಗಳಿಗೆ ಸಂಬಂಧಿಸಿದ ಆದೇಶಗಳನ್ನು ತಕ್ಷಣವೇ ಮುಂದಿನ ಪರಿಶೀಲನೆ ಆಗುವವರೆಗೆ ತಡೆ ಹಿಡಿಯುವಂತೆ ಸರ್ಕಾರದ ಎಲ್ಲ ಇಲಾಖೆಗಳ ಅಪರ ಕಾರ್ಯದರ್ಶಿ/ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲು ಸೂಚನೆ ನೀಡಿರುತ್ತಾರೆ' ಎಂದು ಪತ್ರ ಬರೆದಿದ್ದಾರೆ.

ವರ್ಗಾವಣೆ ಆದೇಶ ಜಾರಿಗೆ ತಡೆ
'ಮಾನ್ಯ ನಿಯೋಜಿತ ಮುಖ್ಯಮಂತ್ರಿಗಳು, ಜುಲೈ 2019ರ ಮಾಹೆಯಲ್ಲಿ ವರ್ಗಾವಣೆಗೆ ಸಂಬಂಧಿಸಿದ ಪ್ರಸ್ತಾವಗಳ ಮೇಲೆ ಅನುಮೋದನೆಗೊಂಡು, ಜಾರಿಯಾಗದೇ ಇರುವ ಆದೇಶಗಳನ್ನು ಮುಂದಿನ ಆದೇಶದವರೆಗೆ ಜಾರಿ ಮಾಡದಂತೆ ಹಾಗೂ ಈಗಾಗಲೇ ಹೊರಡಿಸಿರುವ, ಆದರೆ ಚಾಲನೆಗೊಳ್ಳದಿರುವ ವರ್ಗಾವಣೆ ಸಂಬಂಧಿತ ಪ್ರಸ್ತಾವಗಳ ಮೇಲಿನ ಆದೇಶಗಳನ್ನು ಮುಂದಿನ ಆದೇಶದವರೆಗೆ ಚಾಲನೆಗೊಳಿಸದಂತೆ ಸೂಚಿಸಿದ್ದಾರೆ' ಎಂದು ಅವರು ಎಲ್ಲ ಇಲಾಖೆಗಳಿಗೆ ಪತ್ರಬರೆದಿದ್ದಾರೆ.

2 ಸಾವಿರಕ್ಕೂ ಹೆಚ್ಚು ವರ್ಗಾವಣೆ, ಕಾಮಗಾರಿ
ಜುಲೈ ತಿಂಗಳಿನಲ್ಲಿ ಎರಡು ಸಾವಿರಕ್ಕೂ ಹೆಚ್ಚು ವರ್ಗಾವಣೆಗಳು, ಹೊಸ ಕಾಮಗಾರಿಗಳು, ಬಡ್ತಿ ಮುಂತಾದವುಗಳಿಗೆ ಕುಮಾರಸ್ವಾಮಿ ಅವರ ಸರ್ಕಾರ ಅನುಮೋದನೆ ನಡೆದಿತ್ತು. ಮುಖ್ಯವಾಗಿ ಲೋಕೋಪಯೋಗಿ ಸಚಿವರಾಗಿದ್ದ ಎಚ್ ಡಿ ರೇವಣ್ಣ ಅವರ ಇಲಾಖೆಯಲ್ಲಿ ಹೆಚ್ಚಿನ ವರ್ಗಾವಣೆ ಮತ್ತು ಬಡ್ತಿಗಳನ್ನು ತರಾತುರಿಯಲ್ಲಿ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈಗ ಅವೆಲ್ಲದಕ್ಕೂ ತಡೆ ಬಿದ್ದಿದೆ ಎನ್ನಲಾಗಿದೆ.

ಯೋಜನೆಗಳ ಕಥೆ ಏನು?
ಯಡಿಯೂರಪ್ಪ ಅವರು ಪ್ರಮಾಣವಚನ ಸ್ವೀಕರಿಸುವ ಮುನ್ನವೇ ಹಿಂದಿನ ಸರ್ಕಾರದ ಅನೇಕ ಆದೇಶಗಳನ್ನು ತಡೆಹಿಡಿದಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅವರು ಇವುಗಳ ಜಾರಿ ಅಥವಾ ರದ್ದು ಕುರಿತು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಸಮ್ಮಿಶ್ರ ಸರ್ಕಾರವು ಸಿದ್ದರಾಮಯ್ಯ ಅವರ ಸರ್ಕಾರದ ಯೋಜನೆಗಳನ್ನು ಸ್ಥಗಿತಗೊಳಿಸದೆ ಮುಂದುವರಿಸಿತ್ತು. ಯಡಿಯೂರಪ್ಪ ಅವರ ಸರ್ಕಾರ ಅವುಗಳನ್ನು ಮುಂದುವರಿಸಲಿದೆಯೇ ಇಲ್ಲವೇ ಎಂಬ ಕುತೂಹಲ ಉಂಟಾಗಿದೆ. ಇಂದಿರಾ ಕ್ಯಾಂಟೀನ್, ಅನ್ನಭಾಗ್ಯ, ಶಾದಿ ಭಾಗ್ಯ ಸೇರಿದಂತೆ ಅನೇಕ ಯೋಜನೆಗಳ ವಿರುದ್ಧ ಬಿಜೆಪಿ ನಿರಂತರ ಟೀಕೆಗಳನ್ನು ವ್ಯಕ್ತಪಡಿಸಿತ್ತು. ಇವುಗಳಿಗೂ ಬಿಎಸ್ವೈ ಅಂತ್ಯ ಹಾಡಲಿದ್ದಾರೆಯೇ ಇಲ್ಲವೇ ಎಂಬುದನ್ನು ಕಾದುನೋಡಬೇಕು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications